ತಂತಿಬೇಲಿ ನಿರ್ಮಾಣಕ್ಕೆ ಎನ್‌ಎಚ್‌ಎಐಗೆ ಪ್ರಸ್ತಾವನೆ

ಪಾಣೆಮಂಗಳೂರು - ಉಳ್ಳಾಲ ಸೇತುವೆಯಲ್ಲಿ ಹೆಚ್ಚುತ್ತಿರುವ ಆತ್ಮಹತ್ಯೆ ಪ್ರಕರಣ 

Team Udayavani, Oct 3, 2019, 5:45 AM IST

x-37

ಮಹಾನಗರ: ದಕ್ಷಿಣ ಕನ್ನಡದ ಜೀವ ನದಿಯಾದ ನೇತ್ರಾವತಿಯ ಉಳ್ಳಾಲ ಮತ್ತು ಪಾಣೆಮಂಗಳೂರಿನ ಸೇತುವೆಯು ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ತಾಣವಾಗಿ ಬದಲಾಗಿದ್ದು, ಸ್ಥಳೀಯಾಡಳಿತ ಹಾಗೂ ಪೊಲೀಸರಿಗೆ ಬಹುದೊಡ್ಡ ತಲೆನೋವಾಗಿದೆ.

ಮೂರ್‍ನಾಲ್ಕು ತಿಂಗಳಲ್ಲಿ ಸುಮಾರು 6ಕ್ಕೂ ಹೆಚ್ಚು ಮಂದಿ ಈ ಎರಡು ಸೇತುವೆಗಳಿಂದ ನದಿಗೆ ಹಾರಿ ಆತ್ಮಹತೆ ಮಾಡಿಕೊಂಡಿದ್ದು, ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ. ಸೆ. 28ರಂದು ಪಾಣೆ ಮಂಗಳೂರಿನ ಸೇತುವೆಯಿಂದ ಒಂದೇ ಕುಟುಂಬದ ಮೂವರು ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಗ ಹೊರ ಜಿಲ್ಲೆಗಳಿಂದಲೂ ಆತ್ಮಹತ್ಯೆಗಾಗಿ ಇಲ್ಲಿಗೆ ಬರುತ್ತಿರುವುದು ಆತಂಕದ ಸಂಗತಿಯಾಗಿದೆ. ಇಂಥ ದುರಂತಗಳನ್ನು ತಡೆಯಲು ಜಿಲ್ಲಾಡಳಿತ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕಾದ ಅಗತ್ಯ ಹೆಚ್ಚಾಗಿದೆ.

ಇಂಥ ಪ್ರಕರಣಗಳು ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ತಲೆ ನೋವಾಗಿ ಪರಿಣಮಿಸಿದೆ. ಜತೆಗೆ ನದಿಗೆ ಹಾರಿದವರನ್ನು ರಕ್ಷಿಸಲು ಅಥವಾ ಮೃತದೇಹ ಮೇಲೆತ್ತಲು ಜಿಲ್ಲಾಡಳಿತ, ಪೊಲೀಸರು ಮತ್ತು ನಾಗರಿಕರು ಸಾಕಷ್ಟು ಶ್ರಮಿಸುವ ಸ್ಥಿತಿ ನೆಲೆಸಿದೆ.

ಪೊಲೀಸ್‌ ಗಸ್ತು
ಉಳ್ಳಾಲ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್‌ ಇಲಾಖೆ, ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಸೇತು ವೆಯ ಎರಡೂ ತುದಿಗಳಲ್ಲಿ ಪೊಲೀಸ್‌ ಗಸ್ತು ವ್ಯವಸ್ಥೆ ಮಾಡಲಾಗಿದೆ. ಜತೆಗೆ ಸೇತುವೆಯುದ್ದಕ್ಕೂ ಕಬ್ಬಿಣದ ತಂತಿ (ತಡೆ) ಬೇಲಿಯನ್ನು ನಿರ್ಮಿ ಸುವ ಬಗ್ಗೆ ಮಂಗಳೂರಿನ ಪೊಲೀಸ್‌ ಕಮಿಷನರೆಟ್‌ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್‌ಎಚ್‌ಎಐ) ಪ್ರಸ್ತಾವನೆಯನ್ನೂ ಸಲ್ಲಿಸಲಾಗಿದೆ.

ಸಿದ್ಧಾರ್ಥ್ ಪ್ರಕರಣದ ಬಳಿಕ ಹೆಚ್ಚಳ
ಕೆಫೆ ಕಾಫಿ ಡೇ ಸ್ಥಾಪಕ ಸಿದ್ಧಾರ್ಥ್ ಅವರು ಜು. 29ರಂದು ಉಳ್ಳಾಲ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿ ಕೊಂಡ ಬಳಿಕ ಹೊರ ಜಿಲ್ಲೆಗಳಿಂದಲೂ ಇಲ್ಲಿಗೆ ಬಂದು ಸಾವಿಗೆ ಶರಣಾಗುವುದು ಹೆಚ್ಚಾಗಿದೆ. ಸಿದ್ಧಾರ್ಥ್ ಪ್ರಕರಣ ಸಹಿತ 3 ತಿಂಗಳ ಅವಧಿಯಲ್ಲಿ ಇಲ್ಲಿ ಓರ್ವ ಯುವತಿ ಸಹಿತ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ್ದ ಮತ್ತಿಬ್ಬರನ್ನು ರಕ್ಷಿಸಲಾಗಿದೆ. ಸೇತುವೆ ಬಳಿ ದ್ವಿಚಕ್ರ ವಾಹನ ನಿಲ್ಲಿಸಿ ನಾಪತ್ತೆಯಾದ ಓರ್ವರು ಇನ್ನೂ ಪತ್ತೆಯಾಗಿಲ್ಲ.

ಪಾಣೆ ಮಂಗಳೂರು ಸೇತುವೆಯಿಂದ ಹಾರಿ ಒಂದೇ ಕುಟುಂಬದ ಮೂವರು ನದಿಗೆ ಹಾರಿದ್ದಾರೆ. ಇವೆಲ್ಲವೂ ಈ ಎರಡು ಸೇತುವೆಗಳು ಈಗ ಆತ್ಮಹತ್ಯೆ ಸ್ಪಾಟ್‌ ಆಗುತ್ತಿದೆ ಎಂಬ ಮಾತನ್ನು ಪುಷ್ಟೀಕರಿಸುತ್ತಿದೆ.

ತಡೆ ಬೇಲಿ ಪ್ರಸ್ತಾವನೆ ತಾಂತ್ರಿಕ ತಜ್ಞರಿಗೆ ಸಲ್ಲಿಕೆ
ಮಂಗಳೂರು ತಲಪಾಡಿ ಮಧ್ಯೆ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಇರುವುದರಿಂದ ಜಪ್ಪಿನಮೊಗರು ಸಮೀಪ ನೇತ್ರಾವತಿ ನದಿಗೆ ಎರಡು ಸೇತುವೆಗಳಿವೆ. ಇವು ತಲಾ 840 ಮೀ. ಉದ್ದ ಇದೆ. ಇವುಗಳ ಎರಡೂ ಬದಿಗಳಿಗೆ ತಂತಿ ಬೇಲಿ ನಿರ್ಮಿಸಬೇಕಾಗಿದೆ. ಪೊಲೀಸ್‌ ಕಮಿಷನರೆಟ್‌ ವತಿಯಿಂದ ಎನ್‌ಎಚ್‌ಎಐಗೆ ಸಲ್ಲಿಸಿದ ಪ್ರಸ್ತಾವನೆಯಲ್ಲಿ ಎರಡೂ (ಉಳ್ಳಾಲ) ಸೇತುವೆಗಳಿಗೆ ಎರಡೂ ಬದಿ 10 ಅಡಿ ಎತ್ತರಕ್ಕೆ ಪೂರ್ತಿಯಾಗಿ ಕಬ್ಬಿಣದ ವೈರ್‌ ಹಾಕಿ ತಡೆ ಬೇಲಿ ನಿರ್ಮಿಸಬೇಕು ಎಂದು ನಮೂದಿಸಲಾಗಿದೆ.

ಪ್ರಸ್ತಾವನೆ ತಾಂತ್ರಿಕ ತಜ್ಞರಿಗೆ ಸಲ್ಲಿಕೆ: ಎನ್‌ಎಚ್‌ಎಐ
ಬೇಲಿ ಮಾಡುವ ಪ್ರಸ್ತಾವ ಸೇತುವೆ ನಿರ್ಮಿಸುವಾಗ ತಯಾರಿಸಿದ ಮೂಲ ಯೋಜನೆಯಲ್ಲಿ ಇರಲಿಲ್ಲ. ಹಾಗಾಗಿ ಅದಕ್ಕೆ ತಗಲುವ ವೆಚ್ಚವನ್ನು ಹೆಚ್ಚುವರಿ ಎಂದು ಪರಿಗಣಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಫೆನ್ಸಿಂಗ್‌ ಕುರಿತಂತೆ ಅಂದಾಜು ಪತ್ರ (ಎಸ್ಟಿಮೇಟ್‌) ತಯಾರಿಸುವ ಬಗ್ಗೆ ಹಾಗೂ ಸೇತುವೆಗಳ ಉದ್ದಕ್ಕೂ ಎರಡೂ ಬದಿ ತಡೆಬೇಲಿ ನಿರ್ಮಾಣದ ಸಾಧ್ಯಾಸಾಧ್ಯತೆಯನ್ನು ಪರಿಶೀಲಿಸಿ ವರದಿ ಸಲ್ಲಿಸುವಂತೆ ಕನ್ಸಲ್ಟೆಂಟ್‌ ಎಂಜಿನಿಯರ್‌ಗೆ (ತಾಂತ್ರಿಕ ಸಲಹೆಗಾರರಿಗೆ) ಸಲ್ಲಿಸಲಾಗಿದೆ. ಅವರ ವರದಿಯನ್ನು ಆಧರಿಸಿ ಮುಂದಿನ ತೀರ್ಮಾನವನ್ನು ಎನ್‌ಎಚ್‌ಎಐ ಅಧಿಕಾರಿಗಳು ಕೈಗೊಳ್ಳಲಿದ್ದಾರೆ ಎಂದು ಎನ್‌ಎಚ್‌ಎಐ ಕಚೇರಿ ಮೂಲಗಳು ತಿಳಿಸಿವೆ.

ಸಾಕಷ್ಟು ಬಾರಿ ಪತ್ರ ವ್ಯವಹಾರ
ಸಿದ್ಧಾರ್ಥ್ ಪ್ರಕರಣದ ಬಳಿಕ ಉಳ್ಳಾಲದ ಸೇತುವೆಗಳಿಗೆ ಬೇಲಿ ನಿರ್ಮಿ ಸು ವ ಬಗ್ಗೆ ಎನ್‌ಎಚ್‌ಎಐ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಈ ಸೇತುವೆ ಬಳಿ ಪದೇಪದೆ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಫೆನ್ಸಿಂಗ್‌ ಕುರಿತಂತೆ ಸಾಕಷ್ಟು ಬಾರಿ ಪತ್ರ ವ್ಯವಹಾರ ನಡೆಸಲಾಗಿದೆ.
– ಡಾ| ಹರ್ಷ ಪಿ.ಎಸ್‌., ಪೊಲೀಸ್‌ ಆಯುಕ್ತರು.

ಆತ್ಮಹತ್ಯೆಗೆ ಶರಣಾದವರು/ ಯತ್ನಿಸಿದವರು
-ಜು. 29: ಕೆಫೆ ಕಾಫಿ ಡೇ ಸ್ಥಾಪಕ ಸಿದ್ಧಾರ್ಥ್ ಅವರು ಉಳ್ಳಾಲ ಸೇತುವೆಯ ಬಳಿ ನಿಗೂಢವಾಗಿ ನಾಪತ್ತೆಯಾಗಿ ಜು. 31ರಂದು ಸೇತುವೆಯಿಂದ ಸುಮಾರು 4.5 ಕಿ. ಮೀ. ದೂರ ಹೊಗೆ ಬಜಾರ್‌ ಐಸ್‌ಪ್ಲಾಂಟ್‌ ಬಳಿ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದರು.

– ಆ.4: ಉರ್ವಸ್ಟೋರಿನ ಎಳನೀರು ವ್ಯಾಪಾರಿ, ಚಿಕ್ಕಮಗಳೂರು ಜಿಲ್ಲೆ ಕಡೂರು ನಿವಾಸಿ ಗಿರೀಶ್‌ (22) ಅವರು ಉಳ್ಳಾಲ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ಹಾರಿದ ಬಳಿಕ ಪತ್ನಿ ಮತ್ತು ಮಗುವಿನ ನೆನಪಾಗಿ ಈಜುತ್ತಿದ್ದ ಅವರನ್ನು ಸ್ಥಳೀಯರು ರಕ್ಷಿಸಿದ್ದರು.

-ಆ. 9: ನಗರದ ಪ್ಲೈವುಡ್‌ ಕಂಪೆನಿ ಕಾರ್ಮಿಕೆ, ಪುತ್ತೂರು ಬಡಗನ್ನೂರು ಕೋಡಿಯಡ್ಕ ನಿವಾಸಿ ಗಜನೀಶ್ವರಿ ಕೆ. (24) ಅವರು ಉಳ್ಳಾಲ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿದ್ದು, ಎರಡು ದಿನಗಳ ಬಳಿಕ ಆಕೆಯ ಶವ ಸೋಮೇಶ್ವರ ಉಚ್ಚಿಲ ಬಳಿ ಪತ್ತೆಯಾಗಿತ್ತು.

-ಆ. 17: ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣದಲ್ಲಿ ರೈಲುಗಳಿಗೆ ಮತ್ತು ರೈಲ್ವೇ ಕಚೇರಿಗೆ ಕುಡಿಯುವ ನೀರು ಸರಬರಾಜು ಮಾಡುವ ಗುತ್ತಿಗೆ ವಹಿಸಿಕೊಂಡಿದ್ದ ಕಡಬ ತಾಲೂಕು ಬಾಳ್ತಿಲ ನಿವಾಸಿ ಸದಾಶಿವ (28) ಅವರು ನದಿಗೆ ಹಾರಿದ್ದರು. ಆ. 25ರಂದು ಎನ್‌ಎಂಪಿಟಿ ಯಿಂದ 12 ಕಿ.ಮೀ. ದೂರ ಸಮುದ್ರದಲ್ಲಿ ಅವರ ಶವ ಪತ್ತೆಯಾಗಿತ್ತು.

-ಆ. 30: ನಾಗುರಿಯ ಫೋಟೋಗ್ರಾಫರ್‌ ಬೆಂಗಳೂರು ಮೂಲದ ಪದ್ಮರಾಜ್‌ (18) ಉಳ್ಳಾಲ ಸೇತುವೆಯಿಂದ ನದಿಗೆ ಹಾರಿದ್ದು, ಆತನನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದರು.

-ಸೆ. 11: ನಗರದ ಬಿಜೈ ನ್ಯೂ ರೋಡ್‌ನ‌ 6 ನೇ ಅಡ್ಡ ರಸ್ತೆಯ ನಿವಾಸಿ ನಿವೃತ್ತ ಬ್ಯಾಂಕ್‌ ಉದ್ಯೋಗಿ ಸದಾಶಿವ ರಾವ್‌ (64) ಅವರು ಉಳ್ಳಾಲ ಸೇತುವೆ ಬಳಿ ಸ್ಕೂಟರ್‌ ಇಟ್ಟು ನಿಗೂಢವಾಗಿ ನಾಪತ್ತೆಯಾಗಿದ್ದು, ಇದುವರೆಗೂ ಪತ್ತೆಯಾಗಿಲ್ಲ.

-ಸೆ. 28: ಕೊಡಗು ಜಿಲ್ಲೆಯ ಕವಿತಾ ಮಂದಣ್ಣ (55), ಅವರ ಪುತ್ರ ಕೌಶಿಕ್‌ ಮಂದಣ್ಣ (30) ಮತ್ತು ಪುತ್ರಿ ಕಲ್ಪಿತಾ ಮಂದಣ್ಣ (20) ಸಾಕು ನಾಯಿ ಯೊಂದಿಗೆ ಪಾಣೆಮಂಗಳೂರಿನ ಸೇತುವೆಯಿಂದ ನದಿಗೆ ಹಾರಿದ್ದರು.

– ಹಿಲರಿ ಕ್ರಾಸ್ತಾ

ಟಾಪ್ ನ್ಯೂಸ್

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.