ಇಲಾಖೆಗಳ ಸಮನ್ವಯದ ಕೊರತೆ: ನೂತನ ರಸ್ತೆ ಅಗೆದು ಪೈಪ್‌ ಲೈನ್‌ ಕಾಮಗಾರಿ


Team Udayavani, May 25, 2018, 5:10 AM IST

road-dig-25-5.jpg

ಬಂಟ್ವಾಳ: ಇಲಾಖೆಗಳ ಸಮನ್ವಯದ ಕೊರತೆಯಿಂದ ಬಂಟ್ವಾಳ ಪುರಸಭೆ ವ್ಯಾಪ್ತಿಯ 5 ಕೋಟಿ ರೂ. ವೆಚ್ಚದ ರಸ್ತೆ ಅಗೆದು ಪೈಪ್‌ಲೈನ್‌ ಅಳವಡಿಕೆ ಕಾಮಗಾರಿ ಸಮಸ್ಯೆಯನ್ನು ಸೃಷ್ಟಿಸಿದೆ. ಬಿ.ಸಿ. ರೋಡ್‌ ಕೈಕಂಬ ದ್ವಾರದಿಂದ ಮೊಡಂಕಾಪು ರೈಲು ಮೇಲ್ಸೇತುವೆ ತನಕದ ಹೆದ್ದಾರಿಯ 600 ಮೀಟರ್‌ ಉದ್ದಕ್ಕೆ ಕುಡಿಯುವ ನೀರಿನ ಪೈಪ್‌ ಲೈನ್‌ ಅಳವಡಿಸಲು ಅಗೆಯುವ ಮೂಲಕ ರಸ್ತೆ ಅಧ್ವಾನಗೊಂಡಿದೆ. ಮಳೆ ಬಂದರೆ ಅಪೂರ್ಣ ಕಾಮಗಾರಿಯಿಂದಾಗಿ ರಸ್ತೆ ಇಡೀ ಕೆಸರುಮಯವಾಗಿ, ವಾಹನ ಸಂಚಾರಕ್ಕೂ ಅಡ್ಡಿ- ಆತಂಕ ಎದುರಾಗಲಿದೆ. ನಡೆದು ಹೋಗುವುದಕ್ಕೆ ಸಾಧ್ಯವಾಗದ ಪರಿಸ್ಥಿತಿಯಾಗಲಿದ್ದು, ಹತ್ತಿರದ ಮನೆ ಅಂಗಡಿಗಳಿಗೂ ಇದರ ಬಿಸಿ ತಟ್ಟಲಿದೆ.

2016ರಲ್ಲಿ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಮತ್ತು ಅಪೆಂಡಿಕ್ಸ್‌ ಇ ಬಜೆಟ್‌ನಿಂದ ಯೋಜನೆಯಲ್ಲಿ 5 ಕೋಟಿ ರೂ. ವೆಚ್ಚದ ಬಿ.ಸಿ. ರೋಡ್‌ ಕೈಕಂಬ-ಪೊಳಲಿ ರಸ್ತೆ ಕಾಮಗಾರಿ ನಡೆದಿತ್ತು. ಕೇವಲ ಎರಡು ವರ್ಷಗಳ ಬಳಿಕ ಅದೇ ರಸ್ತೆಯನ್ನು ಕುಡಿಯುವ ನೀರಿನ ಯೋಜನೆಯ ಪೈಪ್‌ ಅಳವಡಿಸಲು ರಸ್ತೆಯಲ್ಲಿ ಅಗೆದಿರುವುದು ಇಲ್ಲಿನ ಸಮಸ್ಯೆ. ಕೈಕಂಬ ದ್ವಾರದಿಂದ ಮೊಡಂಕಾಪು ರೈಲು ಸೇತುವೆ ತನಕ  600 ಮೀ. ಉದ್ದಕ್ಕೆ ರಸ್ತೆ ಅಗೆದು ಕುಡಿಯುವ ನೀರಿನ ಪೈಪ್‌ ಅಳವಡಿಸಿ ಮಣ್ಣನ್ನು ಮೇಲೆ ಹಾಕಿ ಅಲ್ಲಿಯೇ ಬಿಟ್ಟಿದ್ದಾರೆ.


ಸಂಚಾರಕ್ಕೆ ಅಡಚಣೆ

ಈ ರಸ್ತೆಯಲ್ಲಿ ಪಕ್ಕದಲ್ಲಿಯೇ ಎರಡು ಪ್ರೈಮರಿ ಶಾಲೆಗಳು, ಮೂರು ಪ್ರೌಢಶಾಲೆ ಗಳು ಹಾಗೂ ಪ.ಪೂ. ಮತ್ತು ಪದವಿ ಕಾಲೇಜುಗಳಿವೆ. ಅಲ್ಲದೆ ಚರ್ಚ್‌, ಅಯ್ಯಪ್ಪ ಮಂದಿರ ಹಾಗೂ ವನದುರ್ಗಾ ದೇವಸ್ಥಾನವಿದೆ. ಹಾಗಾಗಿ ಬೆಳಗ್ಗೆ, ಸಂಜೆಯ ಹೊತ್ತು ವಾಹನ ಸಂಚಾರ ದಟ್ಟಣೆ ಹೆಚ್ಚು. ಇನ್ನೇನು ಶಾಲೆ ಆರಂಭವಾಗಲಿದೆ.  ಜತೆಗೆ ಮುಂಗಾರಿನ ಮುನ್ಸೂಚನೆಯೂ ಇದೆ. ಮಳೆ ಬಂದಾಗ ಮಕ್ಕಳು ಮತ್ತು ಇಲ್ಲಿ ಓಡಾಡುವ ಜನರು ಕಷ್ಟಪಡಬೇಕಾಗುತ್ತದೆ. ಮಳೆಗಾಲಕ್ಕೆ ಮೊದಲು ಕಾಮಗಾರಿ ಮುಗಿಯದಿದ್ದರೆ ಸಂಚಾರ ಅಡಚಣೆ ಎದುರಾಗಲಿದೆ.

ರಸ್ತೆಗೆ ತೊಂದರೆ
ಪ್ರತಿ ಸಲ ಪೈಪ್‌ ಲೈನ್‌ ಕಾಮಗಾರಿ ಮಾಡುವಾಗಲೂ ರಸ್ತೆಗೆ ಕಂಟಕ ಎದುರಾಗುತ್ತದೆ. ಕುಡಿಯುವ ನೀರು ಯೋಜನೆಯನ್ನು ಜಾರಿ ತರಬೇಕಾದುದು ಕೂಡಾ ಅಗತ್ಯ. ಸ್ಥಳಾವಕಾಶ ಕಡಿಮೆ ಇರುವ ಕಾರಣ ಕೆಲವೊಂದು ಸಲ ರಸ್ತೆಯನ್ನೇ ಅಗೆಯಬೇಕಾದ ಅನಿವಾರ್ಯತೆ ಎದುರಾಗಿದೆ. ಆದರೆ ಅಗೆದ ರಸ್ತೆಯನ್ನು ಸರಿ ಮಾಡಲು ಈ ಇಲಾಖೆಗೆ ಯಾವುದೇ ಅನುದಾನ ದೊರಕುವುದಿಲ್ಲ. ಹೀಗಾಗಿ ರಸ್ತೆ ಅಗೆದು ಮಣ್ಣು ಹಾಕಿ ಬಿಟ್ಟು ಬಿಡುತ್ತಾರೆ. ಅದನ್ನು ಮತ್ತೆ ಸರಿ ಮಾಡಬೇಕಾದ ಕೆಲಸ ಲೋಕೋಪಯೋಗಿ ಇಲಾಖೆಗೆ ಬರುತ್ತದೆ. ರಸ್ತೆ ಹಾಳಾದಾಗ ಜನರು ಪ್ರಶ್ನಿಸುವುದು ಲೋಕೋಪಯೋಗಿ ಇಲಾಖೆಯನ್ನೇ. ಹೀಗಾಗಿ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಪೈಪ್‌ ಲೈನ್‌ ಅಳವಡಿಸುವಾಗೆಲ್ಲ ಲೋಕೋಪಯೋಗಿ ಇಲಾಖೆಗೆ ಸಂಕಷ್ಟ  ಎದುರಾಗುತ್ತದೆ.

ಇಲಾಖೆಗಳಲ್ಲಿ ಪರಸ್ಪರ ಹೊಂದಾಣಿಕೆ ಇರಲಿ
ಎರಡು ಇಲಾಖೆಗಳು ಪರಸ್ಪರ ಪೂರಕವಾಗಿ ಒಪ್ಪಂದ ಮಾಡಿಕೊಂಡು ಕೆಲಸ ಮಾಡಿದರೆ ಈ ಸಂಕಷ್ಟವೇ ಎದುರಾಗುವುದಿಲ್ಲ. ಇಲ್ಲವಾದರೆ ಅನುಕೂಲಕ್ಕಿಂತ ತೊಂದರೆಯೇ ಹೆಚ್ಚು. ಜತೆಗೆ ಹಣ, ಶ್ರಮ ಎರಡೂ ಪೋಲಾಗುತ್ತದೆ. ಲೋಕೋಪಯೋಗಿ ಇಲಾಖೆ, ಒಳಚರಂಡಿ ಮತ್ತು ಕುಡಿಯುವ ನೀರಿನ ಯೋಜನ ಇಲಾಖೆ ಹಾಗೂ ಪುರಸಭೆಯು ಒಟ್ಟಾಗಿ ಮಳೆ ಬರುವ ಮೊದಲೇ ಅಗೆದ ರಸ್ತೆಗೆ ಮರು ಡಾಮರು ಹಾಕುವ ಬಗ್ಗೆ ಕ್ರಮ ಕೈಗೊಂಡರೆ ಸಮಸ್ಯೆಯನ್ನು ಪರಿಹರಿಸಬಹುದು. ಜನರಿಗೆ ಮೂಲ ಸೌಕರ್ಯವನ್ನು ಒದಗಿಸುವ ಯಾವುದೇ ಎರಡು ಸರಕಾರಿ ಇಲಾಖೆಗಳು ಪರಸ್ಪರ ಸಂವಹನ ಮಾಡಿ ಕಾರ್ಯ ನಿರ್ವಹಿಸಿದರೆ ಮಾತ್ರ ಜನರಿಗೆ ಉಪಯೋಗವಾಗುತ್ತದೆ. ಇಲ್ಲದಿದ್ದಲ್ಲಿ ಸರಕಾರದಿಂದ ಬಿಡುಗಡೆಯಾಗುವ ಅನುದಾನ ವ್ಯರ್ಥವಾಗುವುದರಲ್ಲಿ ಸಂಶಯವಿಲ್ಲ.

ಇಲಾಖೆ ಗೊಂದಲ
ಲೋಕೋಪಯೋಗಿ ಇಲಾಖೆ 2 ವರ್ಷಗಳ ಹಿಂದೆ ರಸ್ತೆ ಡಾಮರು ಕಾಮಗಾರಿ ಕೈಗೆತ್ತಿಕೊಳ್ಳುವಾಗಲೇ ಕುಡಿಯುವ ನೀರಿನ ಯೋಜನೆಗೆ ಸಂಬಂಧಪಟ್ಟ ಇಲಾಖೆಗೆ  ಪೈಪ್‌ ಲೈನ್‌ ಅಳವಡಿಸುವಂತೆ ಸೂಚಿಸಿತ್ತು. ಆದರೆ ಆ ಇಲಾಖೆಗೆ ಆದೇಶ ಪತ್ರ ದೊರಕದೇ ಇದ್ದುದರಿಂದ ಅವರು ಕಾರ್ಯನಿರ್ವಹಿಸುವ ತನಕ ಕಾಯುವಷ್ಟು ಸಮಯ ಲೋಕೋಪಯೋಗಿ ಇಲಾಖೆಗೆ ಇರಲಿಲ್ಲ. ಲೋಕೋಪಯೋಗಿ ಇಲಾಖೆಗೆ ಆದೇಶ ಪತ್ರ ದೊರಕಿ ಕಾಮಗಾರಿ ಮುಕ್ತಾಯದ ದಿನವು ನಿಗದಿಯಾಗಿತ್ತು. ಹೀಗಾಗಿ ಈ ಪರಿಸ್ಥಿತಿ ಎದುರಾಗಿದೆ.

ಕಾಮಗಾರಿ ಶೀಘ್ರ ಪೂರ್ಣ
ಯೋಜನೆಯ ಆದೇಶ ಪತ್ರ ನಮಗೆ ಸಿಗುವಾಗ ವಿಳಂಬವಾಗಿದೆ. ಹಾಗಾಗಿ ರಸ್ತೆ ಕಾಮಗಾರಿ ಪೂರ್ಣಗೊಂಡ ಮೇಲೆ ನಾವು ಕಾಮಗಾರಿ ಕೈಗೆತ್ತಿಕೊಳ್ಳಬೇಕಾಗಿದೆ. ಆದಷ್ಟು ರಸ್ತೆ ಬದಿಯಲ್ಲೇ ಅಗೆದಿದ್ದೇವೆ. ರಸ್ತೆಯನ್ನು ಹಾಳುಗೆಡುವುದು ನಮ್ಮ ಉದ್ದೇಶವಲ್ಲ. ಆದಷ್ಟು ಬೇಗ ಕಾಮಗಾರಿಯನ್ನು ಪೂರೈಸಿ ಮತ್ತೆ ರಸ್ತೆಯನ್ನು ಸುವ್ಯವಸ್ಥಿತ ರೀತಿಯಲ್ಲಿ ಒಂದೆರಡು ವಾರದಲ್ಲಿ ಕಾಮಗಾರಿ ಪೂರೈಸುವ ಕ್ರಮ ಮಾಡಲಾಗುತ್ತದೆ.
– ಶೋಭಾಲಕ್ಷ್ಮೀ, ಸಹಾಯಕ ಎಂಜಿನಿಯರ್‌, ಒಳಚರಂಡಿ ಮತ್ತು ಸಮಗ್ರ ಕುಡಿಯುವ ನೀರು ಯೋಜನೆ, ಮಂಗಳೂರು ವಿಭಾಗ

— ರಾಜಾ ಬಂಟ್ವಾಳ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.