ಅಳಿಕೆ-ಮಡಿಯಾಲ : ಸೇತುವೆ ಕಾಮಗಾರಿ ಪೂರ್ಣ


Team Udayavani, Jul 12, 2017, 5:20 AM IST

Bridge-11-7.jpg

ವಿಟ್ಲ: ರಸ್ತೆಗಳು ರಾಜ್ಯ, ಅಂತಾರಾಜ್ಯ, ರಾಷ್ಟ್ರೀಯ ಹೆದ್ದಾರಿಯಾಗಿ ಹೆಸರು ಪಡೆಯುತ್ತವೆ. ಸರಕಾರ ಬದಲಾವಣೆಯಾದಾಗ, ರಾಜಕೀಯ ಪಕ್ಷಗಳ ಮೇಲಾಟದಲ್ಲಿ ಕೆಲ ಅಭಿವೃದ್ಧಿ ಕಾಮಗಾರಿ ನಡೆದಿದೆ ಎನ್ನುವುದಕ್ಕಾಗಿ ಈ ರಸ್ತೆಗಳು ಭಡ್ತಿ ಪಡೆಯುತ್ತವೆ. ಮತದಾರರನ್ನು ನಂಬಿಸುವುದಕ್ಕೆ ಇರಬಹುದಾದ ಇಂಥ ಘೋಷಣೆಗಳಿಗೆ ತಕ್ಕುದಾಗಿ ರಸ್ತೆಗಳು ಅಭಿವೃದ್ಧಿ ಹೊಂದಿರುವುದಿಲ್ಲ. ಆದರೆ ಅಳಿಕೆ ಗ್ರಾಮದಲ್ಲಿ ಹಾದು ಹೋಗುವ ಅಂತಾರಾಜ್ಯ ಹೆದ್ದಾರಿಯ ಸೇತುವೆಯನ್ನು ಅಭಿವೃದ್ಧಿಪಡಿಸಿರುವುದು ಮಾತ್ರ ವಿಚಿತ್ರವಾದರೂ ನಿಜ! ಇದೀಗ ಹೊಸ ಸೇತುವೆ ನಿರ್ಮಾಣ ಕಾರ್ಯ ಪೂರ್ಣವಾಗಿ ಉದ್ಘಾಟನೆಗೆ ಸಿದ್ದವಾಗಿದೆ.

ಸೇತುವೆ ಎಲ್ಲಿ
ಇದು ಸುಬ್ರಹ್ಮಣ್ಯ – ಮಂಜೇಶ್ವರ ಅಂತಾರಾಜ್ಯ ಹೆದ್ದಾರಿಯ ವಿಶೇಷತೆ. ಈ ರಸ್ತೆ ಅಂತಾರಾಜ್ಯ ಹೆದ್ದಾರಿಯೆಂದು ಘೋಷಿಸಲ್ಪಟ್ಟು ವರ್ಷಗಟ್ಟಲೆ ಕಳೆದುಹೋಗಿದೆ. ಸುಬ್ರಹ್ಮಣ್ಯದಿಂದ ಪುತ್ತೂರು, ಬಳಿಕ ಈ ಅಂತಾರಾಜ್ಯ ಹೆದ್ದಾರಿ ಪುಣಚ, ಕೇಪು, ಅಳಿಕೆ, ಬೈರಿಕಟ್ಟೆ, ಕನ್ಯಾನ, ಆನೆಕಲ್ಲು ಮೂಲಕ ಮಂಜೇಶ್ವರವನ್ನು ತಲುಪುತ್ತದೆ. ಕೆಲವರ್ಷಗಳ ಕಾಲ ರಸ್ತೆಯ ಅಭಿವೃದ್ಧಿಯಾಗಿರಲಿಲ್ಲ. ಆದರೆ ಕಳೆದ ವರ್ಷ ಅಲ್ಲಲ್ಲಿ ಅಭಿವೃದ್ಧಿಯ ಶಖೆ ಆರಂಭವಾಯಿತು. ಪುಣಚ, ಕೇಪು, ಅಳಿಕೆ, ಕನ್ಯಾನ ಗ್ರಾಮಗಳಲ್ಲಿ ಈ ರಸ್ತೆ ಅಭಿವೃದ್ಧಿ ಕಂಡಿತು. ರಸ್ತೆ ವಿಸ್ತರಣೆಯಾಗುತ್ತಿದ್ದಂತೆ ಚಿಕ್ಕಪುಟ್ಟ ಸೇತುವೆಗಳನ್ನು ಅಭಿವೃದ್ಧಿಪಡಿಸಬೇಕಾಯಿತು. ಅಪಘಾತ ಸಂಭವಿಸುವ ಸಾಧ್ಯತೆಯನ್ನು ಲೆಕ್ಕಾಚಾರಮಾಡಿ, ಕೆಲ ಸೇತುವೆಗಳ ವಿಸ್ತರಣೆ ಕಾರ್ಯವನ್ನು ಲೋಕೋಪಯೋಗಿ ಇಲಾಖೆ ಹಂತ ಹಂತವಾಗಿ ಮಾಡಲಾರಂಭಿಸಿತು. ಅಳಿಕೆ ಗ್ರಾಮದ ಮಡಿಯಾಲದಲ್ಲಿ ಸೇತುವೆಯೂ ರಸ್ತೆಯೂ ಅಪಾಯಕಾರಿಯಾಗಿ ಪರಿಣಮಿಸಿತ್ತು. ಇಳಿಜಾರು ರಸ್ತೆ, ಅಗಲ ಕಿರಿದಾದ ಸೇತುವೆ ಮೃತ್ಯುಕೂಪವೆನಿಸಿತ್ತು. ಪರಿಣಾಮವಾಗಿ ಕಿರಿದಾದ ಹಳೆಯ ಸೇತುವೆಯನ್ನು ಬದಲಾಯಿಸುವ ತೀರ್ಮಾನವನ್ನೂ ಇಲಾಖೆ ಕೈಗೊಂಡಿತು. ಪಡಿಬಾಗಿಲು – ಬೈರಿಕಟ್ಟೆ ನಡುವಿನ ಅಳಿಕೆ ಗ್ರಾಮದ ಮಡಿಯಾಲದಲ್ಲಿ ಕಿರಿದಾದ ಸೇತುವೆಗೆ ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿ ಅವರ ಪ್ರಯತ್ನದಿಂದ ನಬಾರ್ಡ್‌ ಆರ್‌.ಐ.ಡಿ.ಎಫ್‌. 21 ಯೋಜನೆಯಡಿ 1.20 ಕೋ. ರೂ. ಅನುದಾನ ಬಿಡುಗಡೆಯಾಯಿತು.

ಕಾಮಗಾರಿ ಆರಂಭ 
ರಾಜ್ಯ ಹೆದ್ದಾರಿಯಲ್ಲಿ ಹಳೆ ಸೇತುವೆ ತೆಗೆದು ಕಾಮಗಾರಿ ನಡೆಸಲು ಜಿಲ್ಲಾಧಿಕಾರಿಗಳ ಅಧಿಕೃತ ಅಧಿಸೂಚನೆಯ ಅಗತ್ಯವಿದೆ. ಜಿಲ್ಲಾಧಿಕಾರಿಗಳು ಮೋಟಾರು ಕಾಯ್ದೆ 1988ರ ಸೆಕ್ಷನ್‌ 115 ಹಾಗೂ 1989ರ ನಿಯಮ 221ಎ(5)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಬಳಸಿಕೊಂಡು ರಾಜ್ಯ ಹೆದ್ದಾರಿ 100ರ ಪಡಿಬಾಗಿಲು – ಬೈರಿಕಟ್ಟೆ  ನಡುವೆ ವಾಹನ ಸಂಚಾರ ನಿಷೇಧಿಸಿ 2017ರ ಜ. 10ರಂದು ಅಧಿಸೂಚನೆ ಹೊರಡಿಸಿದ್ದರು. ಬಳಿಕ ಹಳೆ ಸೇತುವೆಯನ್ನು ಕೆಡವಿ, ಹೊಸ ಸೇತುವೆ ಕಾಮಗಾರಿ ಆರಂಭಿಸಲಾಯಿತು.

ನೀರಿನ ಅಭಾವ, ಅಡಿಕೆ ತೋಟದಿಂದ ಪೂರೈಕೆ
ನೀರಿನ ತೀವ್ರ ಅಭಾವದಿಂದ ಎಲ್ಲ ನದಿಗಳು ಬತ್ತುತ್ತಿರುವ ಸಮಯದಲ್ಲಿ ಸೇತುವೆಯ ಕಾಂಕ್ರಿಟ್‌ ಕಾಮಗಾರಿ ನಡೆಯುತ್ತಿತ್ತು. ಈ ಸಂದರ್ಭ ಸೇತುವೆ ಪಕ್ಕದ ಕೃಷಿಕ ಮಡಿಯಾಲ ಗೋಪಾಲಕೃಷ್ಣ ಭಟ್‌  ಎರಡು ತಿಂಗಳ ಅವಧಿಯಲ್ಲಿ ನೀರನ್ನು  ಪೂರೈಸಿ ಸಹಕರಿಸಿದ್ದಾರೆ.

ಉದ್ಘಾಟನೆಗೆ ಸಿದ್ಧ 
ಒಟ್ಟಿನಲ್ಲಿ ಸೇತುವೆ ಕಾಮಗಾರಿ ಪೂರ್ಣವಾಗಿದ್ದು ತಡೆಗೋಡೆ ನಿರ್ಮಾಣವಾಗಿದೆ. ಸೇತುವೆಯ ಎರಡೂ ಬದಿಯಲ್ಲಿ ಮಣ್ಣು ಹಾಕಿ ಇಳಿಜಾರು ರಸ್ತೆಯನ್ನು ಏರಿಸಲಾಗಿದೆ. ಆದುದರಿಂದ ಸೇತುವೆಯ ಎರಡೂ ಪಕ್ಕದಲ್ಲಿ ಡಾಮರು ಹಾಕಬೇಕಾಗಿದೆ. ಜಲ್ಲಿ ಹಾಕಲಾಗಿದ್ದು, ಮಳೆಯ ಕಾರಣ ಡಾಮರು  ಕಾಮಗಾರಿ ನಡೆಸಲು ಸಾಧ್ಯವಾಗಿಲ್ಲ. ಸಣ್ಣ ಪುಟ್ಟ ವಾಹನ  ಸಂಚಾರ ಆರಂಭವಾಗಿದ್ದು, ವಾಹನ ಸಂಚಾರಕ್ಕೆ ಅಧಿಕೃತ ಚಾಲನೆ ಸಿಗಬೇಕಾಗಿದೆ.

ಇನ್ನಷ್ಟು ಸೇತುವೆಗಳು ಬೇಕು 
ಪುತ್ತೂರು – ಉಕ್ಕುಡ ನಡುವೆ ಹೆದ್ದಾರಿಯ ಕಿರಿದಾದ ಸೇತುವೆಗಳ ವಿಸ್ತರಣೆ ಕಾಮಗಾರಿ ಇನ್ನೂ ಹಲವು ಕಡೆಗಳಲ್ಲಿ ಆಗಬೇಕಾಗಿದೆ. ಪುಣಚ ಸಮೀಪದ ಮಣಿಲ, ಪುತ್ತೂರು ಸಮೀಪದ ದೇವಸ್ಯ ಹಾಗೂ ಮಚ್ಚಿಮಲೆ ಸೇತುವೆಗಳು ಅಗಲ ಕಿರಿದಾಗಿದ್ದು, ಅಪಾಯಕಾರಿಯಾಗಿವೆ. ಅಲ್ಲೆಲ್ಲ  ಅಪಘಾತ ಸಂಭವಿಸುವ ಸಾಧ್ಯತೆಯಿದೆ. ಆದುದರಿಂದ ಮಡಿಯಾಲದ ಈ ಸೇತುವೆಗೆ ಆದ್ಯತೆ ನೀಡಿರುವ ಅಧಿಕಾರಿಗಳು ಈ ರಸ್ತೆಯುದ್ದಕ್ಕೂ ಅಭಿವೃದ್ಧಿ ಕಾಮಗಾರಿ ನಡೆಸಬೇಕೆಂದು ನಿತ್ಯಸಂಚಾರಿಗಳು ಆಗ್ರಹಿಸಿದ್ದಾರೆ.

– ಉದಯಶಂಕರ್‌ ನೀರ್ಪಾಜೆ

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

Kadaba ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದವನಿಗೆ ಹಲ್ಲೆ

Kadaba ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದವನಿಗೆ ಹಲ್ಲೆ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.