ಆಯ್ದ ಶಾಲೆಗಳಲ್ಲಿ ಈ ವರ್ಷವೇ ಎನ್ಇಪಿ: ಸಚಿವ ಬಿ.ಸಿ. ನಾಗೇಶ್
Team Udayavani, Jan 19, 2023, 6:45 AM IST
ಸುಬ್ರಹ್ಮಣ್ಯ: ಈ ವರ್ಷದಿಂದಲೇ ಆಯ್ದ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತಿದ್ದು, ಮುಂದಿನ ವರ್ಷ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.
ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪತ್ರಕರ್ತ ರೊಂದಿಗೆ ಮಾತನಾಡಿ , ಈ ವರ್ಷ 400- 500 ಶಾಲೆಗಳಲ್ಲಿ ಹೊಸ ಶಿಕ್ಷಣ ನೀತಿ ಆರಂಭವಾಗಲಿದೆ ಎಂದರು.
ಎಸೆಸೆಲ್ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಈಗಾಗಲೇ ದಿನಾಂಕ ಘೋಷಿಸಿದ್ದು, ಪರೀಕ್ಷಾ ಪೂರ್ವಸಿದ್ಧತೆ ನಡೆಸಲಾಗುತ್ತಿದೆ ಎಂದರು.
ಮಕರ ಸಂಕ್ರಾಂತಿ ದಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ14ರ ಬದಲು 15ಕ್ಕೆ ರಜೆ ನೀಡಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು. ವರ್ಷದಲ್ಲಿ ಐದು ರಜೆಗಳನ್ನು ನೀಡುವ ಅವಕಾಶ ಜಿಲ್ಲಾಧಿಕಾರಿ ಗಳಿಗೆ ನೀಡಲಾಗಿದೆ. ಅದರಂತೆ ಅವರು ರಜೆ ನೀಡುತ್ತಾರೆ. ರಜೆ ನೀಡುವಲ್ಲಿಯೂ ಕೆಲವೊಂದು ಬದಲಾವಣೆ ಮಾಡಲಾಗಿದೆ ಎಂದರು.
ಅತಿಥಿ ಶಿಕ್ಷಕರಿಗೆ ವೇತನ ಪಾವತಿ ಆಗದೇ ಇರುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಒಂದೆರಡು ತಿಂಗಳು ತಡ ಆಗಬಹುದು ಅಥವಾ ಆರಂಭದಲ್ಲಿ ತಡ ಆಗಬಹುದು ಹೊರತು ವೇತನ ಪಾವತಿ ಆಗದೇ ಇರುವುದಿಲ್ಲ ಎಂದರು. ಸಚಿವ ಎಸ್. ಅಂಗಾರ ಜತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು