ಪ್ರಾಕೃತಿಕ ವಿಕೋಪ: ಪರಿಹಾರ ಮೊತ್ತ ಅರೆಕಾಸಿನ ಮಜ್ಜಿಗೆ ! 


Team Udayavani, Jun 4, 2018, 8:24 AM IST

22.jpg

ಮಂಗಳೂರು: ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡು ಲಕ್ಷಾಂತರ ರೂ. ನಷ್ಟ ಅನುಭವಿಸಿ ದಿಕ್ಕೆಟ್ಟು ಕುಳಿತಿರುವವರಿಗೆ ಸರಕಾರ ನೀಡುವ ಪರಿಹಾರ ಧನ ನೋಡಿದರೆ ಮತ್ತಷ್ಟು ಆಘಾತ ಖಚಿತ. ಸರಕಾರದ ಪರಿಹಾರ ಮೊತ್ತ ಅಷ್ಟು ಜುಜುಬಿ!

ಪ್ರಾಕೃತಿಕ ವಿಕೋಪದಿಂದ ಪಕ್ಕಾ ಮನೆ ಅಥವಾ ಕಚ್ಚಾ ಮನೆ ಸಂಪೂರ್ಣ ಹಾನಿಗೀಡಾದರೆ ಅಥವಾ ತೀವ್ರ ಹಾನಿಗೀಡಾದರೆ ಈಗ 95,100 ರೂ. ಪರಿಹಾರ ಸಿಗುತ್ತದೆ. ಗುಡ್ಡಗಾಡು ಪ್ರದೇಶದಲ್ಲಾದರೆ 1,01,900 ರೂ. ಪರಿಹಾರ ಸಿಗುತ್ತದೆ. ಪಕ್ಕಾ ಮನೆ ಶೇ. 15ರಷ್ಟು ಹಾನಿಯಾದರೆ 5,200 ರೂ., ಕಚ್ಚಾ ಮನೆಗಾದರೆ 3,200 ರೂ. ಗುಡಿಸಲು ಹಾನಿಯಾದರೆ 4,100 ರೂ. ಹಾಗೂ ಜಾನುವಾರು ಹಟ್ಟಿಗೆ ಹಾನಿಯಾದರೆ 2,100 ರೂ. ಇದು ಸರಕಾರದಿಂದ ಸಿಗುವ ಪರಿಹಾರ.

ಹಿಂದೆ ಲಭಿಸುತ್ತಿದ್ದ ಪರಿಹಾರ
ಈ ಹಿಂದೆ ಸಂಪೂರ್ಣ ಹಾನಿಗೊಳಗಾದ ಪಕ್ಕಾ ಮನೆಗೆ 35,000 ರೂ. ಮಾತ್ರ ಪರಿಹಾರ ಸಿಗುತ್ತಿತ್ತು. ಆಗ ಕಚ್ಚಾ ಮನೆಗಳಿಗೆ 15,000 ರೂ. ಮಾತ್ರ ದೊರೆಯುತ್ತಿತ್ತು. ಹೊಸ ಮನೆಗೆ ಅಡಿಪಾಯ ಹಾಕಲು ಕೂಡ ಈ ಪರಿಹಾರ ಮೊತ್ತ ಸಾಲುತ್ತಿರಲಿಲ್ಲ. ತೀವ್ರ ತರದ ಹಾನಿಗೆ ಪಕ್ಕಾ ಮನೆಗಳಿಗೆ ನೀಡುವ ಮೊತ್ತ 6,300 ರೂ., ಕಚ್ಚಾ ಮನೆಗಳಿಗೆ 3,200 ರೂ., ಪಕ್ಕಾ ಹಾಗೂ ಭಾಗಶಃ ಹಾನಿಯಾದರೆ 1,900 ರೂ., ಗುಡಿಸಲು ನಾಶವಾದರೆ 2,500 ರೂ. ಹಾಗೂ ಮನೆಗೆ ಹೊಂದಿಕೊಂಡಂತೆ ಇರುವ ಹಟ್ಟಿ ನಾಶವಾದರೆ 1,250 ರೂ. ಇತ್ತು. ಪರಿಹಾರ ಈಗ ಸ್ವಲ್ಪ ಏರಿಕೆಯಾಗಿದೆಯಾದರೂ ಇನ್ನೂ ಜುಜುಬಿ ಅನ್ನಿಸುವಷ್ಟೇ ಇದೆ.

ನಿರಾಶ್ರಿತ ಕುಟುಂಬಕ್ಕೆ ಈ ಪರಿಹಾರ ಮೊತ್ತ ಈಗಿನ ಬೆಲೆ ಏರಿಕೆಯ ಸಂದರ್ಭ ಯಾವುದಕ್ಕೂ ಸಾಲದು. ಮನೆ ಪೂರ್ಣವಾಗಿ ನಿರ್ಮಾಣ ಮಾಡುವುದಿದ್ದಲ್ಲಿ ಲಕ್ಷಾಂತರ ರೂ. ವ್ಯಯಿಸಬೇಕಾಗುತ್ತದೆ. ಅದರಲ್ಲೂ ನಗರ ವ್ಯಾಪ್ತಿಯಲ್ಲಿ ಬಹಳಷ್ಟು ವೆಚ್ಚ ಮಾಡಬೇಕಾಗುತ್ತದೆ. ಆದರೆ ಈಗ ಮಳೆಯಿಂದ ಮನೆ ಕಳೆದುಕೊಂಡವರು ಸರಕಾರದಿಂದ ಸಿಗುವ 95,100 ರೂ. ಪಡೆದು ಹೊಸ ಮನೆ ಕಟ್ಟುವುದಾದರೂ ಹೇಗೆ ಎಂಬ ಪ್ರಶ್ನೆ ಎದುರಾಗಿದೆ.

ಪರಿಹಾರ ಹಣ ಖರ್ಚಿಗೇ ಸರಿ!
ಪ್ರಾಕೃತಿಕ ವಿಕೋಪದ ಬಹುತೇಕ ಪ್ರಕರಣಗಳಲ್ಲಿ ಪರಿಹಾರ ಪ್ರಮಾಣ ಏರಿಕೆ ಮಾಡಬೇಕು ಎಂಬುದಾಗಿ ನಿರಂತರವಾಗಿ ಮಾಡಿದ ಬೇಡಿಕೆ-ಮನವಿಗಳ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಕೆಲವು ವರ್ಷಗಳ ಹಿಂದೆ ಸ್ವಲ್ಪ ಏರಿಕೆ ಮಾಡಿತ್ತು. ಕೃಷಿ ಹಾನಿ ಸೇರಿದಂತೆ ಕೆಲವು ಪ್ರಕರಣಗಳಲ್ಲಿ ದೊರೆಯುವ ಪರಿಹಾರದ ಮೊತ್ತ ಯಾವ ರೀತಿ ಇದೆ ಎಂದರೆ ಅದನ್ನು ಪಡೆಯಲು ಅಷ್ಟೇ ಮೊತ್ತವನ್ನು ಖರ್ಚು ಮಾಡಬೇಕಾಗುತ್ತದೆ.

ಪರಿಹಾರವೆಂಬ ಪ್ರಹಸನ !
ಪ್ರಾಕೃತಿಕ ವಿಕೋಪದ ಬಹುತೇಕ ಪ್ರಕರಣಗಳಲ್ಲಿ ನೀಡುವ ಪರಿಹಾರ ಪ್ರಸ್ತುತ ಒಂದು ಪ್ರಹಸನ ಎಂದರೆ ತಪ್ಪಲ್ಲ. ಮನೆ ಮಠ ಕಳೆದುಕೊಂಡ ಕುಟುಂಬಗಳಿಗೆ ತತ್‌ಕ್ಷಣಕ್ಕೆ ಆಡಳಿತ ವ್ಯವಸ್ಥೆ ಸ್ಪಂದಿಸುತ್ತಿದೆಯಾದರೂ ಆ ಹಣ ಯಾವುದಕ್ಕೂ ಸಾಲುತ್ತಿಲ್ಲ ಎಂಬ ಸಾಮಾನ್ಯ ಪ್ರಜ್ಞೆ  ಖುದ್ದು ಸರಕಾರಕ್ಕೆ ಇಲ್ಲದಾಗಿದೆ. ಪರಿಹಾರವನ್ನು ಹೆಚ್ಚಿಸಬೇಕು ಎಂದು ಜನಪ್ರತಿನಿಧಿಗಳು, ಸಂಘಟನೆಗಳು ನಿರಂತರವಾಗಿ ಸರಕಾರವನ್ನು ಒತ್ತಾಯಿಸುತ್ತಲೇ ಇದ್ದಾರೆ. ಆದರೆ ಪರಿಹಾರ ಮೊತ್ತ ಮಾತ್ರ ಏರಿಯೇ ಇಲ್ಲ.

ಸ್ಥಳೀಯಾಡಳಿತ ಸಂಸ್ಥೆಗಳಿಂದ ಈ ಬಗ್ಗೆ ನಿರ್ಣಯಗಳನ್ನು ಮಾಡಿ ಸರಕಾರಕ್ಕೂ ಕಳುಹಿಸಲಾಗಿದೆ. ಯಾವುದೂ ಫಲ ನೀಡಿಲ್ಲ. ಕೇವಲ ಜುಜುಬಿ ಮೊತ್ತವನ್ನು ಏರಿಸಿ ಸರಕಾರ ಸುಮ್ಮನಾ ಗಿದೆ. ಸರಕಾರ ಪೂರ್ತಿ ಅಲ್ಲದಿದ್ದರೂ ಇಂದಿನ ವಾಸ್ತವ ಸ್ಥಿತಿಗೆ ಅನುಗುಣವಾಗಿ ಸೂಕ್ತ ಪರಿಹಾರ ನೀಡುವ ನಿಟ್ಟಿನಲ್ಲಿ ಮಾನದಂಡವನ್ನು ಮರು ಪರಿಷ್ಕರಿಸಬೇಕಾಗಿದೆ.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.