NMPT: ಸೋಲಾರ್‌ನಿಂದ ದಿನಕ್ಕೆ 20ಸಾವಿರ ಯೂನಿಟ್‌ ವಿದ್ಯುತ್‌ ಉತ್ಪಾದನೆ


Team Udayavani, May 4, 2018, 7:25 AM IST

Solar-NMPT-600.jpg

ಮಂಗಳೂರು: ದೇಶದ ಬೃಹತ್‌ ಬಂದರುಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ಪ್ರತಿಷ್ಠಿತ ನವಮಂಗಳೂರು ಬಂದರು (NMPT)ಗೆ ಈಗ ವಿದ್ಯುತ್‌ ಖರೀದಿ ಅಗತ್ಯವೇ ಇಲ್ಲ. ಇಲ್ಲಿ ದೈನಂದಿನ ಅಗತ್ಯಗಳಿಗೆ ಬೇಕಾದ ಶೇ. 95ರಷ್ಟು ವಿದ್ಯುತ್ತನ್ನು ಸ್ವಂತವಾಗಿ ಸೌರಶಕ್ತಿಯಿಂದ ಉತ್ಪಾದಿಸಲಾಗುತ್ತಿದೆ. ಸೋಲಾರ್‌ ವಿದ್ಯುತ್‌ ಉತ್ಪಾದನೆಯ ಮೂಲಕ ಸಂಪೂರ್ಣ ಸ್ವಾವಲಂಬಿಯಾದ ಎನ್‌ಎಂಪಿಟಿಗೆ ‘ಗ್ರೀನ್‌ ಪೋರ್ಟ್‌’ ಮಾನ್ಯತೆಯೂ ಸಿಕ್ಕಿದೆ. ಪ್ರತಿದಿನ ಇಲ್ಲಿ ಸೋಲಾರ್‌ ನಿಂದ ಒಟ್ಟು 20 ಸಾವಿರ ಯೂನಿಟ್‌ ವಿದ್ಯುತ್‌ ಉತ್ಪಾದನೆಯಾಗುತ್ತಿದೆ. ಇಲ್ಲಿ ಒಂದು ದಿನಕ್ಕೆ ಅಗತ್ಯವಿರುವ ವಿದ್ಯುತ್‌ 24 ಸಾವಿರ ಯೂನಿಟ್‌. ಅಂದರೆ ಸದ್ಯ ಕೇವಲ ನಾಲ್ಕು ಸಾವಿರ ಯೂನಿಟ್‌ಗಾಗಿ ಮಾತ್ರ ಬೇರೆ ಮೂಲಗಳನ್ನು ಅವಲಂಬಿಸಲಾಗಿದೆ. ಕೆಲವೇ ವರ್ಷಗಳಲ್ಲಿ ಸಂಪೂರ್ಣ ಸ್ವಾವಲಂಬಿಯಾಗಿ ಶೇ.100ರಷ್ಟು ಯಶಸ್ಸು ಸಾಧಿಸುವ ನಿರೀಕ್ಷೆಯಲ್ಲಿದೆ.

ಉತ್ಪಾದನೆ ಸಾಮರ್ಥ್ಯ 5.19 ಮೆ. ವ್ಯಾ.

ಇಲ್ಲಿ ಪ್ರಸ್ತುತ 5.19 ಮೆ. ವ್ಯಾ. ವಿದ್ಯುತ್‌ ಉತ್ಪಾದನೆ ಸಾಮರ್ಥ್ಯದ ಸೋಲಾರ್‌ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಬಾಷ್‌ ನ್ಯೂ ಕಂಪೆನಿಯು ಬಂದರಿನ ಕಾರ್ಮಿಕರ ವಸತಿ ನಿಲಯದ ಸಮೀಪ 4 ಮೆ. ವ್ಯಾ. ಸಾಮರ್ಥ್ಯದ ಸೋಲಾರ್‌ ವಿದ್ಯುತ್‌ ಉತ್ಪಾದನೆ ಘಟಕ ಸ್ಥಾಪಿಸಿದೆ. ಉಳಿದಂತೆ ರೂಫ್‌ ಟಾಪ್‌ ವ್ಯವಸ್ಥೆಯ ಮೂಲಕ 350 ಕಿ.ವ್ಯಾ. ಹಾಗೂ 840 ಕಿ. ವ್ಯಾ. ವಿದ್ಯುತ್‌ ಪಡೆಯಲಾಗುತ್ತಿದೆ. ದೇಶದ ಎಲ್ಲ ಬಂದರುಗಳಲ್ಲಿ ಸೋಲಾರ್‌ ವಿದ್ಯುತ್‌ ಉತ್ಪಾದನೆ ಮಾಡುವಂತೆ ಕೇಂದ್ರ ಸರಕಾರದಿಂದ ಸೂಚನೆ ಇರುವ ಹಿನ್ನೆಲೆಯಲ್ಲಿ ಈ ಕುರಿತ ಕಾರ್ಯಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ.

ಹಲವು ವಿಧ ಕಾರ್ಯನಿರ್ವಹಣೆ
NMPT ಮೂಲಕ ಮರದ ದಿಮ್ಮಿಗಳು, ಕಾರ್ಗೊ ಪಾರ್ಸೆಲ್‌ಗ‌ಳು, ಘನೀಕೃತ ಪುಡಿಗಳು, ಸಿಮೆಂಟ್‌, ಕಲ್ಲಿದ್ದಲು, ರಸಗೊಬ್ಬರ, ಅಡುಗೆ ಎಣ್ಣೆ, ರಾಸಾಯನಿಕ ದ್ರವಗಳು ಮುಂತಾದ ಪ್ರಮುಖ ಕಾರ್ಗೊ ರಫ್ತಾಗುತ್ತವೆ. ಕಚ್ಚಾತೈಲ, ಕಬ್ಬಿಣ ಅದಿರಿನ ಉಂಡೆಗಳು, ಗ್ರಾನೈಟ್‌, ಮೈದಾ, ತೈಲೋತ್ಪನ್ನಗಳು, ಕಾಫಿ, ಸಂಸ್ಕರಿತ ಗೋಡಂಬಿ ಆಮದಾಗುತ್ತವೆ. ವಿಶೇಷವಾಗಿ MRPl, ONGC, KIOCL, ELF, ಕಿಸ್ಕೋ, MCF, HPCL, IOC, UPCL ಮುಂತಾದ ಮೆಗಾ ಉದ್ಯಮಗಳ ಕಾರ್ಗೊ ನಿರ್ವಹಣೆಗೆ NMPT ಆಧಾರ. ಈ ಸಂದರ್ಭದಲ್ಲಿ ಆವಶ್ಯಕ ವಿದ್ಯುತ್‌ ಸೋಲಾರ್‌ ಮೂಲಕವೇ ಪಡೆಯಲಾಗುತ್ತಿದೆ. 

MRPL ಸೋಲಾರ್‌ ದಾಖಲೆ
ಮಂಗಳೂರು ರಿಫೈನರಿ ಆ್ಯಂಡ್‌ ಪೆಟ್ರೋ ಕೆಮಿಕಲ್ಸ್‌ (MRPL) ಸಂಸ್ಥೆಯು ಪ್ರಸ್ತುತ ಸೋಲಾರ್‌ ಉತ್ಪಾದನೆ ಮೂಲಕ ಸಾಧನೆ ತೋರಿದೆ. ವಾರ್ಷಿಕ 88 ಲಕ್ಷ ಮೆ. ವ್ಯಾ. ಉತ್ಪಾದನೆ ಸಾಮರ್ಥ್ಯವಿರುವ ಸೋಲಾರ್‌ ಘಟಕವನ್ನು 27 ಕೋ.ರೂ. ವೆಚ್ಚದಲ್ಲಿ ಕುತ್ತೆತ್ತೂರಿನಲ್ಲಿ ನಿರ್ಮಿಸಿದೆ.

NMPT ವಿದ್ಯುತ್‌ ಸ್ವಾವಲಂಬಿ
ಸೋಲಾರ್‌ ವಿದ್ಯುತ್‌ ಉತ್ಪಾದನೆಯ ಮೂಲಕ ನವಮಂಗಳೂರು ಬಂದರು ಸ್ವಾವಲಂಬಿಯಾಗಿದೆ. ನಿತ್ಯ ಇಲ್ಲಿ 20ರಿಂದ 21 ಸಾವಿರ ಯೂನಿಟ್‌ಗಳಷ್ಟು ವಿದ್ಯುತ್‌ ಸೋಲಾರ್‌ ಮೂಲಕವೇ ಪಡೆಯಲಾಗುತ್ತಿದೆ. ಬಂದರು ‘ಗ್ರೀನ್‌ ಪೋರ್ಟ್‌’ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ.
– ಹಾಲೇಶಪ್ಪ, ಅಧೀಕ್ಷಕ ಅಭಿಯಂತರರು (ವಿದ್ಯುತ್‌), NMPT 

ನವಮಂಗಳೂರು ಬಂದರು
ಗುರುಪುರ ಹಾಗೂ ನೇತ್ರಾವತಿ ನದಿಗಳ ಸಂಗಮ ಸ್ಥಾನವಾದ ಹಳೆ ಬಂದರಿಗೆ ಮಂಗಳೂರಿನ ಸಾಗರ ವ್ಯಾಪಾರ ವಹಿವಾಟಿನ ಆಧುನಿಕ ಕಾಲಘಟ್ಟದ ಬೇಡಿಕೆಗಳನ್ನು ನಿಭಾಯಿಸುವಲ್ಲಿ ತನ್ನದೇ ಆದ ಮಿತಿಗಳಿದ್ದವು. ಹೀಗಾಗಿ ಸುಸಜ್ಜಿತ ನೂತನ ಬಂದರಿನ ಆವಶ್ಯಕತೆ ತಲೆದೋರಿ ನವಮಂಗಳೂರು ಬಂದರು ಹುಟ್ಟಿಕೊಂಡಿತು. ಉಳ್ಳಾಲ ಶ್ರೀನಿವಾಸ ಮಲ್ಯರ ನಿರಂತರ ಪ್ರಯತ್ನದ ಫಲವಾಗಿ ನಿರ್ಮಾಣಗೊಂಡು 1974 ಮೇ 4ರಂದು ಕಾರ್ಯಾರಂಭ ಮಾಡಿದರೂ 1975 ಜ. 11ರಂದು ಪ್ರಧಾನಿಯವರು ಔಪಚಾರಿಕವಾಗಿ ಉದ್ಘಾಟಿಸಿ ರಾಷ್ಟ್ರಕ್ಕೆ ಸಮರ್ಪಿಸಿದರು. 1980ರಿಂದ ಬಂದರು ಟ್ರಸ್ಟ್‌ ಸಮಿತಿ ರಚನೆಯ ಬಳಿಕ ಗಣನೀಯ ಪ್ರಮಾಣದಲ್ಲಿ ನವಮಂಗಳೂರು ಬಂದರು ಅಭಿವೃದ್ಧಿಗೊಂಡಿತು.

— ದಿನೇಶ್‌ ಇರಾ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.