ಸದಭಿರುಚಿಯ ಸಿನೆಮಾಗಳು ಬೆಳೆಯಲಿ: ಸುವರ್ಣ


Team Udayavani, Apr 17, 2018, 7:45 AM IST

Film-Festival-15-4.jpg

ಮಂಗಳೂರು: ನಿಟ್ಟೆ ವಿಶ್ವವಿದ್ಯಾಲಯದ ವತಿಯಿಂದ ಮಂಗಳೂರಿನ ಭಾರತ್‌ ಮಾಲ್‌ ನ ಭಾರತ್‌ ಸಿನಿಮಾಸ್‌ ನಲ್ಲಿ ನಾಲ್ಕು ದಿನಗಳ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸೋಮವಾರ ಚಾಲನೆ ದೊರಕಿತು. ಎ. 19ರ ವರೆಗೆ ವಿವಿಧ ಭಾಷೆಗಳ ಚಿತ್ರಗಳು ಇಲ್ಲಿ ಪ್ರದರ್ಶನಗೊಳ್ಳಲಿವೆ. ಹಿರಿಯ ಚಲನಚಿತ್ರ ನಿರ್ಮಾಪಕ ಹಾಗೂ ರಂಗಕರ್ಮಿ ಸದಾನಂದ ಸುವರ್ಣ ಅವರು ಚಿತ್ರೋತ್ಸವ ಉದ್ಘಾಟಿಸಿ ಮಾತನಾಡಿ, ಸಮಾಜಕ್ಕೆ ಸದಭಿರುಚಿಯ ಸಿನೆಮಾಗಳು ಇನ್ನಷ್ಟು ಬರಬೇಕಿವೆ. ಪ್ರೇಕ್ಷಕರು ಕೂಡ ಉತ್ತಮ ಅಭಿರುಚಿಯ ಸಿನೆಮಾಗಳನ್ನೇ ಬಯಸುತ್ತಾರೆ. ಆಸಕ್ತಿದಾಯಕ ಸಿನೆಮಾ ಪ್ರದರ್ಶನಗಳನ್ನು ವೀಕ್ಷಿಸುವ ಮೂಲಕ ಸಿನೆಮಾಗಳಿಗೆ ಪ್ರೇಕ್ಷಕರಿಗೆ ಕೊರತೆ ಇಲ್ಲ ಎಂಬುದನ್ನು ಕರಾವಳಿ ಜನತೆ ತೋರಿಸಿಕೊಡಬೇಕಿದೆ. ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆಯೋಜನೆಯಿಂದ ಮಂಗಳೂರಿಗರಿಗೆ ಒಳ್ಳೆಯ ಚಿತ್ರಗಳನ್ನು ನೋಡುವ ಭಾಗ್ಯ ದೊರೆತಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ವಿ.ವಿ. ಉಪ ಕುಲಪತಿ ಡಾ| ಸತೀಶ್‌ ಕುಮಾರ್‌ ಭಂಡಾರಿ ಅವರು  ಮಾತನಾಡಿ, ಈ ಚಲನಚಿತ್ರೋತ್ಸವವು ಚಲನಚಿತ್ರ ನಿರ್ಮಾಪಕರಿಗೆ ಮತ್ತು ಚಿತ್ರ ವೀಕ್ಷಕರಿಗೆ ಸೂಕ್ತವಾದ ವೇದಿಕೆ ಒದಗಿಸಲಿದೆ, ಮಂಗಳೂರಿನ ಜನರಿಗೆ ಜಾಗತಿಕ ಮಟ್ಟದಲ್ಲಿ ವಿಮರ್ಶಾತ್ಮಕವಾಗಿ ಪ್ರಶಂಸೆ ಪಡೆದ ಚಲನಚಿತ್ರಗಳನ್ನು ಪ್ರದರ್ಶಿಸಲು ಉದ್ದೇಶಿಸಿದೆ ಎಂದರು. ಚಿತ್ರೋತ್ಸವದ ಸಂಘಟಕ ಪ್ರೊ| ರವಿರಾಜ್‌ ಕಿಣಿ, ವಿದ್ಯಾರ್ಥಿ ಸಂಘಟಕ ಮೈತ್ರೇಯ್‌ ದೇಶಪಾಂಡೆ ಉಪಸ್ಥಿತರಿದ್ದರು.

4 ದಿನ, 60 ಸಿನೆಮಾ
ಸಂಘಟಕ ಪ್ರೊ| ರವಿರಾಜ್‌ ಕಿಣಿ ಮಾತನಾಡಿ, ಭಾರತ್‌ ಸಿನೆಮಾಸ್‌ನಲ್ಲಿ ಎ. 19ರವರೆಗೆ 4ದಿನಗಳ ಕಾಲ ನಡೆಯುವ ಚಿತ್ರೋತ್ಸವದಲ್ಲಿ ವಿವಿಧ ಭಾಷೆಯ 60 ಸಿನೆಮಾಗಳು ಪ್ರದರ್ಶನ ಕಾಣಲಿವೆ. 3 ಸ್ಕ್ರೀನ್‌ಗಳಲ್ಲಿ ದಿನಕ್ಕೆ ತಲಾ ಐದು ಅಥವಾ ಆರು ಪ್ರದರ್ಶನಗಳಿರುತ್ತವೆ. 40 ಮಂದಿ ಸಿನೆಮಾ ನಿರ್ಮಾಪಕರು ಪಾಲ್ಗೊಳ್ಳಲಿದ್ದಾರೆ. ಹಿಂದಿ, ಕನ್ನಡ, ಕೊಂಕಣಿ, ಮಲಯಾಳ, ಬಂಗಾಲಿ, ಗುಜರಾತಿ, ತಮಿಳು, ಫ್ರೆಂಚ್‌, ಚೀನೀ ಭಾಷೆಗಳ ಸಿನೆಮಾಗಳು ಪ್ರದರ್ಶನಗೊಳ್ಳಲಿವೆ. ಸಾರ್ವಜನಿಕರಿಗೆ ಉಚಿತ ಪ್ರವೇಶವಿದೆ. ಮಕ್ಕಳ ಸಿನೆಮಾವನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಹಲವು ಮಕ್ಕಳ ಚಿತ್ರಗಳ ಪ್ರದರ್ಶನವಿದೆ. ಚಿತ್ರ ನಿರ್ಮಾಪಕರ ಜತೆ ಪ್ರೇಕ್ಷಕರಿಗೆ ಸಂವಾದಕ್ಕೆ ಅವಕಾಶವಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ಸಿನೆಮಾಗಳು ಕೂಡ ಇರುತ್ತವೆ ಎಂದು ವಿವರಿಸಿದರು.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.