ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ಅಗತ್ಯ: ಕಸ್ತೂರಿ ಪಂಜ
ಬಡಗ ಎಕ್ಕಾರು ಶಾಲೆ ಉಚಿತ ಪುಸ್ತಕ ವಿತರಣೆ
Team Udayavani, Jun 7, 2019, 6:12 AM IST
ಬಜಪೆ: ಗ್ರಾಮೀಣ ಸರ ಕಾರಿ ಶಾಲೆ ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕು ಎಂಬ ನಿಟ್ಟಿನಲ್ಲಿ ಹಿರಿಯ ರಾದ ಕೃಷ್ಣ ಡಿ. ಶೆಟ್ಟಿಯವರು ಉಚಿತ ಪುಸ್ತಕಗಳನ್ನು ಕಳೆದ 20 ವರ್ಷಗಳಿಂದ ನೀಡುತ್ತಿದ್ದಾರೆ.
ವಿದ್ಯೆಗೆ ನೀಡುವ ಪ್ರೋತ್ಸಾಹ ಮತ್ತು ವಿದ್ಯಾದಾನ ಮಕ್ಕಳ ಬದುಕನ್ನು ರೂಪಿಸುತ್ತದೆ ಎಂದು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ ಹೇಳಿದರು.
ಬಡಗ ಎಕ್ಕಾರಿನ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ ನಡೆದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಈ ಸಂದರ್ಭ ಸುಮಾರು 35 ಸಾವಿರ ರೂಪಾಯಿ ಮೌಲ್ಯದ ಬರೆಯುವ ಪುಸ್ತಕಗಳನ್ನು ದಾನಿಗಳಾದ ಕೃಷ್ಣ ಡಿ.ಶೆಟ್ಟಿ ಅವರು ಶಾಲಾ ಎಲ್ಲ ಮಕ್ಕಳಿಗೆ ವಿತರಿಸಿದರು.
ಉದ್ಯಮಿ ಭುಜಂಗ ಶೆಟ್ಟಿ, ಎಕ್ಕಾರು ಗ್ರಾ.ಪಂ. ಉಪಾಧ್ಯಕ್ಷೆ ಸುಜಾತಾ, ಎಸ್ಡಿ ಎಂಸಿ ಅಧ್ಯಕ್ಷ ಸುರೇಶ್ ಸಫ ಲಿಗ, ಉಪಾಧ್ಯಕ್ಷೆ ಉಮಾವತಿ, ಶಿಕ್ಷಕಿ ಯರಾದ ವಿಜಯಲಕ್ಷ್ಮೀ, ಚಂದ್ರಾ ವತಿ ಮೊದಲಾದವರು ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯಿನಿ ಶಶಿಪ್ರಭಾ ಸ್ವಾಗತಿಸಿದರು. ಶಿಕ್ಷಕಿ ಜಯಂತಿ ಕಾರ್ಯ ಕ್ರಮ ನಿರೂಪಿಸಿದರು. ಶಿಕ್ಷಕಿ ನಳಿನಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ