ಸದಭಿರುಚಿಯ ಸಿನೆಮಾಗಳು ಬೆಳೆಯಲಿ: ಸುವರ್ಣ


Team Udayavani, Apr 17, 2018, 7:45 AM IST

Film-Festival-15-4.jpg

ಮಂಗಳೂರು: ನಿಟ್ಟೆ ವಿಶ್ವವಿದ್ಯಾಲಯದ ವತಿಯಿಂದ ಮಂಗಳೂರಿನ ಭಾರತ್‌ ಮಾಲ್‌ ನ ಭಾರತ್‌ ಸಿನಿಮಾಸ್‌ ನಲ್ಲಿ ನಾಲ್ಕು ದಿನಗಳ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸೋಮವಾರ ಚಾಲನೆ ದೊರಕಿತು. ಎ. 19ರ ವರೆಗೆ ವಿವಿಧ ಭಾಷೆಗಳ ಚಿತ್ರಗಳು ಇಲ್ಲಿ ಪ್ರದರ್ಶನಗೊಳ್ಳಲಿವೆ. ಹಿರಿಯ ಚಲನಚಿತ್ರ ನಿರ್ಮಾಪಕ ಹಾಗೂ ರಂಗಕರ್ಮಿ ಸದಾನಂದ ಸುವರ್ಣ ಅವರು ಚಿತ್ರೋತ್ಸವ ಉದ್ಘಾಟಿಸಿ ಮಾತನಾಡಿ, ಸಮಾಜಕ್ಕೆ ಸದಭಿರುಚಿಯ ಸಿನೆಮಾಗಳು ಇನ್ನಷ್ಟು ಬರಬೇಕಿವೆ. ಪ್ರೇಕ್ಷಕರು ಕೂಡ ಉತ್ತಮ ಅಭಿರುಚಿಯ ಸಿನೆಮಾಗಳನ್ನೇ ಬಯಸುತ್ತಾರೆ. ಆಸಕ್ತಿದಾಯಕ ಸಿನೆಮಾ ಪ್ರದರ್ಶನಗಳನ್ನು ವೀಕ್ಷಿಸುವ ಮೂಲಕ ಸಿನೆಮಾಗಳಿಗೆ ಪ್ರೇಕ್ಷಕರಿಗೆ ಕೊರತೆ ಇಲ್ಲ ಎಂಬುದನ್ನು ಕರಾವಳಿ ಜನತೆ ತೋರಿಸಿಕೊಡಬೇಕಿದೆ. ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆಯೋಜನೆಯಿಂದ ಮಂಗಳೂರಿಗರಿಗೆ ಒಳ್ಳೆಯ ಚಿತ್ರಗಳನ್ನು ನೋಡುವ ಭಾಗ್ಯ ದೊರೆತಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ವಿ.ವಿ. ಉಪ ಕುಲಪತಿ ಡಾ| ಸತೀಶ್‌ ಕುಮಾರ್‌ ಭಂಡಾರಿ ಅವರು  ಮಾತನಾಡಿ, ಈ ಚಲನಚಿತ್ರೋತ್ಸವವು ಚಲನಚಿತ್ರ ನಿರ್ಮಾಪಕರಿಗೆ ಮತ್ತು ಚಿತ್ರ ವೀಕ್ಷಕರಿಗೆ ಸೂಕ್ತವಾದ ವೇದಿಕೆ ಒದಗಿಸಲಿದೆ, ಮಂಗಳೂರಿನ ಜನರಿಗೆ ಜಾಗತಿಕ ಮಟ್ಟದಲ್ಲಿ ವಿಮರ್ಶಾತ್ಮಕವಾಗಿ ಪ್ರಶಂಸೆ ಪಡೆದ ಚಲನಚಿತ್ರಗಳನ್ನು ಪ್ರದರ್ಶಿಸಲು ಉದ್ದೇಶಿಸಿದೆ ಎಂದರು. ಚಿತ್ರೋತ್ಸವದ ಸಂಘಟಕ ಪ್ರೊ| ರವಿರಾಜ್‌ ಕಿಣಿ, ವಿದ್ಯಾರ್ಥಿ ಸಂಘಟಕ ಮೈತ್ರೇಯ್‌ ದೇಶಪಾಂಡೆ ಉಪಸ್ಥಿತರಿದ್ದರು.

4 ದಿನ, 60 ಸಿನೆಮಾ
ಸಂಘಟಕ ಪ್ರೊ| ರವಿರಾಜ್‌ ಕಿಣಿ ಮಾತನಾಡಿ, ಭಾರತ್‌ ಸಿನೆಮಾಸ್‌ನಲ್ಲಿ ಎ. 19ರವರೆಗೆ 4ದಿನಗಳ ಕಾಲ ನಡೆಯುವ ಚಿತ್ರೋತ್ಸವದಲ್ಲಿ ವಿವಿಧ ಭಾಷೆಯ 60 ಸಿನೆಮಾಗಳು ಪ್ರದರ್ಶನ ಕಾಣಲಿವೆ. 3 ಸ್ಕ್ರೀನ್‌ಗಳಲ್ಲಿ ದಿನಕ್ಕೆ ತಲಾ ಐದು ಅಥವಾ ಆರು ಪ್ರದರ್ಶನಗಳಿರುತ್ತವೆ. 40 ಮಂದಿ ಸಿನೆಮಾ ನಿರ್ಮಾಪಕರು ಪಾಲ್ಗೊಳ್ಳಲಿದ್ದಾರೆ. ಹಿಂದಿ, ಕನ್ನಡ, ಕೊಂಕಣಿ, ಮಲಯಾಳ, ಬಂಗಾಲಿ, ಗುಜರಾತಿ, ತಮಿಳು, ಫ್ರೆಂಚ್‌, ಚೀನೀ ಭಾಷೆಗಳ ಸಿನೆಮಾಗಳು ಪ್ರದರ್ಶನಗೊಳ್ಳಲಿವೆ. ಸಾರ್ವಜನಿಕರಿಗೆ ಉಚಿತ ಪ್ರವೇಶವಿದೆ. ಮಕ್ಕಳ ಸಿನೆಮಾವನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಹಲವು ಮಕ್ಕಳ ಚಿತ್ರಗಳ ಪ್ರದರ್ಶನವಿದೆ. ಚಿತ್ರ ನಿರ್ಮಾಪಕರ ಜತೆ ಪ್ರೇಕ್ಷಕರಿಗೆ ಸಂವಾದಕ್ಕೆ ಅವಕಾಶವಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ಸಿನೆಮಾಗಳು ಕೂಡ ಇರುತ್ತವೆ ಎಂದು ವಿವರಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.