ನೇತ್ರಾವತಿ- ಫ‌ಲ್ಗುಣಿಯಲ್ಲಿ 7 ತೇಲುವ ಜೆಟ್ಟಿ

ದ.ಕ. ಪ್ರವಾಸೋದ್ಯಮದಲ್ಲಿ ಮಹತ್ತರ ಬದಲಾವಣೆಗೆ ಮುನ್ನುಡಿ

Team Udayavani, Mar 5, 2023, 7:38 AM IST

ನೇತ್ರಾವತಿ- ಫ‌ಲ್ಗುಣಿಯಲ್ಲಿ 7 ತೇಲುವ ಜೆಟ್ಟಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿಗಳಾದ ನೇತ್ರಾವತಿ ಹಾಗೂ ಫ‌ಲ್ಗುಣಿ (ಗುರುಪುರ) ನದಿಗಳಲ್ಲಿ ಏಳು ತೇಲುವ ಜೆಟ್ಟಿಗಳಿಗೆ ಕೇಂದ್ರದ ಬಂದರು, ನೌಕಾ ಮತ್ತು ಜಲಮಾರ್ಗ ಸಚಿವಾಲಯ ಮಂಜೂರಾತಿ ನೀಡಿದೆ.

ಈ ಯೋಜನೆಗಳಿಂದ ದ.ಕ. ಜಿಲ್ಲೆಯಲ್ಲಿ ಪ್ರವಾಸೋದ್ಯಮ ಹೊಸ ಹೊಸ ದಿಕ್ಕಿನತ್ತ ಸಾಗಲಿದ್ದು, ಈ ಜೆಟ್ಟಿಗಳು ಕಾರ್ಯರಂಭಿಸಿದಾಗ ಸ್ಥಳೀಯ ಯುವಕರಿಗೆ ಉದ್ಯೋಗದ ಜತೆಗೆ ಆರ್ಥಿಕ ವಹಿವಾಟಿಗೂ ಉತ್ತೇಜನ ದೊರೆಯುವ ನಿರೀಕ್ಷೆ ಇದೆ.

ಸುಲ್ತಾನ್‌ ಬತ್ತೇರಿ, ಬಂದರು ಫೆರ್ರಿ, ಸ್ಯಾಂಡ್‌ ಪಿಟ್‌ ಬೆಂಗ್ರೆ, ಉತ್ತರ ಸ್ಯಾಂಡ್‌ಬಾರ್‌, ಹಳೆ ಬಂದರು, ಜಪ್ಪಿನಮೊಗರು ಹಳೆ ಫೆರ್ರಿ ಮತ್ತು ಕಸಬ ಬೆಂಗರೆಯಲ್ಲಿ ಕೇಂದ್ರ ಸರಕಾರದ ಬಹು ನಿರೀಕ್ಷೆಯ ಸಾಗರಮಾಲಾ ಯೋಜನೆಯಡಿ ಈ ಜೆಟ್ಟಿಗಳಿಗೆ ಮಂಜೂರಾತಿ ದೊರಕಿದ್ದು, ಈ ಯೋಜನೆಯ ಶೇ. 100ರಷ್ಟು ಅನುದಾನ, 26 ಕೋಟಿ ರೂ.ಗಳನ್ನು ಕೇಂದ್ರ ಸಚಿವಾಲಯ ಒದಗಿಸಲಿದೆ.

ಕರ್ನಾಟಕದಲ್ಲಿ 1,428 ಕೋಟಿ ರೂ.ಗಳಲ್ಲಿ 27 ಯೋಜನೆಗಳಿಗೆ ಸಾಗರಮಾಲಾ ಯೋಜನೆಯಡಿ ಈಗಾಗಲೇ 611 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ. ಈವರೆಗೆ 70 ಕೋಟಿ ರೂ.ಗಳಲ್ಲಿ ಮೂರು ಯೋಜನೆಗಳು ಪೂರ್ಣಗೊಂಡಿವೆ. ಕರ್ನಾಟಕ ಸಾಗರ ಮಂಡಳಿಗೆ 650 ಕೋಟಿ ರೂ. ವೆಚ್ಚದ 18 ಯೋಜನೆಗಳನ್ನು ಮಂಜೂರು ಮಾಡಲಾಗಿದೆ ಎಂದು ಕೇಂದ್ರದ ನೌಕಾಯಾನ ಸಚಿವ ಸರ್ಬಾನಂದ ಸೊನೊವಾಲ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ತೇಲುವ ಜೆಟ್ಟಿಗಳು, ಮರೀನಾಗಳು, ಸಣ್ಣ ಬಂದರುಗಳು, ಮೀನುಗಾರಿಕೆ ಬಂದರುಗಳು, ಫಿಶ್‌ ಲ್ಯಾಂಡಿಂಗ್‌ ಕೇಂದ್ರಗಳು ಮತ್ತು ವಾಟರ್‌ಡ್ರೋಮ್‌ಗಳು ಸೇರಿದಂತೆ ಬಹು ವಿಧದ ಕಾಮಗಾರಿಗಳನ್ನು ಹೊಂದಿರುತ್ತದೆ. ಸಾಂಪ್ರದಾಯಿಕ ಜೆಟ್ಟಿಗಳಿಗಿಂತ ಇತರ ಹಲವಾರು ಪ್ರಯೋಜನವನ್ನು ಹೊಂದಿರುವುದಲ್ಲದೆ, ಪರಿಸರ ಸ್ನೇಹಿ, ದೀರ್ಘಾವಧಿ ಬಾಳಿಕೆ ಹಾಗೂ ಸುಲಭವಾಗಿ ಮರು ಜೋಡಣೆಯ ಅವಕಾಶವನ್ನು ಹೊಂದಿರಲಿವೆ. ಅಂತಾರಾಷ್ಟ್ರೀಯ ಮಾರ್ಗದರ್ಶಿ ತತ್ವಗಳನ್ನು ಅನುಸರಿಸುವ ಮೂಲಕ ಸಚಿವಾಲಯವು ಈಗಾಗಲೇ ಕೆಲವು ಪ್ರಾಯೋಗಿಕ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ. ಇವುಗಳಲ್ಲಿ ಗೋವಾದಲ್ಲಿ ಪ್ರಯಾಣಿಕರ ತೇಲುವ ಜೆಟ್ಟಿಗಳು, ಸಬರಮತಿ ನದಿ ಮತ್ತು ಸರ್ದಾರ್‌ ಸರೋವರ್‌ ಅಣೆಕಟ್ಟಿನಲ್ಲಿ (ಸೀಪ್ಲೇನ್‌ ಸೇವೆಗಳಿಗಾಗಿ) ವಾಟರ್‌ -ಏರೋಡ್ರೋಮ್‌ಗಳು ಉತ್ತಮ ಫ‌ಲಿತಾಂಶ ನೀಡುತ್ತಿವೆ. ಕರಾವಳಿ ಸಮುದಾಯದ ಒಟ್ಟಾರೆ ಅಭಿವೃದ್ಧಿ ಮತ್ತು ಉನ್ನತಿಗಾಗಿ ಕರ್ನಾಟಕದ ಕರಾವಳಿಯಾದ್ಯಂತ ಸಚಿವಾಲಯದ 80ಕ್ಕೂ ಹೆಚ್ಚು ಯೋಜನೆಗಳು ಅಭಿವೃದ್ಧಿಯ ವಿವಿಧ ಹಂತಗಳಲ್ಲಿವೆ ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.