ಅಪಾಯದ ಮಟ್ಟದಲ್ಲಿ ನೇತ್ರಾವತಿ – ಕುಮಾರಧಾರಾ


Team Udayavani, Aug 9, 2018, 10:46 AM IST

9-agust-3.jpg

ಉಪ್ಪಿನಂಗಡಿ: ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನೇತ್ರಾವತಿ ಹಾಗೂ ಕುಮಾರಧಾರಾ ನದಿಗಳಲ್ಲಿನ ನೀರಿನ ಮಟ್ಟದಲ್ಲಿ ಗಣನೀಯ ಹೆಚ್ಚಳ ಕಂಡು ಬಂದಿದ್ದು, ನದಿ ನೀರು ಅಪಾಯದ ಮಟ್ಟಕ್ಕೆ ಸನಿಹ ತಲುಪಿದೆ. ಕೆಲವು ದಿನಗಳಿಂದೀಚೆಗೆ ಒಣಹ ವೆಯಿತ್ತು. ನದಿಗಳಲ್ಲಿ ನೀರಿನ ಮಟ್ಟದಲ್ಲಿ ಗಂಭೀರ ಪ್ರಮಾಣದ ಇಳಿಕೆಯಾಗಿತ್ತು. ಆದರೆ, ಮಂಗಳವಾರ ರಾತ್ರಿಯಿಂದ ಭಾರೀ ಮಳೆಯಾಗಿದ್ದು, ನೀರಿನ ಮಟ್ಟ ತೀವ್ರಗತಿಯಲ್ಲಿ ಏರಿಕೆ ಕಂಡಿತು. ನೇತ್ರಾವತಿ ಹಾಗೂ ಕುಮಾರಧಾರಾ ನದಿಗಳಲ್ಲಿ ಈ ಬಾರಿಯ ಗರಿಷ್ಠ ಮಟ್ಟವನ್ನು ತಲುಪಿದೆ. ಬುಧವಾರ ಸಾಯಂಕಾಲ ಪರಿಷ್ಕೃತ ಅಪಾಯ ಮಟ್ಟವಾಗಿರುವ 30.5 ಮೀ.ಗೆ ಸನಿಹದಲ್ಲಿ ನೀರು ಹರಿಯುತ್ತಿದೆ.

ವಿಪತ್ತು ನಿರ್ವಹಣ ತಂಡ
ಜಿಲ್ಲಾಡಳಿತದಿಂದ ತರಬೇತುಗೊಂಡಿರುವ ಗೃಹರಕ್ಷಕ ದಳ ಕೇಂದ್ರೀಕೃತ ವಿಪತ್ತು ನಿರ್ವಹಣ ತಂಡ ನದಿಯ ನೀರಿನ ಹೆಚ್ಚಳದಿಂದಾಗಿ ಸಂಭಾವ್ಯ ಅಪಾಯವನ್ನು ಎದುರಿಸಲು ಸನ್ನದ್ಧವಾಗಿದ್ದು, ಸುರಕ್ಷತಾ ಕ್ರಮಕ್ಕೆ ಅಗತ್ಯವಾದ ಪರಿಕರಗಳನ್ನು ಹೊಂದಿಸಿಕೊಂಡಿವೆ. ಗೃಹ ರಕ್ಷಕ ದಳದ ಘಟಕಾಧಿಕಾರಿ ದಿನೇಶ್‌ ನೇತೃತ್ವದಲ್ಲಿ ವಿಪತ್ತು ನಿರ್ವಹಣ ತಂಡ, ಮಹಮ್ಮದ್‌ ಬಂದಾರು ನೇತೃತ್ವದಲ್ಲಿ ಈಜುಗಾರರ ತಂಡ ನದಿ ಸಂಗಮ ಸ್ಥಳದಲ್ಲಿ ಬೀಡುಬಿಟ್ಟಿವೆ. ಕಂದಾಯ ಇಲಾಖೆ ಅಧಿಕಾರಿಗಳೂ ಸ್ಥಳದಲ್ಲಿದ್ದು, ಪರಿಸ್ಥಿತಿಯ ಅವಲೋಕನ ಮಾಡುತ್ತಿದ್ದಾರೆ.

ಕುಕ್ಕೆ ಸ್ನಾನಘಟ್ಟ ಮುಳುಗಡೆ
ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಸುತ್ತಮುತ್ತ ಭಾರೀ ಮಳೆಯಾಗಿದೆ. ಇಲ್ಲಿನ ಪುಣ್ಯ ನದಿ ಕುಮಾರಧಾರಾ ತುಂಬಿ ಹರಿಯುತ್ತಿದೆ. ಸ್ನಾನ ಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಯಾತ್ರಿಗಳಿಗೆ ಪುಣ್ಯಸ್ನಾನ ನೆರವೇರಿಸಲು ತೊಡಕುಂಟಾಯಿತು. ವ್ಯಾಪಕ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಗ್ರಾಮೀಣ ಭಾಗಗಳ ಹಳ್ಳ-ಕೊಳ್ಳಗಳೂ ತುಂಬಿ ಹರಿಯುತ್ತಿವೆ. ತಗ್ಗು ಪ್ರದೇಶಗಳಿಗೆ ನೆರೆ ನೀರು ಹರಿದ ಪರಿಣಾಮ ಹಲವು ಭಾಗಗಳಲ್ಲಿ ಕೃಷಿ ತೋಟಗಳು ಜಲಾವೃತಗೊಂಡಿವೆ. ಸುಬ್ರಹ್ಮಣ್ಯ-ಪಂಜ – ಕಾಣಿಯೂರು ಸಂಪರ್ಕ ಮಾರ್ಗದಲ್ಲಿ ಕುಮಾರಧಾರಾ ಬಳಿ ಇರುವ ಸೇತುವೆ ಮುಳುಗಡೆಯಾಗಿ, ಈ ಮಾರ್ಗದಲ್ಲಿ ಸಂಚಾರ ಕೆಲ ಸಮಯ ಕಡಿತಗೊಂಡಿತು.

ಹೊಸಮಠ ಸೇತುವೆ ಮುಳುಗಡೆ
ಕಡಬ: ಉಪ್ಪಿನಂಗಡಿ- ಕಡಬ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿರುವ ಹೊಸ ಮಠ ಹೊಸಮಠ ಮುಳುಗು ಸೇತುವೆ ಬುಧವಾರ ಮುಳುಗಿದೆ. ಬಿಳಿನೆಲೆ ಗ್ರಾಮದ ನೆಟ್ಟಣ ದಲ್ಲಿಯೂ ಸೇತುವೆ ಮುಳುಗಿ, ಸಂಚಾರಕ್ಕೆ ಅಡ್ಡಿಯಾಯಿತು. ಸಂಜೆ ತನಕವೂ ಹೊಸಮಠ ಸೇತುವೆ ಮೇಲಿನ ನೀರು ಇಳಿದಿರಲಿಲ್ಲ. ಮಧ್ಯಾಹ್ನದ ವೇಳೆಗೆ ನೀರಿನ ಪ್ರಮಾಣ ಭಾರೀ ಏರಿಕೆ ಯಾಗಿತ್ತು. ಕಳೆದ ತಿಂಗಳು ಸತತ 11 ದಿನಗಳ ಕಾಲ ಹೊಸಮಠ ಸೇತುವೆ ನೀರಿನಲ್ಲಿ ಮುಳುಗಿ, ಸಂಚಾರಕ್ಕೆ ತೊಡಕಾಗಿತ್ತು. ಸೇತುವೆ ಮುಳುಗಡೆಯಿಂದ ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪರದಾಡಿದರು. ನಿರ್ಮಾಣ ಹಂತದಲ್ಲಿರುವ ಸೇತುವೆಯ ಮೇಲಿನಿಂದ ಜನರು ನಡೆದು ಹೋಗಿ ಹೊಳೆಯನ್ನು ದಾಟುತ್ತಿದ್ದರು. 

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.