ದೇಗುಲಗಳಲ್ಲಿ ನವರಾತ್ರಿ ಪೂಜೆ
ರಂಗಪೂಜೆ, ಚಂಡಿಕಾಹೋಮ, ಅನ್ನಸಂತರ್ಪಣೆ
Team Udayavani, Sep 29, 2019, 11:05 PM IST
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಸಮ್ಮುಖದಲ್ಲಿ ಕನ್ನಿಕಾ ಪೂಜೆ ನೆರವೇರಿತು.
ಬೆಳ್ತಂಗಡಿ: ನವರಾತ್ರಿ ಉತ್ಸವದ ಪ್ರಯುಕ್ತ ತಾ|ನ ದೇವಿ ದೇವಸ್ಥಾನ ಹಾಗೂ ಪ್ರಮುಖ ದೇವಸ್ಥಾನಗಳಲ್ಲಿ ರವಿವಾರ ವಿಶೇಷ ಪೂಜೆಗಳು ಜರಗಿದವು.
ಸವಣಾಲು ಶ್ರೀ ದುರ್ಗಾಕಾಳಿಕಾಂಬಾ ಕ್ಷೇತ್ರದಲ್ಲಿ ಬೆಳಗ್ಗೆ ಪ್ರಾರ್ಥನೆ, ಗಣಪತಿ ಹೋಮ, ಚಂಡಿಕಾಹೋಮ ಪೂರ್ಣಾ ಹುತಿ, ಮಧ್ಯಾಹ್ನದ ಪೂಜೆ, ಅನ್ನಸಂತ ರ್ಪಣೆ ನೆರವೇರಿತು. ಸಂಜೆ ಸಪ್ತಶತಿ ಪಾರಾಯಣ, ರಾತ್ರಿ ರಂಗಪೂಜೆ, ಮಂಗಳಾರತಿ, ಬಳಿಕ ಪ್ರಸಾದ ವಿತರಿಸ ಲಾಯಿತು. ಆಡಳಿತ ಸಮಿತಿಯ ಅಧ್ಯಕ್ಷರು, ಸದಸ್ಯರು, ಊರ-ಪರವೂರ ಭಕ್ತರು ಪಾಲ್ಗೊಂಡರು.
ಮಿತ್ತಬಾಗಿಲು ಗ್ರಾಮದ ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಮಧ್ಯಾಹ್ನ ಕಲ್ಪೋಕ್ತ ಪೂಜೆ, ಬಳಿಕ ಸಪ್ತಶತಿ ಪಾರಾಯಣ, ಮಹಾಪೂಜೆ, ಸಂಜೆ ಭಜನೆ, ರಂಗಪೂಜೆ, ನವದುರ್ಗೆ ಯರ ಆರಾಧನೆ ಜರಗಿತು.
ಮಿತ್ತಬಾಗಿಲು ಗ್ರಾಮದ ಕೊಲ್ಲಿ ಶ್ರೀ ದುರ್ಗಾದೇವಿ ಕ್ಷೇತ್ರ, ನ್ಯಾಯತರ್ಪು ಗ್ರಾಮದ ನಾಳ ಶ್ರೀ ದುರ್ಗಾ ಪರಮೇಶ್ವರೀ ಕ್ಷೇತ್ರ, ಲಾೖಲ ಓಡದಕರಿಯ ಶ್ರೀ ದುರ್ಗಾ ಪರಮೇಶ್ವರೀ ಕ್ಷೇತ್ರ, ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ನವರಾತ್ರಿ ವಿಶೇಷ ಪೂಜೆ ಜರಗಿತು.
ಮೇಲಂತಬೆಟ್ಟು ಶ್ರೀ ದೇವೀ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ಬ್ರಹ್ಮಶ್ರೀ ವೇ| ಮೂ| ಶ್ರೀಪಾದ ಪಾಂಗಣ್ಣಾಯ ತಂತ್ರಿಯವರ ನೇತೃತ್ವದಲ್ಲಿ ಬೆಳಗ್ಗೆ 6ರಿಂದ ವಿಶೇಷ ಪೂಜೆ ಜರಗಿತು.
ಶ್ರೀಕ್ಷೇತ್ರ ಧರ್ಮಸ್ಥಳ
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನವರಾತ್ರಿ ಉತ್ಸವ ಪ್ರಯುಕ್ತ ಬೆಳಗ್ಗೆ ಎಂದಿನಂತೆ ದೇವರಿಗೆ ಅಭಿಷೇಕ, ಪೂಜೆ ಜರಗಿತು.
ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಸಮ್ಮುಖದಲ್ಲಿ ಕನ್ನಿಕಾ ಪೂಜೆ ನೆರವೇರಿತು. ಪಾರ್ವತಿ ಅಮ್ಮನವರ ಉತ್ಸವ, ಸಂಜೆ ಬಲಿ ಉತ್ಸವ, ಕಟ್ಟೆಪೂಜೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
MUST WATCH
ಹೊಸ ಸೇರ್ಪಡೆ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
Rural Life: ಗ್ರಾಮೀಣ ಬದುಕಿನ ಮೆಲುಕು