ಹಲೇಜಿ ಬಳಿ ನೂತನ ತಡೆಗೋಡೆ ಪೂರ್ಣ


Team Udayavani, Apr 26, 2022, 9:12 AM IST

barrier

ಬೆಳ್ತಂಗಡಿ: ಗುರುವಾಯನಕೆರೆ- ಉಪ್ಪಿನಂಗಡಿ ಮುಖ್ಯ ರಸ್ತೆಯ ಹಲೇಜಿ ಸಮೀಪ ರಸ್ತೆ ಅಂಚಿನಲ್ಲಿ ಕುಸಿತ ಗೊಂಡಿದ್ದ ತಡೆಗೋಡೆ ಇದೀಗ ವ್ಯವಸ್ಥಿತವಾಗಿ ನಿರ್ಮಾಣವಾಗಿ ರಸ್ತೆ ಸಂಚಾರಕ್ಕೆ ದೊರೆತಿದೆ.

ಗುರುವಾಯನಕೆರೆಯಿಂದ ಉಪ್ಪಿನಂಗಡಿ ರಸ್ತೆಯಾಗಿ 15 ಕಿ.ಮೀ. ಸಾಗಿದಾಗ ಹಲೇಜಿ ಸುಧೀರ್‌ ಕುಮಾರ್‌ ಎಂಬವರ ಜಮೀನಿನ ಅಂಚಿನಲ್ಲಿ ಕಲ್ಲಿನಿಂದ ಕಟ್ಟಿದ ಬಹಳ ಹಿಂದಿನ ತಡೆಗೋಡೆ ಸುಮಾರು 20 ಮೀಟರ್‌ ನಷ್ಟು ಕುಸಿದಿತ್ತು. ಬಸ್‌ ಸಹಿತ ಘನ ವಾಹನಗಳು ರಸ್ತೆ ಅಂಚಿಗೆ ಬಂದಲ್ಲಿ ಕಂದಕಕ್ಕೆ ಉರುಳುವ ಸಾಧ್ಯತೆ ಎದುರಾಗಿತ್ತು.

ಅನೇಕ ವಾಹನಗಳು ಈ ಸ್ಥಳದಲ್ಲಿ ಅಪಘಾತಕ್ಕೆ ಒಳಗಾಗಿದ್ದುದರಿಂದ 30 ವರ್ಷಗಳ ಹಿಂದೆ ಜಾಗದ ಮಾಲಕರು ತಡೆಗೋಡೆ ರಚಿಸಿದ್ದರು. ಕಳೆದ ಕೆಲವು ವರ್ಷಗಳ ಹಿಂದೆ ಮುಖ್ಯ ರಸ್ತೆ ನಿರ್ಮಾಣದ ಬಳಿಕ ಇಲ್ಲಿ ಕಾಂಕ್ರೀಟ್‌ ತಡೆಗೋಡೆ ನಿರ್ಮಿಸದೆ ಇದ್ದುದರಿಂದ ಅಪಾಯ ಎದು ರಾಗಿತ್ತು ಎಂದು ಸ್ಥಳೀಯರಾದ ಸುಧೀರ್‌ ಕುಮಾರ್‌ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಫೆಬ್ರವರಿಯಲ್ಲಿ ಉದಯವಾಣಿ ಸುದಿನದಲ್ಲಿ ವರದಿ ಪ್ರಕಟಿಸಲಾಗಿತ್ತು.

ಸ್ಪಂದಿಸಿದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕಾಂಕ್ರೀಟ್‌ ತಡೆಗೋಡೆಗೆ ಅಂದಾಜು ಪಟ್ಟಿ ಸಿದ್ಧಪಡಿಸಿದ್ದರು. ಬಳಿಕ ಟೆಂಡರ್‌ ಕರೆದು ಸ್ಥಳೀಯ ಗುತ್ತಿಗೆದಾರರು ಕಾಮಗಾರಿ ಪಡೆದಿದ್ದರು. 15 ಲಕ್ಷ ರೂ. ವೆಚ್ಚದಲ್ಲಿ ಸುಮಾರು 20 ಮೀಟರ್‌ ಉದ್ದ 15 ಅಡಿ ಎತ್ತರದ ಕಾಂಕ್ರೀಟ್‌ ತಡೆಗೋಡೆ ನಿರ್ಮಿಸಲಾಗಿದೆ.

ಸಾರ್ವಜನಿಕ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ

ತಡೆಗೋಡೆ ಕುಸಿತಗೊಂಡಲ್ಲಿ ತೀರ ತಿರುವು ರಸ್ತೆಯಾಗಿದ್ದು ರಸ್ತೆ ಅಂಚಿಗೆ ವಾಹನಗಳು ಬಂದಾಗ ಅಪಘಾತ ಸಂಭವಿಸುವ ಸಾಧ್ಯತೆ ಎದುರಾಗಿತ್ತು. ಈ ಕುರಿತು ಉದಯವಾಣಿ ಪತ್ರಿಕೆ‌ ಸಕಾಲದಲ್ಲಿ ವರದಿ ಪ್ರಕಟಿಸಿ ಸಂಬಂಧ ಪಟ್ಟ ಅಧಿಕಾರಿಗಳನ್ನು ಎಚ್ಚರಿಸುವ ಕೆಲಸ ಮಾಡಿತ್ತು. ಅಧಿಕಾರಗಳು ಕ್ರಮ ಕೈಗೊಳ್ಳುವ ಮೂಲಕ ಸಾರ್ವಜನಿಕ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ. ಸುಧೀರ್‌ ಕುಮಾರ್‌, ಹಲೇಜಿ, ಸ್ಥಳೀಯರು.

ಕಾಂಕ್ರೀಟ್‌ ತಡೆಗೋಡೆ

ರಸ್ತೆ ಅಂಚು ಕುಸಿತಗೊಂಡಿರುವ ಕುರಿತು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗಿತ್ತು. ಇದೀಗ ಸುರಕ್ಷಿತ ಕಾಂಕ್ರೀಟ್‌ ತಡೆಗೋಡೆ ನಿರ್ಮಿಸಲಾಗಿದೆ. – ಶಿವಪ್ರಸಾದ್‌, ಎಇಇ, ಲೋಕೋಪಯೋಗಿ ಇಲಾಖೆ ಬೆಳ್ತಂಗಡಿ ವಿಭಾಗ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.