ಪೆದಮಲೆ-ಸರಳೀಕಟ್ಟೆ ಶಿಥಿಲ ರಸ್ತೆಗೆ ಬೇಕಿದೆ ಕಾಯಕಲ್ಪ

ಉಭಯ ತಾಲೂಕಿನ ಸಂಪರ್ಕ ಕೊಂಡಿ

Team Udayavani, May 13, 2019, 6:06 AM IST

1205KS

ಹೊಂಡಗಳಿಂದ ತುಂಬಿ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿರುವ ಪೆದಮಲೆ-ಸರಳೀಕಟ್ಟೆ ರಸ್ತೆ.

ಬಂಟ್ವಾಳ : ಗ್ರಾಮೀಣ ಭಾಗದ ಸಂಪರ್ಕ ಕೊಂಡಿ, ಬಂಟ್ವಾಳ ಹಾಗೂ ಬೆಳ್ತಂಗಡಿ ಉಭಯ ತಾಲೂಕುಗಳ ಜನರಿಗೆ ಅತಿ ಅವಶ್ಯಕವೆನಿಸಿರುವ ಪೆದಮಲೆ- ಸರಳೀಕಟ್ಟೆ ರಸ್ತೆ ಹೊಂಡಗಳಿಂದ ತುಂಬಿ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದ್ದು, ಜನತೆ ಎದ್ದುಬಿದ್ದು ಸಾಗಬೇಕಾಗಿದೆ.

ಈ ರಸ್ತೆ ಬೆಳ್ತಂಗಡಿ-ಬಂಟ್ವಾಳ ತಾಲೂಕನ್ನು ಸಂಪರ್ಕಿಸುವ ಜತೆಗೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಭಾಗದ ಜನತೆಗೂ ಅನುಕೂಲ ರಸ್ತೆಯಾಗಿದೆ. ಬೆಳ್ತಂಗಡಿಯ ಪೆದಮಲೆಯಿಂದ ಸರಳೀಕಟ್ಟೆ – ಬಜಾರದ ಮೂಲಕ ಸಾಗಿದರೆ ರಸ್ತೆಯು ಬಂಟ್ವಾಳದ ಅಜಿಲಮೊಗರನ್ನು ಸಂಪರ್ಕಿಸುತ್ತದೆ. ಹೀಗಾಗಿ ಇದು ಗ್ರಾಮೀಣ ಭಾಗದ ಸಂಪರ್ಕ ಕೊಂಡಿ ಎನಿಸಿಕೊಂಡಿದೆ. ರಸ್ತೆಗೆ ಹಲವು ವರ್ಷಗಳ ಇತಿಹಾಸ ವಿದ್ದರೂ ತೇಪೆ ಕಾರ್ಯ ನಡೆಯದೆ ರಸ್ತೆ ಶಿಥಿಲಾವಸ್ಥೆಗೆ ತಲುಪಿದೆ.

ಅಧಿಕಾರಿಗಳಲ್ಲಿ ಕೇಳಿದರೆ ಕಳೆದ ವರ್ಷ ಮುಂಗಡ ಅನುದಾನದ ಮೂಲಕ ಕಾಮಗಾರಿ ನಡೆಸಲಾಗಿದೆ. ಹೀಗಾಗಿ ಈ ಬಾರಿ ಉಳಿದ ರಸ್ತೆಗಳನ್ನು ಅಭಿವೃದ್ಧಿಪಡಿಸಬೇಕಾದ ಹಿನ್ನೆಲೆಯಲ್ಲಿ ಈ ರಸ್ತೆಗೆ ಅನುದಾನ ತರಿಸುವುದು ಅಸಾಧ್ಯವಾಗಿತ್ತು ಎನ್ನುತ್ತಾರೆ.

ಆದರೂ ಅಜಿಲಮೊಗರು ಭಾಗ ದಿಂದ ಸರಳೀಕಟ್ಟೆಯವರೆಗೆ ಈ ಬಾರಿಯೇ ಕಾಮಗಾರಿ ನಡೆದಿದೆ. ಆದರೆ ಸರಳೀಕಟ್ಟೆ- ಪೆದಮಲೆ ಭಾಗದ ರಸ್ತೆಯಲ್ಲಿ ಬೃಹತ್‌ ಹೊಂಡಗಳಿದ್ದು, ಸಂಚಾರ ದುಸ್ತರವೆನಿಸಿದೆ. ಕನಿಷ್ಠ ತೇಪೆ ಕಾರ್ಯವಾದರೂ ನಡೆಯಲಿ ಎಂಬುದು ಗ್ರಾಮಸ್ಥರ ಆಗ್ರಹವಾಗಿದೆ.

ಕಂಡೇವಾ ಸೇತುವೆ…
ಈ ರಸ್ತೆಯು ಪೆದಮಲೆಯಿಂದ ಸಾಗಿ ಬೆಳ್ತಂಗಡಿಯ ಗಡಿಯ ಭಾಗಕ್ಕೆ ಅಂತ್ಯಗೊಳ್ಳುತ್ತಿತ್ತು. ಅಂದರೆ ರಸ್ತೆಗೆ ಅಡ್ಡಲಾಗಿ ಅಜಿಲಮೊಗರಿನ ಸಮೀಪ ನೇತ್ರಾವತಿಯ ಉಪನದಿ ಹಾದು ಹೋಗುವುದರಿಂದ ಬಂಟ್ವಾಳ ತಾಲೂಕಿನ ಸಂಪರ್ಕ ಅಸಾಧ್ಯವಾಗಿತ್ತು. ಕೆಲವು ವರ್ಷಗಳ ಹಿಂದೆ ಉದಯವಾಣಿ ನಡೆಸಿದ ಕಂಡೇವಾ ಸೇತುವೆ ಅಭಿಯಾನದಲ್ಲೂ ಇದು ಪ್ರಸ್ತಾವವಾಗಿತ್ತು. ಗ್ರಾಮಸ್ಥರಿಂದ ಬೇಡಿಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಬೆಳ್ತಂಗಡಿಯ ಅಂದಿನ ಶಾಸಕ ಕೆ. ವಸಂತ ಬಂಗೇರ ಅವರ ಪ್ರಸ್ತಾವನೆ ಮೇರೆಗೆ ಸೇತುವೆಗೆ ಅನುದಾನ ಮಂಜೂರಾಗಿ ಸೇತುವೆ ನಿರ್ಮಾಣಗೊಂಡಿದೆ.

ಸೇತುವೆಗಳೂ ಶಿಥಿಲ
ಈ ರಸ್ತೆಯಲ್ಲಿ ಮೂರ್ನಾಲ್ಕು ಸೇತುವೆಗಳಿದ್ದು, ಹೆಚ್ಚಿನವು ಶಿಥಿಲಾವಸ್ಥೆಗೆ ತಲುಪಿವೆ. ಅದರಲ್ಲೂ ಬನ್ನೆಂಗಳ ಸೇತುವೆ ಅಪಾಯಕಾರಿಯಾಗಿದ್ದು, ಈಗಾಗಲೇ ಸಾಕಷ್ಟು ವಾಹನಗಳು ಸೇತುವೆಯ ಕೆಳಗೆ ಬಿದ್ದ ಘಟನೆಗಳು ನಡೆದಿವೆ. ಹೀಗಾಗಿ ಸೇತುವೆಗೂ ಕಾಯಕಲ್ಪ ನಡೆಯಬೇಕಿದೆ.

 ಕಳೆದ ವರ್ಷ
ತೇಪೆ ಕಾರ್ಯ
ಪೆದಮಲೆ-ಸರಳೀಕಟ್ಟೆ ರಸ್ತೆಯು ತೀರಾ ಹದಗೆಟ್ಟ ಪರಿಣಾಮ ಅನುದಾನ ಇಲ್ಲದಿದ್ದರೂ ಜನರಿಗೆ ತೊಂದರೆಯಾಗದಂತೆ ರಸ್ತೆಗೆ ತೇಪೆ ಕಾರ್ಯ ನಡೆದಿತ್ತು. ಹೀಗಾಗಿ ಈಗ ಮತ್ತೆ ತೇಪೆ ಕಾರ್ಯ ಅಸಾಧ್ಯ. ಮುಂದೆ ಶಾಸಕರ ಜತೆ ಚರ್ಚಿಸಿ ಅನುದಾನಕ್ಕೆ ಪ್ರಯತ್ನಿಸಲಾಗುವುದು.
 - ಚೆನ್ನಪ್ಪ ಮೊಲಿ
ಎಇಇ, ಪಂಚಾಯತ್‌ ರಾಜ್‌ ಇಲಾಖೆ, ಬೆಳ್ತಂಗಡಿ

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.