ಮಂಗಳೂರು-ಬೆಂಗಳೂರು ನಡುವೆ ಹೊಸ ರಾತ್ರಿ ರೈಲು


Team Udayavani, Jan 30, 2019, 4:15 AM IST

train.jpg

ಮಂಗಳೂರು: ಐಟಿ ನಗರಿ ಬೆಂಗಳೂರಿನಿಂದ ಕರಾವಳಿಯ ಆರ್ಥಿಕ ಹೆಬ್ಟಾಗಿಲು ಮಂಗಳೂರಿಗೆ ಸಂಪರ್ಕ ಕಲ್ಪಿಸುವುದಕ್ಕಾಗಿ ಮತ್ತೂಂದು ಹೊಸ ರಾತ್ರಿ ರೈಲು ಸಂಚಾರ ಆರಂಭಿಸಲು ನೈಋತ್ಯ ರೈಲ್ವೇ ತೀರ್ಮಾನಿಸಿದೆ. ಕರಾವಳಿ ಭಾಗಕ್ಕೆ ರೈಲ್ವೇಯ ಹೊಸ ವರ್ಷದ ಕೊಡುಗೆ ಇದು.

ಕೆಲವೇ ದಿನಗಳಲ್ಲಿ ಹೊಸ ರೈಲು ಸಂಚಾರ ಆರಂಭಗೊಳ್ಳಲಿದ್ದು, ಈಗ ಪೂರಕ ಸಿದ್ಧತೆ ಹಾಗೂ ತಾಂತ್ರಿಕ ಅನುಮತಿ ಪ್ರಕ್ರಿಯೆ ನಡೆಯುತ್ತಿದೆ. ಸದ್ಯ ವಾರದಲ್ಲಿ 3 ದಿನ ಮಾತ್ರ ಸಂಚರಿಸುವ ಇದು ಮಾರ್ಚ್‌ ಅನಂತರ ಪ್ರತೀ ರಾತ್ರಿ ಸಂಚರಿಸುವ ನಿರೀಕ್ಷೆಯಿದೆ. ರೈಲಿನ ವೇಳಾಪಟ್ಟಿಯನ್ನು ನೈಋತ್ಯ ರೈಲ್ವೇ ಈಗಾಗಲೇ ಅಂತಿಮಗೊಳಿಸಿ, ರೈಲ್ವೇ ಮಂಡಳಿಗೆ ಜ.24ರಂದು ಕಳುಹಿಸಿದೆ. ಒಪ್ಪಿಗೆ ಲಭಿಸಿದ ತತ್‌ಕ್ಷಣ ಸಂಚಾರ ಆರಂಭಿಸುವ ಸಾಧ್ಯತೆಯಿದೆ.

ಪ್ರಸ್ತಾವಿತ ಸಮಯದ ಪ್ರಕಾರ, ಯಶವಂತಪುರದಿಂದ ಅದು ಪ್ರತೀ ಶುಕ್ರವಾರ, ರವಿವಾರ ಹಾಗೂ
ಮಂಗಳವಾರ ಸಂಜೆ 4.30ಕ್ಕೆ ಹೊರಡಲಿದೆ. ಶನಿವಾರ, ಸೋಮವಾರ ಹಾಗೂ ಬುಧವಾರಗಳಂದು ಬೆಳಗ್ಗೆ 4ಕ್ಕೆ ಮಂಗಳೂರು ಸೆಂಟ್ರಲ್‌ ನಿಲ್ದಾಣ ತಲುಪಲಿದೆ. ಶನಿವಾರ, ಸೋಮವಾರ ಹಾಗೂ ಬುಧವಾರ ಮಂಗಳೂರು ಸೆಂಟ್ರಲ್‌ನಿಂದ ರಾತ್ರಿ 7 ಗಂಟೆಗೆ ಹೊರಟು ಮರುದಿನಗಳಂದು ಮುಂಜಾನೆ 4.30ಕ್ಕೆ ಯಶವಂತಪುರ ನಿಲ್ದಾಣ ತಲುಪಲಿದೆ.
 
364 ಕಿ.ಮೀ. ಪ್ರಯಾಣಕ್ಕೆ ಪ್ರಸ್ತಾವಿತ ಸಮಯದ ಪ್ರಕಾರ ಬೆಂಗಳೂರಿನಿಂದ ಮಂಗಳೂರಿಗೆ 11.30 ತಾಸು ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ 9.30 ತಾಸು ತಗಲಲಿದೆ. ಘಾಟಿ ಪ್ರದೇಶದಲ್ಲಿ ರೈಲ್ವೇ ಸುರಕ್ಷತೆ ಹಾಗೂ ಇತರ ರೈಲುಗಳ ಕ್ರಾಸಿಂಗ್‌ ಕಾರಣ ಬೆಂಗಳೂರಿನಿಂದ ಹೊರಟ ರೈಲು ಎರಡು ತಾಸು ತಡವಾಗಿ ಮಂಗಳೂರಿಗೆ ತಲುಪುವಂತಾಗುತ್ತದೆ.

ಪ್ರಸ್ತುತ ಎರಡು ರೈಲು ಓಡಾಟ
ಸದ್ಯ ಮಂಗಳೂರು ಸೆಂಟ್ರಲ್‌ನಿಂದ ಪ್ರತೀ ದಿನ ಯಶವಂತಪುರ ಎಕ್ಸ್‌ಪ್ರೆಸ್‌ ರಾತ್ರಿ 8.55ಕ್ಕೆ ಹೊರಟು ಮರುದಿನ ಬೆಳಗ್ಗೆ ಸುಮಾರು 7.30ಕ್ಕೆ ಬೆಂಗಳೂರು ತಲುಪುತ್ತದೆ. ಇದು 3 ದಿನ ಮೈಸೂರು ಹಾಗೂ 4 ದಿನ ಶ್ರವಣಬೆಳಗೊಳ ಮಾರ್ಗವಾಗಿ ಸಂಚರಿಸುತ್ತಿದೆ. ಮಂಗಳೂರು ಜಂಕ್ಷನ್‌ನಿಂದ ಪ್ರತೀದಿನ (ರವಿವಾರ ವಿನಾ) ಬೆಳಗ್ಗೆ 11.30ಕ್ಕೆ ಹೊರ
ಡುವ ಗೊಮ್ಮಟೇಶ್ವರ ಎಕ್ಸ್‌ಪ್ರೆಸ್‌ ರಾತ್ರಿ 8.30ರ ಸುಮಾರಿಗೆ ಬೆಂಗಳೂರು ತಲುಪುತ್ತದೆ. ಇದು ಶ್ರವಣಬೆಳಗೊಳ ಮಾರ್ಗವಾಗಿ ಸಂಚರಿಸುತ್ತಿದೆ. 

ತಿರುಪತಿಗೆ ಹೊಸ ರೈಲು!
ತಿರುಪತಿಯಿಂದ ಹಾಸನದ ವರೆಗೆ ಸಂಚರಿಸುತ್ತಿರುವ ನಿತ್ಯ ರೈಲನ್ನು ಮಂಗಳೂರು ಸೆಂಟ್ರಲ್‌ ವರೆಗೆ ವಿಸ್ತರಿಸಿ, ಇಲ್ಲಿಂದ ಪ್ರತೀದಿನ ಸಂಚರಿಸಲು ಅವಕಾಶ ಕಲ್ಪಿಸಬೇಕು ಎಂಬ ಸಂಸದ ನಳಿನ್‌ ಅವರ ಬೇಡಿಕೆಗೂ ಇಲಾಖೆ ಒಪ್ಪಿಗೆ ಸೂಚಿಸಿದೆ. ಈ ರೈಲು ಪ್ರತೀದಿನ ಮಂಗಳೂರಿನಿಂದ ಪ್ರಯಾಣಿಸಿದರೆ ತಿರುಪತಿಗೆ ಪ್ರಯಾಣಿಸುವವರಿಗೆ ಉಪಯೋಗವಾಗಲಿದೆ. ಶೀಘ್ರದಲ್ಲಿ ಈ ಕುರಿತ ಅಂತಿಮ ತೀರ್ಮಾನವಾಗುವ ನಿರೀಕ್ಷೆಯಿದೆ.

ಪ್ರಸ್ತುತ ಮಂಗಳೂರು ಸೆಂಟ್ರಲ್‌ನಿಂದ ಬುಧವಾರ, ಶನಿವಾರ ರಾತ್ರಿ 8.15ಕ್ಕೆ ಕಾಚಿಗುಡ ಎಕ್ಸ್‌ಪ್ರೆಸ್‌ ಹೊರಟು ಮರುದಿನ ಮಧ್ಯಾಹ್ನ 1 ಗಂಟೆಗೆ ತಿರುಪತಿ ಸಮೀಪದ ರೇಣಿಗುಂಟ ತಲುಪುತ್ತದೆ. ಮಂಗಳೂರು ಸೆಂಟ್ರಲ್‌ನಿಂದ ಕೊಲ್ಕತ್ತದ ಸಾಂತ್ರಗಚ್ಚಿಗೆ ಶನಿವಾರ ರಾತ್ರಿ 11 ಗಂಟೆಗೆ ಹೊರಡುವ ವಿವೇಕ ಎಕ್ಸ್‌ಪ್ರೆಸ್‌ ಮರುದಿನ ಮಧ್ಯಾಹ್ನ 1.30ಕ್ಕೆ ತಿರುಪತಿ ತಲುಪುತ್ತದೆ. ಸೆಂಟ್ರಲ್‌ನಿಂದ ಪ್ರತೀ ಸೋಮವಾರ ಸಂಜೆ 5ಗಂಟೆಗೆ ಜಮ್ಮುವಿಗೆ ಹೊರಡುವ ನವಯುಗ ಎಕ್ಸ್‌ಪ್ರೆಸ್‌ ಮರುದಿನ ಬೆಳಗ್ಗೆ 9.30ಕ್ಕೆ ತಿರುಪತಿ ತಲುಪುತ್ತದೆ. 

 ಸಮಯ ಹೊಂದಿಕೆ ಆಗಬೇಕಿದೆ
ಪಶ್ಚಿಮ ಕರಾವಳಿ ರೈಲ್ವೇ ಯಾತ್ರಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಹನುಮಂತ ಕಾಮತ್‌ “ಉದಯವಾಣಿ’ ಜತೆಗೆ ಮಾತನಾಡಿ, ಬೆಂಗಳೂರಿನಿಂದ ಹೊಸ ರೈಲು ಸಂಜೆ ಹೊರಡುವುದರಿಂದ ಕೆಲವರಿಗೆ ಸಮಸ್ಯೆ ಆಗಬಹುದು. ಆದರೆ ಕರಾವಳಿಗೆ ಹೊಸ ರೈಲು ಸಿಗುತ್ತಿದೆ ಎಂಬ ಸಂತೋಷದಿಂದ ಈ ಸೇವೆಯನ್ನು ಒಪ್ಪಿಕೊಳ್ಳಬೇಕು. ರೈಲು ಆರಂಭವಾದ ಕೆಲವು ದಿನಗಳ ಅನಂತರ ಸಮಯ ಬದಲಾವಣೆಗೆ ಅವಕಾಶವಿದೆ. ಈಗಲೇ ವಿರೋಧ ಸೂಚಿಸಿದರೆ ಬರುವ ರೈಲು ಕೂಡ ಸಿಗದು ಎಂದಿದ್ದಾರೆ.

ಹಗಲು ಮತ್ತೂಂದು ಇಂಟರ್‌ಸಿಟಿ ರೈಲು
ಈ ನಡುವೆ ಹಗಲು ಮತ್ತೂಂದು ಇಂಟರ್‌ಸಿಟಿ ರೈಲು ಓಡಾಟ ನಡೆಸಲು ಕೂಡ ರೈಲ್ವೇ ಇಲಾಖೆ ಮುಂದಾಗಿದೆ. ಮಂಗಳೂರಿನಿಂದ ಮಡ್‌ಗಾಂವ್‌ ಸಹಿತ ವಿವಿಧ ಭಾಗಗಳಿಗೆ ಈಗಾಗಲೇ ಇರುವ ಮಾದರಿಯಲ್ಲಿ ಮಂಗಳೂರು-ಬೆಂಗಳೂರು ಮಧ್ಯೆ ಈ ರೈಲು ಆರಂಭಿಸಲು ಉದ್ದೇಶಿಸಲಾಗಿದೆ. ಇದು “ಚಯರ್‌ ಕಾರ್‌’ ಮಾದರಿಯಲ್ಲಿರಲಿದೆ. 

ಹೊಸ ರೈಲು; ಇಲಾಖೆ ಒಪ್ಪಿಗೆ
ಮಂಗಳೂರು-ಬೆಂಗಳೂರು ಮಧ್ಯೆ ಹೊಸ ರಾತ್ರಿ ರೈಲು ಓಡಾಟಕ್ಕೆ ಇಲಾಖೆ ಒಪ್ಪಿದೆ. ವಾರದೊಳಗೆ ಸಮಯ ಅಂತಿಮಗೊಳಿಸುವ ನಿರೀಕ್ಷೆ ಯಿದೆ. ಕೆಲವೇ ದಿನದಲ್ಲಿ ಹೊಸ ಎಕ್ಸ್‌ಪ್ರೆಸ್‌ ವಾರದಲ್ಲಿ ಮೂರು ದಿನ ಪ್ರಾಯೋಗಿಕ  ಸಂಚಾರ ಆರಂಭಿಸಲಿದೆ. ಮಾರ್ಚ್‌ ಅನಂತರ ಪ್ರತೀ ದಿನ ಓಡಾಟ ನಡೆಸಲಿದೆ. 
ನಳಿನ್‌ ಕುಮಾರ್‌ ಕಟೀಲು, ಸಂಸದರು, ದ.ಕ.

ಟಾಪ್ ನ್ಯೂಸ್

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.