ರಿಂಗ್‌ ರಸ್ತೆಗೆ ಹೊಸ ಪಥ; ಬದಲಾಗುವ ಡಿಪಿಆರ್‌!

ಮೂಲ್ಕಿ-ಕಟೀಲು-ಪೊಳಲಿ-ತೊಕ್ಕೊಟ್ಟು ಹೆದ್ದಾರಿ

Team Udayavani, Feb 12, 2020, 5:18 AM IST

sds-37

ಸಾಂದರ್ಭಿಕ ಚಿತ್ರ

ಮಂಗಳೂರು: ಹೊಸ ಬೈಪಾಸ್‌ ಹಾಗೂ ರಿಂಗ್‌ ರಸ್ತೆಗಳನ್ನು “ಗ್ರೀನ್‌ಫೀಲ್ಡ್‌ ಅಲೈನ್‌ಮೆಂಟ್‌’ ಸ್ವರೂಪದಲ್ಲಿ ಮಾಡುವಂತೆ ಹೆದ್ದಾರಿ ಇಲಾಖೆಯು ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ದ.ಕ. ಜಿಲ್ಲೆಯ ಬಹುನಿರೀಕ್ಷಿತ ಮೂಲ್ಕಿಯಿಂದ ಕಿನ್ನಿಗೋಳಿ, ಕಟೀಲು, ಕೈಕಂಬ, ಪೊಳಲಿ, ಬಿ.ಸಿ.ರೋಡ್‌, ಮುಡಿಪು ತೊಕ್ಕೊಟ್ಟು ರಸ್ತೆಯ ಹಾಲಿ ಮಾರ್ಗನಕ್ಷೆ ಬದಲಾವಣೆಯಾಗುತ್ತಿದ್ದು, ಹೊಸ ಪಥದ ಮೂಲಕ ರಿಂಗ್‌ ರಸ್ತೆಗೆ ಇದೀಗ ಹೊಸ ಡಿಪಿಆರ್‌ (ವಿಸ್ತೃತ ಯೋಜನಾ ವರದಿ) ಸಿದ್ಧಪಡಿಸಲಾಗುತ್ತಿದೆ.

91.20 ಕಿ.ಮೀ. ಉದ್ದದ ಹೆದ್ದಾರಿ ನಿರ್ಮಾಣಕ್ಕೆ ಭಾರತೀಯ ರಾ.ಹೆ. ಪ್ರಾಧಿಕಾರ ಡಿಪಿಆರ್‌ ಈ ಹಿಂದೆಯೇ ತಯಾರಿಸಿ, ಪ್ರಾಧಿಕಾರದ ಕೇಂದ್ರ ಕಚೇರಿಯು 2017ರಲ್ಲಿ ಅನುಮೋದನೆ ನೀಡಿ, ಸ್ಟುಫ್‌ ಕನ್ಸಲ್ಟೆನ್ಸಿ ಪ್ರೈ.ಲಿ. ಅಧಿಕಾರಿಗಳು ಸರ್ವೇ ವರದಿ ಕೂಡ ಸಲ್ಲಿಸಿದ್ದರು. ಆದರೆ ಪರಿಹಾರ ಹಾಗೂ ಯೋಜನಾ ವೆಚ್ಚವು ದುಪ್ಪಟ್ಟಾಗುತ್ತಿರುವ ಹಿನ್ನೆಲೆಯಲ್ಲಿ ಅನುಮೋದನೆ ನೀಡುವಲ್ಲಿ ತಡವಾಗಿತ್ತು. ಇದೇ ಸಂದರ್ಭ ದೇಶದ ಎಲ್ಲ ಕಡೆಗಳಲ್ಲಿ ಹೊಸದಾಗಿ ಮಾಡುವ ರಿಂಗ್‌ ರಸ್ತೆ/ವರ್ತುಲ ರಸ್ತೆಯನ್ನು ಹಾಲಿ ರಸ್ತೆಯ ಪಕ್ಕ ಮಾಡುವ ಬದಲು ಹೊಸದಾಗಿ ಗ್ರೀನ್‌ ಫೀಲ್ಡ್‌ ಅಲೈನ್‌ಮೆಂಟ್‌ ಎಂಬ ಮಾದರಿಯಲ್ಲಿ ಮಾಡಲು ಹೆದ್ದಾರಿ ಇಲಾಖೆ ನಿರ್ಧರಿಸಿತು. ಹೀಗಾಗಿ ಅನುಮೋದನೆಗೆ ಹೋಗಿದ್ದ ಮೂಲ್ಕಿ-ಕಟೀಲು-ತೊಕ್ಕೊಟ್ಟು ರಸ್ತೆ ಅನುಮೋದನೆ ಪಡೆಯಲಿಲ್ಲ. ಬದಲಾಗಿ ಗ್ರೀನ್‌ ಫೀಲ್ಡ್‌ ಅಲೈನ್‌ಮೆಂಟ್‌ ಮಾದರಿಯಲ್ಲಿ ಹೊಸ ಡಿಪಿಆರ್‌ ಸಿದ್ಧಪಡಿಸುವಂತೆ ಸಚಿವಾಲಯವು ರಾ.ಹೆ. ಪ್ರಾಧಿಕಾರದ ಮಂಗಳೂರು ಕಚೇರಿಗೆ ನಿರ್ದೇಶಿಸಿದೆ.

ಇದರಂತೆ ಹೊಸ ರಸ್ತೆಯು ಹೆಜಮಾಡಿ, ಏಳಿಂಜೆ, ತೋಡಾರ್‌, ಹೊಸಬೆಟ್ಟು, ನರಿಕೊಂಬು, ಮೆಲ್ಕಾರ್‌, ಇರಾ, ಬಾಳೆಪುಣಿ, ಸೋಮೇಶ್ವರ ಭಾಗದಲ್ಲಿ ಬರುವ ಸಾಧ್ಯತೆಯಿದ್ದು, ಸದ್ಯ ಸರ್ವೇ ಕಾರ್ಯ ಹೆದ್ದಾರಿ ಇಲಾಖೆಯಿಂದ ನಡೆಯುತ್ತಿದೆ.

ಹಳೆ ಮಾರ್ಗ ಬದಲಾವಣೆ ಯಾಕೆ?
ಈಗಾಗಲೇ ಡಿಪಿಆರ್‌ ಸಿದ್ಧಪಡಿಸಿದ ರಿಂಗ್‌ ರಸ್ತೆಗೆ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರು 2019ರ ಮಾ. 5ರಂದು ಶಿಲಾನ್ಯಾಸ ಮಾಡಿದ್ದರು. ಇದರ ಪ್ರಕಾರ ಹಾಲಿ ಇರುವ ರಸ್ತೆಗಳನ್ನೇ ಅಗಲಗೊಳಿಸಲಾಗುತ್ತದೆ. ಹೀಗಾಗಿ ಭೂಸ್ವಾಧೀನ ವೆಚ್ಚ ಅಧಿಕ. ಅಭಿವೃದ್ಧಿ ಆದ ಪ್ರದೇಶವೇ ಮತ್ತೆ ಅಭಿವೃದ್ಧಿ ಆಗಲಿದೆ. ಕಾನೂನಾತ್ಮಕ ಸಮಸ್ಯೆಗಳು ಅಧಿಕ. ಇದರ ಬದಲು “ಗ್ರೀನ್‌ ಬೆಲ್ಟ್’ ಆಧಾರದಲ್ಲಿ ಹೊಸ ರಸ್ತೆ ಮಾಡಿದರೆ ಹೆಚ್ಚಿನ ಅಭಿವೃದ್ಧಿಗೆ ಅವಕಾಶ ಹಾಗೂ ಹಸಿರು ಪ್ರದೇಶಗಳಲ್ಲಿ ಹಾದು ಹೋಗುವ ಕಾರಣ ವೆಚ್ಚವೂ ಕಡಿಮೆ ಎಂಬುದು ಪ್ರಾಧಿಕಾರದ ಅಭಿಪ್ರಾಯ.

ಏನಿದು ಗ್ರೀನ್‌ಫೀಲ್ಡ್‌ ಅಲೈನ್‌ಮೆಂಟ್‌?
ಈಗಿರುವ ರಸ್ತೆಯಲ್ಲೇ ಬೈಪಾಸ್‌/ರಿಂಗ್‌ ರಸ್ತೆ ನಿರ್ಮಿಸುವುದಾದರೆ ಅದರ ಇಕ್ಕೆಲಗಳ ಮನೆ, ಅಂಗಡಿ, ಶಾಲೆ ಇತ್ಯಾದಿ ಕಟ್ಟಡ ಬೆಲೆ ಬಾಳುವ ಜಾಗದ ಭೂಸ್ವಾಧೀನಕ್ಕೆ ಬಹುವೆಚ್ಚ ತಗಲುತ್ತದೆ. ಹೀಗಾಗಿ ಕಟ್ಟಡ, ಶಾಲೆ, ಮನೆ, ಮುಖ್ಯ ಭೂಮಿ, ನೀರಾವರಿ ಪ್ರದೇಶ, ಕೈಗಾರಿಕೆ ಗಳೆಲ್ಲವನ್ನು ಹೊರತುಪಡಿಸಿ ಗ್ರೀನ್‌ ಭಾಗದಲ್ಲಿ ಪರಿಸರಕ್ಕೆ ಪೂರಕವಾಗಿ ರಸ್ತೆ ನಿರ್ಮಿಸುವುದೇ ಈ ಪರಿಕಲ್ಪನೆ. ಹೀಗೆ ಮಾಡುವುದಾದರೆ ಭೂಸ್ವಾಧೀನ ಸಮಸ್ಯೆ ಬಹುವಾಗಿ ನಿವಾರಣೆ ಯಾಗಲಿದೆ ಎಂಬುದು ಹೆದ್ದಾರಿ ಇಲಾಖೆಯ ಲೆಕ್ಕಾಚಾರ.

“ಗ್ರೀನ್‌ಫೀಲ್ಡ್‌ ಅಲೈನ್‌ಮೆಂಟ್‌’ ಸ್ವರೂಪದಲ್ಲಿ ಮೂಲ್ಕಿ-ಕಟೀಲು-ಪೊಳಲಿ ರಿಂಗ್‌ ರಸ್ತೆ ನಿರ್ಮಿಸುವ ಸಂಬಂಧ ಸದ್ಯ ಡಿಪಿಆರ್‌ ಸಿದ್ಧಪಡಿಸಲಾಗುತ್ತಿದೆ. ಹೀಗಾಗಿ ಹಳೆಯ ಮಾರ್ಗನಕ್ಷೆಯಲ್ಲಿ ಕೊಂಚ ಬದಲಾವಣೆ ಆಗುವ ನಿರೀಕ್ಷೆಯಿದೆ. ಡಿಪಿಆರ್‌ ಸಿದ್ಧಪಡಿಸಿದ ಬಳಿಕ ಇದು ಅಂತಿಮಗೊಳ್ಳಲಿದೆ.
– ಶಿಶುಮೋಹನ್‌,  ಯೋಜನಾ ನಿರ್ದೇಶಕರು, ರಾ.ಹೆ. ಪ್ರಾಧಿಕಾರ ಮಂಗಳೂರು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.