ಸಮಗ್ರ ಮೀನುಗಾರಿಕೆ ನೀತಿ ಅಗತ್ಯ: ಡಾಣ ಜಿ. ಶಂಕರ್
Team Udayavani, Dec 9, 2019, 5:01 AM IST
ಮಂಗಳೂರು: ಮುಂದಿನ ಪೀಳಿಗೆಗೆ ಮೀನುಗಾರಿಕೆಯನ್ನು ಉಳಿಸುವುದಕ್ಕಾಗಿ ಸಮಗ್ರ ಮೀನುಗಾರಿಕೆ ನೀತಿ ಅಗತ್ಯವಿದೆ ಎಂದು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕ ಡಾ. ಜಿ. ಶಂಕರ್ ಅಭಿಪ್ರಾಯಪಟ್ಟಿದ್ದಾರೆ.
ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಫೆಡರೇಶನ್ ನಿ. ಮಂಗಳೂರು ಮತ್ತು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ, ಮಾಹೆ ಮಣಿಪಾಲ ಇವರ ಸಹಯೋಗದೊಂದಿಗೆ ನಗರದ ಮುಳಿಹಿತ್ಲು ಪ್ರಧಾನ ಕಚೇರಿಯಲ್ಲಿ ಶನಿವಾರ ನಡೆದ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್, ವಿದ್ಯಾರ್ಥಿವೇತನ ಮತ್ತು ಬೋಟ್ ಮಾಲಕರಿಗೆ ಪ್ರೋತ್ಸಾಹ ಉಡುಗೊರೆ ವಿತರಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಎ. ಸುವರ್ಣ ಮಾತನಾಡಿ, ಫೆಡರೇಶನ್ ಹಂತಹಂತವಾಗಿ ಬೆಳೆದಿದ್ದು, 10 ವರ್ಷದಲ್ಲಿ 40 ಕೋಟಿ ರೂ. ಲಾಭ ಗಳಿಸಿದೆ. ಈ ಕಾರ್ಯಕ್ರಮದಲ್ಲಿ ಸುಮಾರು 1 ಕೋಟಿ ರೂ. ಮೊತ್ತದ ವಿದ್ಯಾರ್ಥಿ ವೇತನ, ಪ್ರೋತ್ಸಾಹಕ ಉಡುಗೊರೆ, ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್ಗಳನ್ನು ವಿತರಿಸುತ್ತಿರುವುದಾಗಿ ಹೇಳಿದರು.
ಕಾರ್ಯಕ್ರಮದಲ್ಲಿ ಐಒಸಿ ಮಂಗಳೂರು ಇದರ ಚೀಫ್ ಡಿವಿಜನಲ್ ರಿಟೇಲ್ ಸೇಲ್ಸ್ ಮ್ಯಾನೇಜರ್ ಅನೂಪ್ ಕುಶ್ವಾ, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಮಣಿಪಾಲ್ ಗ್ರೂಪ್ನ ವಿಮಾ ವಿಭಾಗದ ಜನರಲ್ ಮ್ಯಾನೇಜರ್ ಯು.ಎಸ್. ಶ್ರೀಪತಿ, ಮೊಗವೀರ ಯುವ ಸಂಘಟನೆಯ ಅಧ್ಯಕ್ಷ ವಿನಯ್ ಕರ್ಕೇರ, ಪುರುಷೋತ್ತಮ್, ಹರೀಶ್ ಕುಮಾರ್, ಕಾರ್ಪೊರೇಟರ್ಗಳಾದ ರೇವತಿ ಶ್ಯಾಂ ಸುಂದರ್, ಭಾನುಮತಿ ಉಪಸ್ಥಿತರಿದ್ದರು.
1 ಕೋ.ರೂ. ಮೊತ್ತದ ಸೌಲಭ್ಯ ವಿತರಣೆ
ದ.ಕ. ಜಿಲ್ಲಾ ವ್ಯಾಪ್ತಿಯ 16 ಮೀನುಗಾರಿಕೆ ಸದಸ್ಯ ಸಹಕಾರಿ ಸಂಘಗಳ 1,617 ಕುಟುಂಬಗಳ 4,911 ಸದಸ್ಯರಿಗೆ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್, 93 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಮಂಗಳೂರು ಬಂದರು ಶಾಖೆಯ 124 ಬೋಟ್ ಮಾಲಕರಿಗೆ ಪ್ರೋತ್ಸಾಹಕ ಉಡುಗೊರೆ, 28 ಬೋಟ್ ಮಾಲಕರಿಗೆ ಮೊಬಿಲ್ ಆಯಿಲ್ ವಿತರಣೆ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ