ಕೆಸರುಮಯ ಹಳ್ಳ-ಗುಂಡಿ ರಸ್ತೆಗೆ ಶೀಘ್ರ ಬೇಕಿದೆ ಕಾಯಕಲ್ಪ

ಬೆಳ್ತಂಗಡಿ: ಹಳ್ಳಿ ಅಭಿವೃದ್ಧಿಗೆ ಗ್ರಾಮೀಣ ರಸ್ತೆ ತೊಡಕು

Team Udayavani, Jul 16, 2019, 5:18 AM IST

keasumaya

ಬೆಳ್ತಂಗಡಿ: ನಾಗರಿಕತೆ ಎಷ್ಟೇ ಮುಂದುವರಿದಿದ್ದರೂ ಇಂದಿಗೂ ವಿದ್ಯುತ್‌, ರಸ್ತೆ ಸಹಿತ ಮೂಲ ಸೌಕರ್ಯಗಳಿಂದ ವಂಚಿತವಾದ ಅದೆಷ್ಟೋ ಕುಟುಂಬಗಳು ಬೆಳ್ತಂಗಡಿ ತಾಲೂಕಿನಲ್ಲಿ ಕತ್ತಲ ಹಾದಿಯಲ್ಲಿ ಜೀವನ ಸಾಗಿಸುತ್ತಿದೆ.

ನಾವೂರು ಗ್ರಾಮದ ಕೈಕಂಬದಿಂದ ನಾಲ್ಕೈದು ಕಿ.ಮೀ. ದೂರ ಸಾಗಿದರೆ ಕುದೊRàಳಿ ಎಂಬ ಪ್ರದೇಶ ಸಿಗುತ್ತದೆ. ಅಲ್ಲಿಂದ ಮುಂದೆ ಭಜನ ಮಂದಿರ, ಪುಲಿತ್ತಡಿ, ಅಲ್ಯ, ಮಲ್ಲ, ಮುತ್ತಾಜೆ, ಎರ್ಮೆಲೆ, ಮಂಜಳ ಪ್ರದೇಶದಲ್ಲಿ ಸುಮಾರು 25 ಕುಟುಂಬ ಗಳು ಕಾಡಿನ ನಡುವೆ ವಾಸಿಸುತ್ತಿವೆ. 250ಕ್ಕೂ ಹೆಚ್ಚು ಜನರಿರುವ ಈ ಕುಟುಂಬಗಳು ಮೂಲ ಸೌಕರ್ಯಕ್ಕಾಗಿ ಹಾತೊರೆಯುತ್ತಿರುವುದು ಇಂದು ನಿನ್ನೆಯ ಕಥೆಯಲ್ಲ; ಶತಮಾನಗಳಂಚಿನ ವ್ಯಥೆ.

ಅನೇಕ ಸರಕಾರಗಳು, ಶಾಸಕರು, ಸಚಿವರು ಬಂದು ಹೋದರೂ ಇವರ ಸಮಸ್ಯೆ ಪರಿಹರಿಸುವಲ್ಲಿ ಮುತುವರ್ಜಿ ತೋರಿಲ್ಲ. ತಾಲೂಕು ಕೇಂದ್ರದಿಂದ ಕೇವಲ 20 ಕಿ.ಮೀ. ದೂರದ ಈ ಪ್ರದೇಶಗಳನ್ನು ಸಂಪರ್ಕಿಸುವ ಸುಮಾರು 12 ಕಿ.ಮೀ. ದೂರದ ರಸ್ತೆ ಇನ್ನೂ ಡಾಮರು ಕಂಡಿಲ್ಲ. ಕಲ್ಲು, ಮರದ ಬೇರು, ಗುಂಡಿ ಹೊಂದಿರುವ ರಸ್ತೆಯೇ ಇವರ ಪಾಲಿಗೆ ರಾಷ್ಟ್ರೀಯ ಹೆದ್ದಾರಿ. ವಿದ್ಯುತ್‌ ಸಂಪರ್ಕವಂತೂ ಕನಸಿನ ಮಾತು. ಶತಮಾನಗಳಿಂದಲೂ ಚಿಮಿಣಿ ದೀಪವೇ ಇವರಿಗೆ ವಿದ್ಯುತ್‌ ಸಂಪರ್ಕ. ಹಳ್ಳ – ತೊರೆಗಳನ್ನು ದಾಟಲು ಅಡಿಕೆ ಮರ, ಕಾಡು ಮರಗಳಿಂದ ನಿರ್ಮಾಣಗೊಂಡ ಪಾಲ (ಪಾಪು) ಇವರ ಪಾಲಿಗೆ ಸುಸಜ್ಜಿತ ಸೇತುವೆ.

ಪರಾರಿಗುಡ್ಡೆಗೆ ಬೇಕಿದೆ ಅನುದಾನ
ಮಲವಂತಿಗೆ ಗ್ರಾ.ಪಂ. ವ್ಯಾಪ್ತಿಗೆ ಬರುವ ಪರಂಬೇರಿನಲ್ಲಿ 25 ಗಿರಿಜನ ಕುಟುಂಬ ವಾಸವಾಗಿದ್ದು ದೈನಂದಿನ ಜೀವನಕ್ಕೆ ಹರಸಾಹಸ ಪಡಬೇಕಾಗಿದೆ. ಮಲವಂತಿಗೆ ಪಂ.ನಿಂದ 3 ಕಿ.ಮೀ. ದೂರದಲ್ಲಿರುವ ಕಾಲನಿ ರಸ್ತೆ ಸ್ಥಿತಿ ಅಯೋಮಯ. ರಸ್ತೆ ಸಂಪೂರ್ಣ ಕೆಸರು ಮತ್ತು ಹೊಂಡದಿಂದ ಕೂಡಿದ್ದು, ವಾಹನ ಗಳು, ಶಾಲಾ ಮಕ್ಕಳು ದಿನಂಪ್ರತಿ 25 ಕಿ.ಮೀ. ಸಾಗಿ ಉಜಿರೆಗೆ ಹೋಗಿ ಬರಬೇಕಾಗಿದೆ.

ಅನಾರೋಗ್ಯಕ್ಕೆ ತುತ್ತಾದಲ್ಲಿ ಆಸ್ಪತ್ರೆಗೆ ತೆರಳಲು ನಂದಿಕಾಡು ಹೊಳೆ ದಾಟಿ ಬರಬೇಕು. ಮಳೆಗಾಲದಲ್ಲಿ ಗಂಟೆಗಟ್ಟಲೆ ನಿಂತು ನೀರು ಕಡಿಮೆಯಾದ ಮೇಲೆ ಬರಬೇಕಾಗುತ್ತದೆ. ಈ ಕುರಿತು ಐಟಿಡಿಪಿ, ಸಂಸದರು, ಸರಕಾರದ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.

ಮುಷ್ಕರದ ಎಚ್ಚರಿಕೆ
ಗಿರಿಜನರು ಕಚೇರಿ ಅಲೆದಾಡಿ ಸುಸ್ತಾಗಿದ್ದಾರೆ. ಕುಂದುಕೊರತೆ ಸಭೆಗಳು ಫಲ ನೀಡಿಲ್ಲ. ಸಮಸ್ಯೆಗೆ ಸ್ಪಂದಿಸದಿದ್ದರೆ ಸ್ವಾತಂತ್ರÂ ದಿನಾಚರಣೆಯಂದು ತಹಶೀಲ್ದಾರ್‌ ಕಚೇರಿ ಮುಂದೆ ಕಪ್ಪು ಬಾವುಟ ಹಿಡಿದು ಮುಷ್ಕರ ಕೈಗೊಳ್ಳುವುದಾಗಿ ನಿರ್ಧರಿಸಿದ್ದೇವೆ ಎಂದು ಕಾಲನಿ ನಿವಾಸಿಗಳು ಎಚ್ಚರಿಸಿದ್ದಾರೆ.

ಇಳಂತಿಲ ಗ್ರಾಮದ ಹಾರೆಕೆರೆ
ಇಲ್ಲಿನ ಹಾರೆಕೆರೆ ಸುದೆಪಿಲ ರಸ್ತೆ ಕೆಸರುಮಯ ವಾಗಿದ್ದು, ಬೇಸಗೆಯಲ್ಲಿ ಧೂಳು, ಮಳೆಗಾಲದಲ್ಲಿ ಕೆಸರಿನ ಕೂಪವಾಗಿ ನಿರ್ಮಾಣವಾಗುತ್ತಿದೆ. ಪಂಚಾಯತ್‌ ಅನುದಾನದಿಂದ ಕಳೆದ 5 ವರ್ಷಗಳಿಂದ ಕಾಮಗಾರಿ ಮಾಡಿದ್ದೇವೆ ಎಂದು ಪಂಚಾಯತ್‌ ಅಧ್ಯಕ್ಷರು ಪ್ರತಿಕ್ರಿಯಿಸುತ್ತಾರೆ. ಆದರೆ ಕೆಲಸ ನಡೆದಿರುವ ಕುರಿತು ಮಾಹಿತಿ ಇಲ್ಲ.

ಡಾಮರು ರಸ್ತೆಗೆ ಊರವರು ಪ್ರತಿ ಗ್ರಾಮ ಪಂಚಾಯತ್‌ ಸಭೆಯಲ್ಲಿ ಮನವಿ ನೀಡಿದರೂ ಯಾವುದೇ ಪ್ರಯೋಜನವಿಲ್ಲ. ಸುಮಾರು 25 ಮನೆಗಳಿರುವ ಈ ಪ್ರದೇಶದಲ್ಲಿ 200ಕ್ಕೂ ಹೆಚ್ಚು ಮಂದಿ ವಾಸವಿದ್ದಾರೆ. 4 ಕಡೆ ಮೋರಿ ಕಾಮಗಾರಿ ನಡೆಸಿದೆ, ಅಲ್ಪಸ್ವಲ್ಪ ಹಾಕಿರುವ ಜಲ್ಲಿ ಮಳೆಗಾಲದಲ್ಲಿ ಕಣಿ ಸೇರಿದೆ. ಇತ್ತೀಚೆಗೆ ಇದೇ ಭಾಗದ ಕಾಯರ್ಪಾಡಿ- ಊಂತನಾಜೆ ರಸ್ತೆ ನಿರ್ಮಾಣಕ್ಕೆ ಶಾಸಕರು ಗುದ್ದಲಿ ಪೂಜೆ ನೆರವೇರಿಸಿದ್ದರು.

ರಸ್ತೆ ನಿರ್ಮಾಣಕ್ಕೆ ಕ್ರಮ
ಈ ಹಿಂದೆ 20 ಲಕ್ಷ ರೂ. ಅನುದಾನದಲ್ಲಿ 3 ಕಿ.ಮೀ. ರಸ್ತೆ ನಿರ್ಮಿಸಲಾಗಿತ್ತು. ಜಿ.ಪಂ. ಸದಸ್ಯರು ಅನುದಾನ ಮೀಸಲಿರಿಸುವುದಾಗಿ ಭರವಸೆ ನೀಡಿದ್ದಾರೆ. ಗ್ರಾಮ ಸಡಕ್‌ ಯೋಜನೆಯಡಿ ಸೇರಿಸುವ ಕುರಿತಾಗಿ ಶಾಸಕರು ಭರವಸೆ ನೀಡಿದ್ದಾರೆ. ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು.
– ಭಾಸ್ಕರ್‌ ಡಿ. ಅಧ್ಯಕ್ಷರು, ಮಲವಂತಿಗೆ ಗ್ರಾ.ಪಂ.

 ಮೂಲ ಸೌಕರ್ಯವಿಲ್ಲ
ಮೂಲ ಸೌಕರ್ಯಗಳಿಗೆ ತಾಲೂಕು ಆಡಳಿತದಿಂದ ಹಿಡಿದು ವಿಧಾನಸೌಧ
ಬಾಗಿಲು ತಟ್ಟಿದ್ದರೂ ಇಂದಿಗೂ ನಮ್ಮ ಊರಿಗೆ ರಸ್ತೆ, ವಿದ್ಯುತ್‌ ದೊರಕಿಲ್ಲ. ಕಾಡಿನ ಮಕ್ಕಳನ್ನು ಸರಕಾರಗಳು ಕಡೆಗಣಿಸಿವೆ. ನಮ್ಮ ಮತ ನಮ್ಮ ಹಕ್ಕು ಇದ್ದಂತೆ ಸವಲತ್ತು ನೀಡಬೇಕಾದದ್ದು ಸರಕಾರದ ಜವಾಬ್ದಾರಿಯಲ್ಲವೇ?
– ಕೊರಗ ಮಲೆಕುಡಿಯ ಎರ್ಮಲೆ ನಾವೂರು

 ತಾತ್ಕಾಲಿಕ ಕ್ರಮ
ಕಳೆದ ಐದು ವರ್ಷಳಿಂದ ಜಿಲ್ಲಾ ಪಂಚಾಯತ್‌ ಅನುದಾನಕ್ಕೆ ಮನವಿ ಸಲ್ಲಿಸಲಾಗಿದೆ. ರಸ್ತೆ ನಿರ್ಮಾಣವಾಗಬೇಕಿದ್ದರಿಂದ ದೊಡ್ಡ ಮೊತ್ತದ ಅನುದಾನ ಮೀಸಲಿರಿಸಬೇಕಾಗುತ್ತದೆ. ಸಮಸ್ಯೆ ಸರಿಪಡಿಸಲು ತಾತ್ಕಾಲಿಕ ಕ್ರಮ ಕೈಗೊಳ್ಳಲಾಗುವುದು.
– ಯು.ಕೆ. ಇಸುಬು ಅಧ್ಯಕ್ಷರು, ಇಳಂತಿಲ ಗ್ರಾ.ಪಂ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.