ಅಡ್ಡಹೊಳೆ-ಬಿ.ಸಿ. ರೋಡ್‌ ಹೆದ್ದಾರಿಗೆ ಹೊಸ ಟೆಂಡರ್‌

ಮಳೆಗಾಲದ ಬಳಿಕವಷ್ಟೇ ಕಾಮಗಾರಿ?

Team Udayavani, Jan 21, 2020, 6:45 AM IST

sad-45

ಮಂಗಳೂರು: ಹಲವು ವರ್ಷಗಳಿಂದ ನನೆಗುದಿಗೆ ಬಿದ್ದು, ಆಕ್ರೋಶಕ್ಕೆ ಗುರಿಯಾಗಿದ್ದ ಬಿ.ಸಿ. ರೋಡ್‌-ಅಡ್ಡಹೊಳೆ ಚತುಷ್ಪಥ ಕಾಂಕ್ರೀಟ್‌ ರಸ್ತೆ ಕಾಮಗಾರಿ ಗುತ್ತಿಗೆ ವಹಿಸಿಕೊಂಡಿದ್ದ ಎಲ್‌ ಆ್ಯಂಡ್‌ ಟಿ ಕಂಪೆನಿಯನ್ನು ಕೈಬಿಟ್ಟು ಹೊಸ ಟೆಂಡರ್‌ ಪ್ರಕ್ರಿಯೆ ನಡೆಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ.

2017ರಲ್ಲಿ ಪ್ರಾರಂಭಗೊಂಡಿದ್ದ ಈ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು
ಎಲ್‌ ಆ್ಯಂಡ್‌ ಟಿ ಕಂಪೆನಿಯು ವರ್ಷದ ಹಿಂದೆ ಅರ್ಧಕ್ಕೆ ನಿಲ್ಲಿಸಿತ್ತು. ಹೀಗಾಗಿ ಗುತ್ತಿಗೆ ರದ್ದುಪಡಿಸುವ ಬಗ್ಗೆ ರಾ.ಹೆ. ಅಧಿಕಾರಿಗಳು ಈಗಾಗಲೇ ಪ್ರಸ್ತಾವನೆ ಸಿದ್ಧಪಡಿಸಿ ಹೊಸದಿಲ್ಲಿಯ ಕೇಂದ್ರ ಕಚೇರಿಗೆ ಸಲ್ಲಿಸಿದ್ದು, ಅಂತಿಮ ಪ್ರಕ್ರಿಯೆ ನಡೆಯುತ್ತಿದೆ. ಮರು ಟೆಂಡರ್‌ಗೆ ಅವಕಾಶ ಮಾಡಿಕೊಡುವಂತೆ ಮತ್ತೂಂದು ಪ್ರಸ್ತಾವನೆ ಸಲ್ಲಿಸಿದ್ದು, ಶೀಘ್ರ ಒಪ್ಪಿಗೆ ದೊರೆಯುವ ನಿರೀಕ್ಷೆಯಿದೆ.

ಬಳಿಕವಷ್ಟೇ ಹೊಸ ಟೆಂಡರ್‌ ಕರೆಯ ಲಾಗುತ್ತದೆ. ಅದನ್ನು ಅಂತಿಮಗೊಳಿಸಲು 4-5 ತಿಂಗಳು ಬೇಕು. ಜತೆಗೆ ಗುತ್ತಿಗೆ ಪಡೆದ ಕಂಪೆನಿ ಪೂರಕ ಪ್ರಕ್ರಿಯೆ ನಡೆಸಲು ಸಮಯಾವಕಾಶ ಅಗತ್ಯವಿದೆ. ಆ ವೇಳೆಗೆ ಮತ್ತೆ ಮಳೆಗಾಲ ಆರಂಭವಾಗಲಿದ್ದು, ಆಗ ಕಾಮಗಾರಿ ಅಸಾಧ್ಯ. ಹೀಗಾಗಿ ಮುಂದಿನ ಮಳೆಗಾಲದ ಅನಂತರವೇ ನಡೆಯಬಹುದು.  ಆದರೆ ಭೂಸ್ವಾಧೀನ, ಸಮತಲಗೊಳಿಸುವಿಕೆ ಯಂತಹ ಅನೇಕ ಪ್ರಾಥಮಿಕ ಕೆಲಸಗಳನ್ನು ಈಗಿನ ಗುತ್ತಿಗೆದಾರರು ಮಾಡಿರುವುದರಿಂದ ಮುಂದಿನ ಕೆಲಸ ವೇಗ ಪಡೆಯಬಹುದು ಎಂಬುದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಅಭಿಪ್ರಾಯ.

ಕಳೆದ ಮಳೆಗಾಲದಲ್ಲಿ ಅಡ್ಡಹೊಳೆ-ಬಿ.ಸಿ. ರೋಡ್‌ ನಡುವೆ ರಸ್ತೆ ಸಂಪೂರ್ಣ ಹದಗೆಟ್ಟು, ಕೆಲವು ದಿನಗಳ ಹಿಂದೆಯಷ್ಟೇ ಕೆಲವೆಡೆ ತೇಪೆ ಹಾಕಲಾಗಿದೆ. ಮುಂದೆ ಇನ್ನಷ್ಟು ಹದಗೆಡುವ ಅಪಾಯವಿದ್ದು, ಮಳೆಗಾಲದಲ್ಲಿ ಪ್ರಯಾಣಿಕರಿಗೆ ಸಮಸ್ಯೆಯಾಗುವ ಸಾಧ್ಯತೆಯಿದೆ.

ಏನಿದು ಯೋಜನೆ?
ನೆಲಮಂಗಲದಿಂದ ಹಾಸನದ ವರೆಗೆ ಇರುವ ಚತುಷ್ಪಥ ರಸ್ತೆಯನ್ನು ಮಂಗಳೂರಿನವರೆಗೂ ವಿಸ್ತರಿಸುವ ಯೋಜನೆ. ಶಿರಾಡಿ ಘಾಟಿಯಲ್ಲಿ ಎರಡು ಹಂತಗಳಲ್ಲಿ ಕಾಂಕ್ರೀಟ್‌ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ. ಹಾಸನದಿಂದ ಶಿರಾಡಿಯ ಮಾರ್ನಹಳ್ಳಿಯವರೆಗೆ ಒಟ್ಟು 45 ಕಿ.ಮೀ. ಮತ್ತು ಶಿರಾಡಿಯ ಅಡ್ಡಹೊಳೆಯಿಂದ ಬಂಟ್ವಾಳದ ವರೆಗೆ ಒಟ್ಟು 63 ಕಿ.ಮೀ. ಚತುಷ್ಪಥಗೊಳ್ಳಲಿದೆ.

ಗುತ್ತಿಗೆ ಬದಲಾಗುವುದು ಯಾಕೆ?
ಅಡ್ಡಹೊಳೆಯಿಂದ ಬಿ.ಸಿ. ರೋಡ್‌ ಮಧ್ಯೆ 821 ಕೋ.ರೂ. ವೆಚ್ಚದಲ್ಲಿ ಚತುಷ್ಪಥ ಕಾಂಕ್ರೀಟ್‌ ರಸ್ತೆ ನಿರ್ಮಿಸುವ ಹೊಣೆಯನ್ನು ಎಲ್‌ ಆ್ಯಂಡ್‌ ಟಿಗೆ ನೀಡಲಾಗಿತ್ತು. ಭೂಸ್ವಾಧೀನ ವಿಳಂಬ, ಪರಿಸರ ಸಚಿವಾಲಯದಿಂದ ಕ್ಲಿಯರೆನ್ಸ್‌ ಸಕಾಲದಲ್ಲಿ ಸಿಗದಿರುವುದರಿಂದ ಅದು ಕೆಲಸ ಸ್ಥಗಿತಗೊಳಿಸಿತ್ತು. ಜತೆಗೆ ಅರಣ್ಯ ಇಲಾಖೆ ತಗಾದೆ ಇರುವ 16 ಕಿ.ಮೀ. ಭಾಗವನ್ನು ಟೆಂಡರ್‌ನಿಂದ ಕೈ ಬಿಡಲು ಪ್ರಾಧಿಕಾರ ಮುಂದಾಗಿದ್ದರಿಂದ ಕಂಪೆನಿ ಅಸಮಾಧಾನಗೊಂಡಿತ್ತು.

ಹೊಸ ಪ್ಯಾಕೇಜ್‌ನಲ್ಲಿ 16 ಕಿ.ಮೀ. ಹೊರಗೆ !
ಅಡ್ಡಹೊಳೆ ಮತ್ತು ಪೆರಿಯಶಾಂತಿ (ಧರ್ಮಸ್ಥಳ ಕ್ರಾಸ್‌) ಮಧ್ಯೆ 16 ಕಿ.ಮೀ. ಭಾಗವನ್ನು ಅಡ್ಡಹೊಳೆ-ಬಿ.ಸಿ. ರೋಡ್‌ ಪ್ಯಾಕೇಜ್‌ನಿಂದ ಹೊರಗಿರಿಸಲು ಸದ್ಯ ತೀರ್ಮಾನಿಸಲಾಗಿದೆ. ಈ ಭಾಗವು ಅರಣ್ಯ ಭಾಗದಲ್ಲಿ ಬರುತ್ತಿದ್ದು, ವನ್ಯಜೀವಿಗಳಿಗೆ ಸಮಸ್ಯೆಯಾಗದಂತೆ ಹಲವು ಪರಿಸರ ಕ್ಲಿಯರೆನ್ಸ್‌ ಪಡೆಯಬೇಕಾಗಿದೆ. ಇದಕ್ಕೆ ಹೆಚ್ಚಿನ ಸಮಯ ಬೇಕಾಗುವುದರಿಂದ ಸದ್ಯ ಪ್ಯಾಕೇಜ್‌ನಿಂದ ಹೊರಗಿಡಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ.

ಎಲ್‌ ಆ್ಯಂಡ್‌ ಟಿಯ ಗುತ್ತಿಗೆ ರದ್ದುಪಡಿಸುವಂತೆ ಕೇಂದ್ರ ಕಚೇರಿಗೆ ಶಿಫಾರಸು ಸಲ್ಲಿಸಲಾಗಿದೆ. ಹೊಸ ಟೆಂಡರ್‌ಗೆ ಅವಕಾಶ ನೀಡುವಂತೆಯೂ ಕೋರಲಾಗಿದೆ. ಕೆಲವೇ ದಿನಗಳಲ್ಲಿ ಅಂತಿಮ ತೀರ್ಮಾನ ಹೊಸದಿಲ್ಲಿಯಲ್ಲಿ ಆಗಲಿದೆ.
– ಸೋಮಶೇಖರ್‌, ಯೋಜನಾ ನಿರ್ದೇಶಕರು, ರಾ.ಹೆ. ಪ್ರಾಧಿಕಾರ.

 ದಿನೇಶ್‌ ಇರಾ

ಟಾಪ್ ನ್ಯೂಸ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.