ಮಂಗಳೂರಿನಿಂದ ರಾಮೇಶ್ವರ, ಭಾವ್‌ನಗರಕ್ಕೆ ಹೊಸ ರೈಲು

ಐಆರ್‌ಟಿಟಿಸಿ ಸಭೆಯಲ್ಲಿ ಅನುಮೋದನೆ, ರೈಲ್ವೇ ಮಂಡಳಿಗೆ ಶಿಫಾರಸು: ಕಣ್ಣೂರು - ಬೆಂಗಳೂರು ರೈಲು ಕಲ್ಲಿಕೋಟೆಗೆ ವಿಸ್ತರಣೆ ಪ್ರಸ್ತಾವ

Team Udayavani, Jul 6, 2022, 7:25 AM IST

ಮಂಗಳೂರಿನಿಂದ ರಾಮೇಶ್ವರ, ಭಾವ್‌ನಗರಕ್ಕೆ ಹೊಸ ರೈಲು

ಮಂಗಳೂರು: ಕರಾವಳಿಯ ಜನರಿಗೆ ಅತೀ ಉಪಯುಕ್ತವಾಗುವ ಮಂಗಳೂರು -ರಾಮೇಶ್ವರ ಮತ್ತು ಮಂಗಳೂರು – ಭಾವ್‌ನಗರ (ಅಹ್ಮದಾಬಾದ್‌) ಹೊಸ ರೈಲು ಸಂಚಾರ ಆರಂಭದ ಪ್ರಸ್ತಾವನೆ ಇತ್ತೀಚೆಗೆ ನಡೆದ ಅಂತರ್‌ ರೈಲ್ವೇ ವಲಯ ವೇಳಾಪಟ್ಟಿ ಸಮ್ಮೇಳನ (ಐಆರ್‌ಟಿಟಿಸಿ)ದಲ್ಲಿ ಅನುಮೋದನೆಗೊಂಡಿದೆ.

ದಕ್ಷಿಣ ರೈಲ್ವೇಯ ರೈಲ್ವೇ ಸಾರಿಗೆ ವಿಭಾಗದ ಚೆನ್ನೈ ಕೇಂದ್ರ ಕಚೇರಿ ನೀಡಿರುವ ಮಾಹಿತಿಯಂತೆ ಮಂಗಳೂರಿನಿಂದ ಭಾವ್‌ನಗರ ಟರ್ಮಿನಸ್‌ ಮತ್ತು ಮಂಗಳೂರಿನಿಂದ ರಾಮೇಶ್ವರಕ್ಕೆ ಸಾಪ್ತಾಹಿಕ ರೈಲು ಸಂಚಾರ ನಡೆಸಲಿದೆ.

ಪ್ರಸ್ತುತ ಕಣ್ಣೂರಿನಿಂದ ಮಂಗಳೂರು ಸೆಂಟ್ರಲ್‌ ಮೂಲಕ ಬೆಂಗಳೂರಿಗೆ ಸಂಚರಿಸುತ್ತಿರುವ ರೈಲು ನಂ.16511/16512 ಕಣ್ಣೂರು- ಬೆಂಗಳೂರು ಎಕ್ಸ್‌ ಪ್ರಸ್‌ ರೈಲನ್ನು ಕಲ್ಲಿಕೋಟೆಯವರೆಗೆ ವಿಸ್ತರಿಸುವ ಪ್ರಸ್ತಾವವನ್ನು ಕೂಡ ಐಆರ್‌ಟಿಟಿಸಿ ಸಭೆ ಪರಿಶೀಲಿಸಿದ್ದು, ರೈಲ್ವೇ ಮಂಡಳಿಗೆ ಶಿಫಾರಸು ಮಾಡಿದೆ. ಐಆರ್‌ಟಿಟಿಸಿ ಮಾಡುವ ಶಿಫಾರಸುಗಳು ಅನುಷ್ಠಾನಗೊಳ್ಳದೆ ಇರುವುದು ಕಡಿಮೆ. ಹೀಗಾಗಿ ಈ ಎರಡು ನೂತನ ರೈಲುಗಳು ಮೂರು ತಿಂಗಳುಗಳ ಒಳಗೆ ಆರಂಭಗೊಳ್ಳುವ ಸಾಧ್ಯತೆಗಳು ಅಧಿಕ ಎಂದು ಮೂಲಗಳು ತಿಳಿಸಿವೆ.

ಕರಾವಳಿಗರ ಬಹುದಿನಗಳ ಬೇಡಿಕೆ
ರಾಮೇಶ್ವರ, ಮಧುರೈ, ಪಳನಿ ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾಕ್ಷೇತ್ರಗಳು. ಕರಾವಳಿಯಿಂದ ಇಲ್ಲಿಗೆ ದಿನಂಪ್ರತಿ ಗಣನೀಯ ಸಂಖ್ಯೆಯ ಯಾತ್ರಾರ್ಥಿಗಳು ತೆರಳುತ್ತಾರೆ. ಪ್ರಸ್ತುತ ಕರಾವಳಿಯಿಂದ ಇಲ್ಲಿಗೆ ನೇರ ರೈಲು ಸಂಚಾರ ಇಲ್ಲ.

ಗುಜರಾತ್‌ ನಿಂದ ವಾಣಿ ಜ್ಯೋದ್ಯಮಿಗಳು, ಕಾರ್ಮಿಕರು ಬಹು ಸಂಖ್ಯೆ ಯಲ್ಲಿ ಬಂದು ಕರಾವಳಿ ಯಲ್ಲಿ ನೆಲೆಸಿದ್ದಾರೆ. ಪ್ರಸ್ತುತ ಗುಜರಾತ್‌ಗೆ ಇರುವ ರೈಲುಗಳು ಕೇರಳದಿಂದ ಬರುತ್ತಿದ್ದು, ಸದಾ ಭರ್ತಿಯಾಗಿರುತ್ತವೆ. ಮಂಗಳೂರಿನಿಂದ ಮಂಗಳೂರು ಸೆಂಟ್ರಲ್‌-ಅಹಮದಾಬಾದ್‌ ವಯಾ ಮಡಗಾಂವ್‌ ನೇರ ರೈಲು ಪ್ರಾರಂಭದಿಂದ ಮಂಗಳೂರು, ಉಡುಪಿ, ಕುಂದಾಪುರ, ಭಟ್ಕಳ, ಕಾರವಾರದ ಪ್ರಯಾಣಿಕರಿಗೆ ಪ್ರಯೋಜನ ವಾಗಲಿದೆ. ಇದು ವಸಾಯಿ ಮೂಲಕ ಹೋಗು ವುದರಿಂದ ಪಶ್ಚಿಮ ಮುಂಬಯಿಯಲ್ಲಿ ವಾಸವಿರುವ ಕರಾವಳಿಗರಿಗೂ ಅನುಕೂಲಕರ. ಜತೆಗೆ ಕರಾವಳಿ ಭಾಗದಲ್ಲಿ ಮಡಗಾಂವ್‌ವರೆಗೆ ಇರುವ ಪ್ರಮುಖ ಕೇಂದ್ರಗಳಿಗೆ ತೆರಳುವ ಪ್ರಯಾಣಿಕರಿಗೂ ಉಪಯುಕ್ತ.

ಈಗ ಮಂಗಳೂರಿನಿಂದ ಭಾವ್‌ ನಗರಕ್ಕೆ ರೈಲು ಸಂಚಾರ ಆರಂಭಗೊಳ್ಳುವ ಮೂಲಕ ಇದು ಸಾಕಾರಗೊಳ್ಳಲಿದೆ.

ಮಂಗಳೂರಿನಿಂದ ರಾಮೇಶ್ವರ ಮತ್ತು ಅಹಮದಾಬಾದ್‌ ನಗರಗಳಿಗೆ ರೈಲು ಸಂಚಾರ ಆರಂಭಿಸಬೇಕು ಎಂಬುದಾಗಿ ಪಶ್ಚಿಮ ಕರಾವಳಿ ರೈಲ್ವೇ ಯಾತ್ರಿ ಅಭಿವೃದ್ಧಿ ಸಂಘ ಹಲವು ಬಾರಿ ಮಾಡಿರುವ ಮನವಿ ಸಾಕಾರಗೊಳ್ಳುವ ಸಮಯ ಸನ್ನಿಹಿತವಾಗಿದೆ.

ಮಂಗಳೂರು ಸಂಸದರು ಕೂಡ ಇದಕ್ಕೆ ಬಹಳಷ್ಟು ಪ್ರಯತ್ನ ಮಾಡಿದ್ದಾರೆ ಎಂದು ಸಂಘದ ಅಧ್ಯಕ್ಷ ಹನುಮಂತ ಕಾಮತ್‌ ಸಂತಸ ವ್ಯಕ್ತಪಡಿಸಿದ್ದಾರೆ. ಕಣ್ಣೂರು-ಬೆಂಗಳೂರು ಎಕ್ಸ್‌ಪ್ರಸ್‌ ರೈಲು ಕಲ್ಲಿಕೋಟೆಯವರೆಗೆ ವಿಸ್ತರಣೆಯಾದರೆ ಮಂಗಳೂರು ಭಾಗದ ಪ್ರಯಾಣಿಕರಿಗೆ ಸೀಟು ರಿಸರ್ವೇಶನ್‌ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿದ್ದು, ಇದನ್ನು ಸಂಸದರ ಗಮನಕ್ಕೆ ತರಲಾಗುವುದು ಎಂದವರು ಹೇಳಿದ್ದಾರೆ.

ಉದಯವಾಣಿ ಗಮನ ಸೆಳೆದಿತ್ತು
ಮಂಗಳೂರು- ರಾಮೇಶ್ವರ ವಯಾ ಮಧುರೈ; ಮಂಗಳೂರು ಸೆಂಟ್ರಲ್‌- ಅಹ್ಮದಾಬಾದ್‌ ವಯಾ ಮಡಗಾಂವ್‌, ಮಂಗಳೂರು ಸೆಂಟ್ರಲ್‌- ತಿರುಪತಿ ವಯಾ ಹಾಸನ- ಬೆಂಗಳೂರು ಹಾಗೂ ಮಂಗಳೂರು- ಅಯೋಧ್ಯೆ ಸೇರಿದಂತೆ ಕರಾವಳಿಗೆ ಅತೀ ಉಪಯುಕ್ತವಾಗಲಿರುವ ಹೊಸ ರೈಲುಗಳ ಸಂಚಾರದ ಬಹುದಿನಗಳ ಬೇಡಿಕೆ ಈಡೇರದಿರುವ ಬಗ್ಗೆ ಮೇ 12ರಂದು “ಉದಯವಾಣಿ’ ವಿಶೇಷ ವರದಿ ಪ್ರಕಟಿಸಿ ಗಮನ ಸೆಳೆದಿತ್ತು.

ಮಂಗಳೂರಿನಿಂದ ರಾಮೇಶ್ವರ ಮತ್ತು ಅಹ್ಮದಾಬಾದ್‌ಗೆ ರೈಲು ಸಂಚಾರ ಆರಂಭಿಸ ಬೇಕು ಎಂದು ನಾನು ದಕ್ಷಿಣ ರೈಲ್ವೇ ಮತ್ತು ರೈಲ್ವೇ ಸಚಿವರನ್ನು ಕೋರಿದ್ದೆ. ಈಗ ಐಆರ್‌ಟಿಟಿಸಿ ಸಭೆಯಲ್ಲಿ ಇದು ಅನುಮೋದನೆ ಗೊಂಡಿದ್ದು, ರೈಲ್ವೇ ಮಂಡಳಿಗೆ ಸಲ್ಲಿಕೆಯಾಗಿದೆ.
-ನಳಿನ್‌ ಕುಮಾರ್‌ ಕಟೀಲು, ಸಂಸದರು, ದ.ಕ.

ವೇಳಾಪಟ್ಟಿ ಬದಲು?
ನಂ. 16346 ತಿರುವನಂತಪುರ-ಲೋಕಮಾನ್ಯ ತಿಲಕ್‌ ನೇತ್ರಾವತಿ ಎಕ್ಸ್‌ಪ್ರೆಸ್‌ನ ವೇಳಾಪಟ್ಟಿ ಬದಲಾವಣೆ ಮತ್ತು 12620/12619 ಮಂಗಳೂರು-ಮತ್ಸ್ಯಗಂಧ ರೈಲು ನಡುವೆ ರೇಕ್‌ ಹಂಚಿಕೆ ಪ್ರಸ್ತಾವನೆ ಅನುಮೋದನೆಗೊಂಡಿದೆ. ಪ್ರಸ್ತುತ ಮುಂಬಯಿಯಿಂದ ಬೆಳಗ್ಗೆ ಬರುವ ಮತ್ಸ್ಯಗಂಧ ರೈಲು ಮಂಗಳೂರು-ತಿರುವನಂತಪುರ ರೈಲು ಆಗಿ ಸಂಚರಿಸುತ್ತದೆ. ತಿರುವನಂತಪುರದಿಂದ ಬೆಳಗ್ಗೆ ಬರುವ ರೈಲು ಅಪರಾಹ್ನ 2.30ಕ್ಕೆ ಮತ್ಸ್ಯಗಂಧ ರೈಲು ಆಗಿ ಮುಂಬಯಿಗೆ ತೆರಳುತ್ತದೆ. ಇದಕ್ಕೆ ಹೆಚ್ಚುವರಿಯಾಗಿ ಒಂದು ರೇಕ್‌ ಬೇಕಾಗುತ್ತದೆ. ಇದನ್ನು ನಿವಾರಿಸಲು ಇನ್ನು ಮುಂದೆ ರೇಕ್‌ ನೇತ್ರಾವತಿ ಎಕ್ಸ್‌ಪ್ರೆಸ್‌ ಮತ್ತು ಮತ್ಸ್ಯಗಂಧ ನಡುವೆ ಹಂಚಿಕೆಯಾಗಲಿದೆ.

-ಕೇಶವ ಕುಂದರ್‌

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.