ಉರ್ವಸ್ಟೋರ್ ಅಂಗನವಾಡಿಗೆ ಹೊಸ ಕಳೆ


Team Udayavani, Dec 2, 2017, 11:46 AM IST

2-Dec-6.jpg

ಉರ್ವಸ್ಟೋರ್‌: ಕುಸಿದು ಬೀಳುವ ಹಂತದಲ್ಲಿದ್ದ ಉರ್ವಸ್ಟೋರ್‌ ಅಂಗನವಾಡಿ ಕಟ್ಟಡ ಈಗ ದುರಸ್ತಿಗೊಂಡು ಸುಣ್ಣ ಬಣ್ಣಗಳಿಂದ ಕಂಗೊಳಿಸುತ್ತಿದೆ. ಶಿಥಿಲಗೊಂಡಿದ್ದ ಕಿಟಕಿ ಗಾಜು, ಶೀಟ್‌ಗಳು ಸುಸ್ಥಿತಿಯಲ್ಲಿವೆ. ಜೀವ ಭಯದಲ್ಲಿ ಪಾಠ ಕೇಳುತ್ತಿದ್ದ ಪುಟಾಣಿಗಳು ನಿಶ್ಚಿಂತೆಯಿಂದಿದ್ದಾರೆ. ತುಕ್ಕು ಹಿಡಿದಿದ್ದ ಶೀಟ್‌ಗಳನ್ನು ಬದಲಾಯಿಸಿ, ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಲಾಗಿದೆ. ಗೋಡೆಯಲ್ಲಿದ್ದ ಬಿರುಕುಗಳಿಗೆ ಸಿಮೆಂಟ್‌ ತುಂಬಿಸಿ ಸರಿಪಡಿಸಿ ಪೂರ್ತಿ ಕಟ್ಟಡಕ್ಕೆ ಪೈಂಟ್‌ ಬಳಿಯಲಾಗಿದೆ.

ಈ ಅಂಗನವಾಡಿಯು ಪೂರ್ಣವಾಗಿ ಸರಕಾರದ ಸುಪರ್ದಿಗೆ ಬರುವುದಿಲ್ಲ. ಅಂಗನವಾಡಿಯ ಕಾಮಗಾರಿಯ ಖರ್ಚು ವೆಚ್ಚವನ್ನು ಪ್ರಗತಿ ಮಹಿಳಾ ಮಂಡಲದ ಕಾರ್ಯಕರ್ತರು ನಿಭಾಯಿಸುತ್ತಿದ್ದಾರೆ. ಈಗ ಅವರೇ ಸ್ವಂತ ಹಣದಿಂದ ದುರಸ್ತಿ ಕಾಮಗಾರಿಯನ್ನೂ ನಡೆಸಿದ್ದಾರೆ.

ಸದ್ಯದಲ್ಲೇ ಮರದ ಸ್ಥಳಾಂತರ
ಅಂಗನವಾಡಿ ಪಕ್ಕದಲ್ಲಿಯೇ ದೊಡ್ಡದಾದ ಮರವಿದ್ದು, ಇದರ ರೆಂಬೆಗಳು ಬೀಳುವ ಸ್ಥಿತಿಯಲ್ಲಿವೆ. ಈ ಹಿಂದೆಯೂ ರೆಂಬೆ ಬಿದ್ದು, ಅನೇಕ ಶೀಟ್‌ಗಳು ಒಡೆದು ಹೋಗಿದ್ದವು. ಈ ಬಗ್ಗೆ ಮಹಿಳಾ ಮಂಡಳಿ ಕಾರ್ಯಕರ್ತೆಯರು ಅರಣ್ಯ ಇಲಾಖೆಗೆ ಪತ್ರ ಬರೆದಿದ್ದು, ಕೂಡಲೇ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂಬ ಭರವಸೆಯನ್ನು ಅಧಿಕಾರಿಗಳು ನೀಡಿದ್ದಾರೆ.

ಅಂಗನವಾಡಿ ದುರಸ್ತಿಯಲ್ಲಿ ಪ್ರಗತಿ ಮಹಿಳಾ ಮಂಡಲದ ಸದಸ್ಯೆ ಪುಷ್ಪಾವತಿ ಸಹಿತ ಅಂಗನವಾಡಿ ಶಿಕ್ಷಕಿ, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು. ಅಲ್ಲದೆ, ಅಂಗನವಾಡಿ ಮಕ್ಕಳ ಪೋಷಕರು ಕೂಡ ಕೈಜೋಡಿಸಿದ್ದರು. ಕಾಮಗಾರಿ ವೇಳೆ ಮಕ್ಕಳ ಪಾಠಕ್ಕೆ ಯಾವುದೇ ತೊಂದರೆಯಾದಂತೆ ಕಾಮಗಾರಿ ನಿರ್ವಹಿಸಲಾಗಿತ್ತು.

‘ಸುದಿನ’ ಫಲಶ್ರುತಿ
ಅಂಗನವಾಡಿ ಕಟ್ಟಡದ ದುಃಸ್ಥಿತಿ ಬಗ್ಗೆ ‘ಸುದಿನ’ ಅ.17ರಂದು ವಿಶೇಷ ವರದಿ ಪ್ರಕಟಿಸಿತ್ತು. ಇದರಿಂದ ಎಚ್ಚೆತ್ತ ಇಲಾಖಾ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ತತ್‌ಕ್ಷಣವೇ ಕಾಮಗಾರಿ ನಡೆಸುವಂತೆ ಆದೇಶಿಸಿದ ಪರಿಣಾಮ ಮೊದಲನೇ ಹಂತದ ಕಾಮಗಾರಿ ನಡೆದಿತ್ತು. ಬಳಿಕ ಮಳೆಯ ಕಾರಣದಿಂದಾಗಿ ಗೋಡೆಗಳಿಗೆ ಪೈಂಟ್‌ ಬಳಿಯಲು ಸಾಧ್ಯವಾಗಲಿಲ್ಲ. 

ತುರ್ತು ಕೆಲಸ ಪೂರ್ಣ
ಸದ್ಯ ಅಂಗನವಾಡಿಗೆ ಪೈಂಟ್‌ ಬಳಿದು ಕಿಟಕಿಗೆ ಗಾಜು ಅಳವಡಿಸಲಾಗಿದೆ. ಒಡೆದು ಹೋಗಿದ್ದ ಶೀಟ್‌ಗಳನ್ನು ಬದಲಾಯಿಸಲಾಗಿದೆ. ತುರ್ತು ಕಾಮಗಾರಿ ಪೂರ್ಣಗೊಂಡಿದ್ದು, ಮುಂದಿನ ದಿನಗಳಲ್ಲಿ ನೆಲಕ್ಕೆ ಸಿಮೆಂಟ್‌ ಹಾಕುವ ಕೆಲಸ ಮಾಡಲಾಗುವುದು. ಪ್ರಗತಿ ಮಹಿಳಾ ಮಂಡಲದ ಕಾರ್ಯಕರ್ತೆಯರ ವಿಶೇಷ ಮುತು ವರ್ಜಿಯಿಂದ ಈ ಕಾರ್ಯಗಳು ನಡೆದಿವೆ. 
ಶೋಭಾ, ಮಹಿಳಾ ಮತ್ತು ಮಕ್ಕಳ
  ಅಭಿವೃದ್ಧಿ ಇಲಾಖೆ ಅಧಿಕಾರಿ, ಮಂಗಳೂರು

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.