“ಸುವ್ಯವಸ್ಥೆ ಕಾಪಾಡಲು ತಂತ್ರಜ್ಞಾನ ಸೌಲಭ್ಯ ವಿಸ್ತರಣೆ ಅಗತ್ಯ’


Team Udayavani, Aug 8, 2017, 7:15 AM IST

0708ule5.jpg

ಉಳ್ಳಾಲ: ವಿದೇಶಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಆಧುನಿಕ ತಂತ್ರಜ್ಞಾನ‌ ಬಳಕೆಯಾಗುತ್ತಿದ್ದು, ಭಾರತದಲ್ಲಿಯೂ ಇಂದಿನ ಆಧುನಿಕತೆಗೆ ತಕ್ಕಂತೆ ಪೊಲೀಸರಿಗೆ ಸೂಕ್ತವಾದ ಮೂಲ ಭೂತ ವ್ಯವಸ್ಥೆಗಳನ್ನು ವಿಸ್ತರಿಸಿ, ಸುವ್ಯವಸ್ಥೆ ಕಾಪಾಡಲು ತಂತ್ರಜ್ಞಾನ ಸೌಲಭ್ಯಗಳನ್ನು ವಿಸ್ತರಿಸುವ ಅಗತ್ಯತೆ ಇದೆ ಎಂದು ಮಂಗಳೂರು ವಿವಿ ಕುಲಪತಿ ಪ್ರೊ| ಕೆ. ಭೈರಪ್ಪ ಅಭಿಪ್ರಾಯಪಟ್ಟರು.

ಮಂಗಳೂರು ವಿವಿಯ ಮಂಗಳಾ ಸಭಾಂಗಣದಲ್ಲಿ ರವಿವಾರ ನಡೆದ ಕೊಣಾಜೆ ಪೊಲೀಸ್‌ ಠಾಣೆ ಸುಧಾರಿತ ಗಸ್ತು ವ್ಯವಸ್ಥೆ (ಜನಸ್ನೇಹಿ ಪೊಲೀಸ್‌-ಪ್ರದೇಶಕ್ಕೊಬ್ಬ ಪೊಲೀಸ್‌) ಕಾರ್ಯ ಕ್ರಮದಡಿಯಲ್ಲಿ ಕೊಣಾಜೆ ಠಾಣಾ ವ್ಯಾಪ್ತಿಯ ಸರ್ವ ಗಸ್ತು ಸದಸ್ಯರ‌ ಸಭೆ ಯಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ವಿದೇಶಗಳಲ್ಲಿರುವ ಪೊಲೀಸ್‌ ವ್ಯವಸ್ಥೆಗೆ ಹೋಲಿಸಿದರೆ  ದೇಶದಲ್ಲಿನ ವ್ಯವಸ್ಥೆ ಬಹಳ ಕುಂಠಿತವಾಗಿದೆ. ಇದನ್ನು ಅಭಿವೃದ್ಧಿಪಡಿಸುವಲ್ಲಿ  ಶ್ರಮ ವಹಿಸಬೇಕಿದೆ.  ಜನಸ್ನೇಹಿ ಪೊಲೀಸ್‌ ವ್ಯವಸ್ಥೆಯು ಉತ್ತಮ ಪರಿಕಲ್ಪನೆಯಾ ಗಿದ್ದು, ಪೊಲೀಸರು ಹಾಗೂ ಜನರ ನಡುವೆ ಉತ್ತಮ ಬಾಂಧವ್ಯ ವೃದ್ಧಿಗೊಂಡು ಸಮಾಜದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸಲಿದೆ ಎಂದು ಅವರು ಹೇಳಿದರು.

ಎಸಿಪಿ ರಾಮರಾವ್‌ ಮಾತನಾಡಿ, ಹಿಂದೆ ಜನಸಂಪರ್ಕ ಸಭೆಯ ಮೂಲಕ ಆಯಾ ಪ್ರದೇಶದ ಕಾನೂನು ಸುವ್ಯವಸ್ಥೆ ಕಾಪಾಡಲು ಪ್ರಯತ್ನಿಸಲಾಗುತ್ತಿತ್ತು. ಈಗ ಸುಧಾರಿತ ಗಸ್ತು ವ್ಯವಸ್ಥೆಯಿಂದಾಗಿ ಆಯಾ ಪ್ರದೇಶದ ಜವಾಬ್ದಾರಿ ವಹಿಸಿದ ಪೊಲೀಸರ ಜತೆಗೆ 50 ಜನ ಸ್ಥಳೀಯರ ಸಹಕಾರವೂ ದೊರೆಯಲಿರುವುದರಿಂದ ಪೊಲೀಸ್‌ ವ್ಯವಸ್ಥೆಗೆ ಬಲ ಸಿಕ್ಕಿದಂತಾಗಿದೆ. ಅಲ್ಲದೆ, ಸಮಾಜದಲ್ಲಿ ಎದುರಾಗುವ ಯಾವುದೇ ಸಮಸ್ಯೆಯನ್ನು ಈ ತಂಡದ ಮೂಲಕ ನಿವಾರಿಸಿಕೊಳ್ಳಲು ಬಹಳಷ್ಟು ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಪೊಲೀಸರೊಂದಿಗೆ ಕೈ ಜೋಡಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕೆಂದು ಹೇಳಿದರು.
ಕೇಂದ್ರ ಸರಕಾರದ ಯೋಜನೆಯಂತೆ ಮಂಗಳೂರು ಸ್ಮಾರ್ಟ್‌ ಸಿಟಿಗೆ ಆಯ್ಕೆ ಯಾಗಿರುವುದರಿಂದ  ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಸಿ.ಸಿ. ಟಿವಿಯನ್ನು ಅಳವಡಿಸುವ ಭರವಸೆ ಸಿಕ್ಕಿದೆ. ಈಗಾಗಲೇ ಇಲಾಖೆಯಿಂದ ಕೆಮರಾ ಅಳವಡಿಸುವ ಪ್ರದೇಶಗಳ ಕುರಿತು ಮಾಹಿತಿಯನ್ನು ಸಂಗ್ರಹಿಸಲಾಗಿದೆ ಎಂದರು.

ಸಾರ್ವಜನಿಕ ಹಿತಾಸಕ್ತಿಯಿಂದ ಖಾಸಗಿ ಸಂಸ್ಥೆಗಳು  ಆಯಾಯ ಪ್ರದೇಶಕ್ಕೆ ಸಿಸಿಟಿವಿಯನ್ನು ಅಳವಡಿಸುವಂತೆ ಇಲಾಖೆಯ ವತಿಯಿಂದ ಮನವಿ ಮಾಡಲಾಗುವುದು ಎಂದು ಅವರು ತಿಳಿಸಿದರು.

ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆಯುವವ ವಿರುದ್ಧ ಕಠಿಣ ಕ್ರಮ, ಬಸ್ಸುಗಳು ನಡು ರಸ್ತೆಯಲ್ಲೇ ನಿಂತು ಜನರನ್ನು ಹತ್ತಿಸುವ ವಿಚಾರ, ಬಸ್‌ ಸಿಬಂದಿ ಅಶ್ಲೀಲ ಪದ ಬಳಸುವ ವಿಚಾರ, ಪಂಪ್‌ವೆಲ್‌ ಬಳಿಕ ಬೇರೆ ಬಸ್ಸಿಗೆ ಕ್ರಾಸಿಂಗ್‌ ನೀಡುವ ವಿಚಾರ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದರು.

ಕೊಣಾಜೆ ಪೊಲೀಸ್‌ ಠಾಣೆ ಇನ್‌ಸ್ಪೆಕ್ಟರ್‌ ಅಶೋಕ್‌ ಪಿ. ಅವರು ಪ್ರಾಸ್ತಾವಿಕ ವಾಗಿ ಮಾತನಾಡಿ ಜನಸ್ನೇಹಿ ಪೊಲೀಸ್‌ ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದರು. 

ಎಸ್‌ಐ ಸುಕುಮಾರನ್‌ ಉಪಸ್ಥಿತ ರಿದ್ದರು. ಕಾನ್‌ಸ್ಟೆಬಲ್‌ ಗುರುವಪ್ಪ ಕಾಂತಿ ಸ್ವಾಗತಿಸಿದರು. ಸುಖಲತಾ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.