ಕ್ಷಯ ಮುಕ್ತ ಭಾರತಕ್ಕಾಗಿ ನಿ-ಕ್ಷಯ ಮಿತ್ರ


Team Udayavani, Dec 22, 2022, 5:05 AM IST

ಕ್ಷಯ ಮುಕ್ತ ಭಾರತಕ್ಕಾಗಿ ನಿ-ಕ್ಷಯ ಮಿತ್ರ

ಬಂಟ್ವಾಳ : ಪ್ರಧಾನಿ ನರೇಂದ್ರ ಮೋದಿಯವರು 2025ರ ವೇಳೆಗೆ ಕ್ಷಯ (ಟಿಬಿ) ರೋಗ ನಿರ್ಮೂಲನೆ ಉದ್ದೇಶದಿಂದ ಆರಂಭಿಸಿರುವ “ಪ್ರಧಾನಮಂತ್ರಿ ಕ್ಷಯ ಮುಕ್ತ ಭಾರತ ಅಭಿಯಾನ’ದ ಭಾಗವಾಗಿ ಸೆಪ್ಟಂಬರ್‌ನಿಂದ “ನಿ-ಕ್ಷಯ ಮಿತ್ರ’ ಯೋಜನೆ ಮೂಲಕ ರೋಗಿಗಳಿಗೆ ಆಹಾರದ ಕಿಟ್‌ ನೀಡಲಾಗುತ್ತಿದೆ.

ಕರ್ನಾಟಕದ ಆರೋಗ್ಯ ಇಲಾಖೆಯು “ಕ್ಷಯ ಮುಕ್ತ ಕರ್ನಾಟಕ-2025′ ಕಾರ್ಯತಂತ್ರವನ್ನು ಅಳವಡಿಸಿಕೊಂಡು ಸಂಘ-ಸಂಸ್ಥೆಗಳು, ಕಂಪೆನಿ ಗಳು, ಎನ್‌ಜಿಒಗಳು ಕ್ಷಯ ರೋಗಿಗಳನ್ನು ದತ್ತು ಪಡೆದು ಅವರಿಗೆ ಅಗತ್ಯ ಪೌಷ್ಟಿಕಾಂಶ ಪೂರೈಸಲಾರಂಭಿಸಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ 645 ಮಂದಿಗೆ ಕಿಟ್‌ ವಿತರಿಸುವ ಕಾರ್ಯ ಪ್ರಗತಿಯಲ್ಲಿದೆ.

ಏನಿದು ನಿ-ಕ್ಷಯ ಮಿತ್ರ?
ಕ್ಷಯ ರೋಗಿಗಳು ಮತ್ತು ದಾನಿಗಳ ವಿವರ ಗಳನ್ನು ನಿ-ಕ್ಷಯ ತಂತ್ರಾಂಶದಲ್ಲಿ ದಾಖಲಿಸಿ ದಾನಿ ಗಳು ರೋಗಿಗಳನ್ನು ದತ್ತು ಪಡೆಯಲು ಅವ ಕಾಶ ಕಲ್ಪಿಸಲಾಗುತ್ತಿದೆ. ಈ ತಂತ್ರಾಂಶದಿಂದ ದೇಶದಲ್ಲಿ ಎಷ್ಟು ರೋಗಿಗಳಿಗೆ ಯಾವ ದಾನಿಗಳು ಕಿಟ್‌ ಒದ ಗಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗುತ್ತದೆ.

ಅಧಿಕೃತ ಜ್ಞಾಪನ ಪತ್ರ
ಕ್ಷಯ ರೋಗಿಗಳಿಗೆ ಕನಿಷ್ಠ 6 ತಿಂಗಳು ಪೌಷ್ಟಿಕ ಆಹಾರ ಲಭಿಸಿದಾಗ ಅವರ ಜೀವ ನಿರೋಧಕ ಶಕ್ತಿ ಹೆಚ್ಚಳಗೊಂಡು ರೋಗ ನಿವಾರಣೆಗೆ ದೇಹ ಸ್ಪಂದಿಸಲು ಆರಂಭಿಸುತ್ತದೆ. ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ವಿಭಾಗದಿಂದ ಪ್ರತೀ ತಿಂಗಳಿಗೆ ಯಾವ ಆಹಾರಗಳನ್ನು ನೀಡ ಬೇಕು ಎಂಬ ಅಧಿಕೃತ ಜ್ಞಾಪನ ಪತ್ರವನ್ನು ಸಂಬಂಧ  ಪಟ್ಟವರಿಗೆ ಕಳುಹಿಸಿದೆ.

ದ.ಕ., ಉಡುಪಿಯ ವಿವರ
ದ.ಕ. ಜಿಲ್ಲೆಯಲ್ಲಿ 1 ಸಾವಿರದಷ್ಟು ಕ್ಷಯ ರೋಗಿಗಳಿದ್ದು, ಈಗಾಗಲೇ 517 ಮಂದಿಗೆ ಪ್ರತೀ ತಿಂಗಳು ಕಿಟ್‌ ನೀಡಲಾಗುತ್ತಿದೆ. ಆರ್ಥಿಕವಾಗಿ ಶಕ್ತರಿರುವ ರೋಗಿಗಳು ಕಿಟ್‌ ನಿರಾಕರಿಸುತ್ತಿದ್ದು, ಅಗತ್ಯ ಉಳ್ಳವರು ಪಡೆದುಕೊಳ್ಳುತ್ತಿದ್ದಾರೆ. ಜಿಲ್ಲೆ ಯಲ್ಲಿ ಇನ್ನೂ ಹೆಚ್ಚಿನ ರೋಗಿಗಳಿಗೆ ಕಿಟ್‌ನ ಆವಶ್ಯಕತೆ ಇದೆ.

ಉಡುಪಿ ಜಿಲ್ಲೆಯಲ್ಲಿ ಸುಮಾರು 550 ಕ್ಷಯ ರೋಗಿಗಳಿದ್ದು, ಸದ್ಯಕ್ಕೆ 128 ಮಂದಿಗೆ ಕಿಟ್‌ ನೀಡ ಲಾಗುತ್ತಿದೆ. ಈ ಸಂಖ್ಯೆಗಳಲ್ಲಿ ವ್ಯತ್ಯಾಸಗಳಾಗುತ್ತಿದ್ದು, ದಾನಿಗಳು ಮುಂದೆ ಬಂದಂತೆ ರೋಗಿಗಳನ್ನು ಅವರಿಗೆ ಲಿಂಕ್‌ ಮಾಡಲಾಗುತ್ತದೆ. ಪ್ರತೀ ಕಿಟ್‌ಗೆ ಅಲ್ಲಿರುವ ಆಹಾರದ ಆಧಾರದಲ್ಲಿ 800ರಿಂದ 1,200 ರೂ.ಗಳವರೆಗೆ ವೆಚ್ಚ ತಗಲುತ್ತದೆ.

ದ.ಕ. ಜಿಲ್ಲೆಯಲ್ಲಿ ಇನ್ನುಳಿದ ರೋಗಿಗಳಿಗೆ ಆಹಾರ ಕಿಟ್‌ ನೀಡಲು ದಾನಿಗಳ ಆವಶ್ಯಕತೆ ಇದೆ. ಕೆಲವೊಂದು ಸಂಘ-ಸಂಸ್ಥೆಗಳು, ಕಂಪೆನಿಗಳು ಕಿಟ್‌ಗಳನ್ನು ನೀಡುವ ಭರವಸೆ ಈಗಾಗಲೇ ನೀಡಿವೆ.
– ಡಾ| ಬದ್ರುದ್ದೀನ್‌ ಕ್ಷಯ ರೋಗ ನಿಯಂತ್ರಣಾಧಿಕಾರಿ, ದ.ಕ. ಜಿಲ್ಲೆ

ಉಡುಪಿ ಜಿಲ್ಲೆಯಲ್ಲಿ ಸದ್ಯಕ್ಕೆ 568 ಕ್ಷಯ ರೋಗಿಗಳಲ್ಲಿ 128 ಮಂದಿಗೆ ಆಹಾರದ ಕಿಟ್‌ ನೀಡಲಾಗುತ್ತಿದ್ದು, ನಾವು ರೋಗಿಗಳು ಮತ್ತು ದಾನಿಗಳನ್ನು ಪರಸ್ಪರ ಸಂಪರ್ಕಿಸುವ ಕಾರ್ಯ ಮಾಡುತ್ತಿದ್ದೇವೆ. ಕೆಲವೊಂದು ಸಂಸ್ಥೆಗಳು ಸ್ಥಳೀಯ ರೋಗಿಗಳನ್ನೇ ಕೇಳುತ್ತವೆ. ಕೆಲವು ಸಂಸ್ಥೆಗಳು ನಾವು ಹೇಳಿದಕ್ಕಿಂತ ಹೆಚ್ಚಿನ ಆಹಾರ ಸಾಮಗ್ರಿಗಳನ್ನು ನೀಡುತ್ತಿವೆ.
– ಡಾ| ಚಿದಾನಂದ ಸಂಜು, ಕ್ಷಯ ರೋಗ ನಿಯಂತ್ರಣಾಧಿಕಾರಿ, ಉಡುಪಿ ಜಿಲ್ಲೆ

ಸೂಚಿಸಿದ ಆಹಾರ ಸಾಮಗ್ರಿಗಳು
1. ಗೋಧಿ ನುಚ್ಚು- 3 ಕೆಜಿ
2. ಶೇಂಗಾ/ಕಡಲೆ- 1 ಕೆಜಿ
3. ಹೆಸರು ಕಾಳು, ತೊಗರಿ ಬೇಳೆ-ತಲಾ 1 ಕೆಜಿ
4. ಬೆಲ್ಲ- 1 ಕೆಜಿ

– ಕಿರಣ್‌ ಸರಪಾಡಿ

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.