ನಿಡ್ಲೆ: ಮುರುಕಲು ಮನೆಯಲ್ಲಿ ಎಂಡೋ ಪೀಡಿತರ ಬದುಕು


Team Udayavani, Dec 22, 2018, 11:10 AM IST

22-december-4.gif

ಕೊಕ್ಕಡ : ನಿಡ್ಲೆ ಗ್ರಾಮ ಪಂ. ವ್ಯಾಪ್ತಿಯ ನೂಜೋಡಿ ಬಳಿಯ ಬಾರ್ದಡ್ಕ ಎನ್ನುವಲ್ಲಿ ಮುರುಕಲು ಮನೆಯಲ್ಲಿ ಬಡ ಕುಟುಂಬವೊಂದು ಅಸಹಾಯಕ ಸ್ಥಿತಿಯಲ್ಲಿದೆ. ಜನಪ್ರತಿನಿಧಿಗಳ ಭರವಸೆಯಲ್ಲೇ ಇವರ ಬದುಕು ಕೊಚ್ಚಿಹೋಗುತ್ತಿದೆ.

ಬಾರ್ದಡ್ಕದ ಕೃಷ್ಣಪ್ಪ-ಬೇಬಿ ದಂಪತಿ ಕುಟುಂಬ ವಾಸವಾಗಿದ್ದು, ಮುರುಕಲು ಮನೆಯಲ್ಲಿ ದಿನದೂಡುತ್ತಿದೆ. ಇಬ್ಬರೂ ದುಡಿಯಲು ಸಾಧ್ಯವಿಲ್ಲದ ಸ್ಥಿತಿಯಲ್ಲಿದ್ದಾರೆ. ಎಂಡೋಪೀಡಿತರಾಗಿರುವುದರಿಂದ ಮಾಸಿಕ 1,500 ರೂ. ಮಾಸಾಶನ ಸಿಗುತ್ತಿದೆ. ಇದರಲ್ಲೇ ಜೀವನ ನಿರ್ವಹಣೆಯಾಗಬೇಕಿದೆ. ಒಬ್ಬಳೇ ಮಗಳನ್ನು ಶಾಲೆಗೆ ಕಳುಹಿಸಲೂ ಕುಟುಂಬ ಕಷ್ಟ ಪಡುತ್ತಿದೆ .

ಭರವಸೆಗಳು ನೂರಾರು
ಗ್ರಾ.ಪಂ., ತಾ.ಪಂ., ಜಿ.ಪಂ. ಹಾಗೂ ಶಾಸಕರೂ ಕೂಡಾ ಇವರಿಗೆ ಹಲವು ಭರವಸೆ ನೀಡುತ್ತಾ ಬಂದಿದ್ದಾರೆ. ಕಳೆದ 15 ವರ್ಷಗಳಿಂದ ಈ ಕುಟುಂಬ ಭರವಸೆಯ ನಿರೀಕ್ಷೆಯಲ್ಲೇ ಕಾಲ ಕಳೆಯುತ್ತಿದೆ. ಯಾವೊಬ್ಬ ಜನಪ್ರತಿನಿಧಿಯೂ ಇವರ ನೆರವಿಗೆ ಬಂದಿಲ್ಲದಿರುವುದು ನಾಚಿಕೆಗೇಡಿನ ಸಂಗತಿ. ಇವರಿಗೆ ತೀವ್ರ ಅನಾರೋಗ್ಯ ಕಾಡಿದ್ದಾಗ ಮಲೆ ಕುಡಿಯ ಸಂಘಟನೆಗಳು 5 ಸಾವಿರ ರೂ. ನೆರವು ನೀಡಿದ್ದು ಬಿಟ್ಟರೆ ಯಾವ ಜನಪ್ರತಿನಿಧಿಯೂ ತಮ್ಮ ನೆರವಿಗೆ ಬಂದಿಲ್ಲ ಎಂದು ಈ ಬಡಕುಟುಂಬ ಅಳಲು ತೋಡಿಕೊಂಡಿದೆ.

ಗ್ರಾ.ಪಂ. ವತಿಯಿಂದ ಕುಟುಂಬಕ್ಕೆ ಮನೆ ಮಂಜೂರಾಗಿದ್ದು, ಪಂಚಾಂಗದ ಕಾಮಗಾರಿ ಮುಗಿದಿದೆ. ಅದರ ದಾಖಲೆಗಳನ್ನು ಅಪ್‌ಲೋಡ್‌ ಮಾಡಲಾಗಿದೆ. ಆದರೆ, ಫ‌ಲಾನುಭವಿಯ ಖಾತೆಗೆ ಇನ್ನೂ ಹಣ ಬಂದಿಲ್ಲ. ಕಾಮಗಾರಿ ಮುಂದುವರೆಸುವ ಉದ್ದೇಶದಿಂದ ಬ್ಯಾಂಕ್‌ ಹಾಗೂ ಪಂ. ಗೆ ಅಲೆಯುತ್ತಿದ್ದು, ಇನ್ನೂ ಹಣ ಬಾರದೆ ನಿರಾಶವಾಗಿದೆ. ಸರಕಾರದಿಂದ ನೀಡುವ ಉಚಿತ ವಿದ್ಯುತ್‌ ಸಂಪ ರ್ಕಕ್ಕೆ ಗುತ್ತಿಗೆದಾರರು 1,500 ರೂ. ಪಡೆದುಕೊಂಡಿದ್ದಾರೆ. ಅಲ್ಲದೆ, ಈಗಿರುವ ಮುರುಕಲು ಮನೆಗೂ 368 ರೂ. ತೆರಿಗೆಯನ್ನು ವಸೂಲಿ ಮಾಡಿದ್ದಾರೆ ಎಂದೂ ಕುಟುಂಬ ಆರೋಪಿಸುತ್ತಿದೆ.

ಜನಪ್ರತಿನಿಧಿಗಳು ಕೇವಲ ಭರವಸೆ ನೀಡಿ ಏನನ್ನೂ ನೀಡದೇ ಇರುವುದು ಸಾಮಾಜಿಕ ಕಾಳಜಿ ಹೇಗೆಂದು ತಿಳಿಯುತ್ತದೆ. ಇನ್ನೂ ಸ್ಪಂದಿಸದೇ ಇದ್ದಲ್ಲಿ ಡಿಸಿಯವರಲ್ಲಿ ಕುಟುಂಬವನ್ನು ಕರೆದುಕೊಂಡು ಹೋಗಲಾಗುವುದು ಎಂದು ಮಲೆಕುಡಿಯ ಸಂಘ ನಿಡ್ಲೆ ಗ್ರಾಮ ಸಮಿತಿಯ ಕಾರ್ಯದರ್ಶಿ ಗಿರೀಶ್‌ ಹೇಳಿದ್ದಾರೆ.

 ಹಣ ಬಂದಿಲ್ಲ
ಈ ಕುಟುಂಬಕ್ಕೆ ಬಸವ ವಸತಿ ಯೋಜನೆಯಲ್ಲಿ ಮನೆ ಮಂಜೂರಾಗಿದ್ದು, ಪಂಚಾಂಗದ ಕಾಮಗಾರಿ ಮುಗಿದಿದೆ. ಫೆಬ್ರವರಿ ತಿಂಗಳಲ್ಲೇ ಪಂಚಾಯತ್‌ ವತಿಯಿಂದ ದಾಖಲೆಗಳನ್ನು ಸಲ್ಲಿಸಿದ್ದು, ನಿಗಮದಿಂದಲೇ ಕುಟಂಬದ ಖಾತೆಗೆ ಹಣ ಇನ್ನೂ ಬಿಡುಗಡೆಯಾಗಿಲ್ಲ. ವಿಳಂಬದ ಕುರಿತು ಅಧಿಕಾರಿಗಳಲ್ಲಿ ವಿಚಾರಿಸಿ, ಮನೆ ಕಾಮಗಾರಿ ಮುಂದುವರೆಸಲು ಕುಟುಂಬಕ್ಕೆ ಅನುಕೂಲ ಕಲ್ಪಿಸಲಾಗುವುದು.
– ಶುಭಾ ದೇವಧರ್‌,
 ಅಧ್ಯಕ್ಷರು, ನಿಡ್ಲೆ ಗ್ರಾ.ಪಂ.

ವ್ಯವಸ್ಥೆ ಕಲ್ಪಿಸುತ್ತೇವೆ
ಈ ಕುಟುಂಬದ ದುಃಸ್ಥಿತಿಯ ಕುರಿತು ಈಗಷ್ಟೇ ಮಾಹಿತಿ ಬಂದಿದೆ. ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ, ಆ ಕುಟುಂಬದ ಎಲ್ಲ ವೈದ್ಯಕೀಯ ಹಾಗೂ ಇತರ ದಾಖಲೆಗಳನ್ನು ತರಿಸಿಕೊಂಡು, ಎಲ್ಲ ಅಗತ್ಯ ಸೌಕರ್ಯಗಳನ್ನು ಕಲ್ಪಿಸಲಾಗುವುದು. ಪೀಡಿತ ಕುಟುಂಬವನ್ನು ಯಾವುದೇ ಕಾರಣಕ್ಕೂ ಅಲೆದಾಡಿಸಬಾರದು ಎಂದೂ ಸೂಚನೆ ನೀಡಿದ್ದೇನೆ.
– ಎಚ್‌.ಕೆ. ಕೃಷ್ಣಮೂರ್ತಿ,
ಸ. ಆಯುಕ್ತರು, ಪುತ್ತೂರು

 ಗುರುಮೂರ್ತಿ ಎಸ್‌. ಕೊಕ್ಕಡ 

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.