ಕಡಬ: ಆರಕ್ಷಕರಿಗೆ ಸುಸಜ್ಜಿತ ವಸತಿಗೃಹ ಸಮುಚ್ಚಯ ಸಿದ್ಧ


Team Udayavani, May 26, 2018, 5:40 AM IST

kadama-25-5.jpg

ಕಡಬ: ಕಡಬ ಆರಕ್ಷಕ ಠಾಣೆ ಇದೀಗ ತಾಲೂಕು ಕೇಂದ್ರದಲ್ಲಿರುವ ಠಾಣೆ. ಎಲ್ಲ ಸಿಬಂದಿಗೂ ವಸತಿಗೃಹ ಬೇಕೆಂಬ ಹಲವು ವರ್ಷಗಳ ಬೇಡಿಕೆ ಕೊನೆಗೂ ಈಡೇರುತ್ತಿದೆ. ಠಾಣೆಯ ಸಮೀಪದಲ್ಲಿಯೇ ಸುಸಜ್ಜಿತ ವಸತಿಗೃಹ ಸಮುಚ್ಚಯದ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಉದ್ಘಾಟನೆಗಾಗಿ ಕಾಯುತ್ತಿವೆ.

29 ಸಿಬಂದಿಗೆ ಇದ್ದುದು ಬರೇ13 ಮನೆ!

ಕಡಬ ಆರಕ್ಷಕ ಠಾಣೆಗೆ ಎಸ್‌ಐ-1, ಎಎಸ್‌ಐ-3, ಹೆಡ್‌ ಕಾನ್‌ ಸ್ಟೆಬಲ್‌-7 ಹಾಗೂ ಮಹಿಳಾ ಕಾನ್‌ ಸ್ಟೆಬಲ್‌ ಗ‌ಳು ಸಹಿತ 18 ಕಾನ್‌ ಸ್ಟೆಬಲ್‌ ಗ‌ಳು – ಹೀಗೆ ಒಟ್ಟು 29 ಹುದ್ದೆಗಳು ಮಂಜೂರುಗೊಂಡಿವೆ. ಆದರೆ 29 ಸಿಬಂದಿಗೆ ಇದುವರೆಗೆ ಲಭ್ಯವಿದ್ದುದು ಕೇವಲ 13 ಮನೆ. ಉಳಿದವರು ಬಾಡಿಗೆ ಮನೆಗಳನ್ನೇ ಆಶ್ರಯಿಸಬೇಕಾಗಿತ್ತು. ಇದೀಗ ನೂತನವಾಗಿ ನಿರ್ಮಾಣಗೊಂಡಿರುವ ವಸತಿ ಸಮುಚ್ಚಯದಲ್ಲಿ ಒಟ್ಟು 12 ಮನೆಗಳಿವೆ. ಹಳೆಯ 13 ಮನೆಗಳು ಹಾಗೂ ಹೊಸ 12 ಮನೆಗಳು ಸೇರಿ ಒಟ್ಟು 25 ಮನೆಗಳು ಈಗ ಲಭ್ಯವಿವೆ. ಅದರಿಂದಾಗಿ ಹೊಸ ಮನೆಗಳು ವಾಸಕ್ಕೆ ಸಿಕ್ಕಿದಾಗ ಸಿಬಂದಿಯ ವಸತಿ ಸಮಸ್ಯೆ ಬಹುತೇಕ ನಿವಾರಣೆಯಾಗಲಿದೆ.

2.66 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ

ಕಡಬ ಠಾಣೆಯ ಹೆಸರಿನಲ್ಲಿ ಒಟ್ಟು 2.5 ಎಕರೆ ಜಮೀನು ಇದೆ. ಇದೀಗ ಹೊಸದಾಗಿ ನಿರ್ಮಾಣಗೊಂಡಿರುವ ಮೂರಂತಸ್ತಿನ ವಸತಿ ಸಮುಚ್ಚಯದ ಕಟ್ಟಡ ಠಾಣೆಗೆ ಹತ್ತಿರದಲ್ಲಿ ಅದೇ ಜಮೀನಿನಲ್ಲಿ 2.66 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಕರ್ನಾಟಕ ಪೊಲೀಸ್‌ ಹೌಸಿಂಗ್‌ ಕಾರ್ಪೋರೇಶನ್‌ ಮೂಲಕ ಹೈದರಾಬಾದ್‌ ಮೂಲದ ಗುತ್ತಿಗೆದಾರ ಸಂಸ್ಥೆ ಎನ್‌.ಆರ್‌. ಕನ್‌ಸ್ಟ್ರಕ್ಷನ್ಸ್‌ ನಿರ್ಮಾಣ ಕಾಮಗಾರಿ ವಹಿಸಿಕೊಂಡು ಪೂರ್ಣಗೊಳಿಸಿದೆ. ಪ್ರತಿ ಮನೆಯಲ್ಲಿಯೂ ಹಾಲ್‌, 2 ಬೆಡ್‌ರೂಮ್‌, 2 ಟಾಯ್ಲೆಟ್‌, ಬಾತ್‌ ರೂಮ್‌ (1 ಬೆಡ್‌ರೂಮ್‌ಗೆ ಸೇರಿಕೊಂಡು), ಅಡುಗೆ ಕೋಣೆ ಹಾಗೂ ವರ್ಕ್‌ ಏರಿಯಾ ಇದೆ. 2016ರಲ್ಲಿ ಆರಂಭಗೊಂಡ ನಿರ್ಮಾಣ ಕಾಮಗಾರಿ ಇದೀಗ ಪೂರ್ಣಗೊಂಡಿದೆ.

ಹತ್ತಿರದಲ್ಲೇ ಇರುವುದು ಅನುಕೂಲ
ಹೊಸ ವಸತಿ ಸಮುಚ್ಚಯದ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಶೀಘ್ರ ಸಿಬಂದಿ ಉಪಯೋಗಕ್ಕೆ ಲಭಿಸಲಿದೆ. ಠಾಣೆಯ ಹತ್ತಿರದಲ್ಲಿಯೇ ವಸತಿಗೃಹಗಳಿದ್ದರೆ ಸಿಬಂದಿಗೂ ಅನುಕೂಲ. ಹೊಸ ಮನೆಗಳು ವಾಸಕ್ಕೆ ಸಿಕ್ಕಿದಾಗ ಸಿಬಂದಿ ವಸತಿ ಸಮಸ್ಯೆ ಬಹುತೇಕ ನಿವಾರಣೆಯಾಗಲಿದೆ.
– ಪ್ರಕಾಶ್‌ ದೇವಾಡಿಗ, ಕಡಬ ಎಸ್‌.ಐ.

— ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.