ಬೃಹತ್‌ ಪ್ರವಾಸಿ ಹಡಗು ಐಡಾ ವಿಟಾ ಆಕರ್ಷ

ಎನ್‌ಎಂಪಿಟಿಯಲ್ಲಿ ಹೆಲಿಟೂರಿಸಂ ಆರಂಭ ;16 ಪ್ರವಾಸಿಗರಿಂದ ಬೇಕಲಕೋಟೆ ವೀಕ್ಷಣೆ

Team Udayavani, Nov 5, 2019, 6:30 AM IST

0411PB1-HELI-TOURISM

ಪಣಂಬೂರು: ಬೃಹತ್‌ ಪ್ರವಾಸಿ ಹಡಗು ಐಡಾ ವಿಟಾ ಸೋಮವಾರ ನವಮಂಗಳೂರು ಬಂದರಿಗೆ ಆಗಮಿಸಿತು.ಪ್ರವಾಸಿಗರಿಗೆ ಹೆಲಿಕಾಪ್ಟರ್‌ ಸೇವೆ ಒದಗಿಸುವ ಎನ್‌ಎಂಪಿಟಿ ಹೆಲಿಟೂರಿಸಂಗೆ ಈ ಸಂದರ್ಭ ಚಾಲನೆ ನೀಡಲಾಯಿತು. 16 ಪ್ರವಾಸಿಗರು ಹೆಲಿಕಾಪ್ಟರ್‌ನಲ್ಲಿ ಬೇಕಲ ಕೋಟೆ ವೀಕ್ಷಿಸಿ ಸಂಭ್ರಮಿಸಿದರು.

ಹಡಗಿನಲ್ಲಿ 1,561 ಮಂದಿ
ಮೂಲತಃ ಸಿಂಗಾಪುರದ, ಪನಾಮ ಧ್ವಜ ಹೊಂದಿರುವ ಐಡಾ ವಿಟಾ ಆಗಮಿಸಿದಾಗ ಕರ್ನಾಟಕ ಸಂಸ್ಕೃತಿ ಬಿಂಬಿಸುವ ಯಕ್ಷಗಾನ, ಕಂಗೀಲು, ಹುಲಿ ವೇಷ ನೃತ್ಯದ ಮೂಲಕ ಸ್ವಾಗತ ಕೋರಲಾಯಿತು. 1,154 ಪ್ರವಾಸಿಗರು, 407 ಸಿಬಂದಿ ಹಡಗಿನಲ್ಲಿದ್ದರು.

ಅ. 28ರಂದು ದುಬಾೖಯಿಂದ ಹೊರಟ ಹಡಗು ಗೋವಾದ ಮೂಲಕ ಮಂಗಳೂರಿಗೆ ಆಗಮಿಸಿತು. ಬಳಿಕ ಕೊಚ್ಚಿಗೆ ತೆರಳಿ, ಮಾಲ್ಡೀವ್ಸ್‌, ಕೊಲಂಬೊ, ಮಲೇಷಿಯಾ, ಸಿಂಗಾಪುರ ಸಹಿತ 21 ದಿನಗಳ ಕಾಲ ವಿವಿಧ ದೇಶಗಳಲ್ಲಿ ಪರ್ಯಟನೆ ನಡೆಸಲಿದೆ.

ಬರಲಿವೆ 24 ಹಡಗುಗಳು
ಎನ್‌ಎಂಪಿಟಿ ಚೇರ್‌ಮನ್‌ ಎಂ. ವೆಂಕಟರಮಣ ಅಕ್ಕರಾಜು ಅವರು ಪ್ರವಾಸಿಗರಿಗೆ ಸ್ವಾಗತ ಕೋರಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿ, ಪ್ರವಾಸಿಗರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಜತೆಗೆ ಸುತ್ತಲಿನ ಜಿಲ್ಲೆಗಳ ಪ್ರಸಿದ್ಧ ಸ್ಥಳಗಳನ್ನು ತೋರಿಸುವ ಸಲುವಾಗಿ ಹೆಲಿ ಟೂರಿಸಂ ಆರಂಭಿಸಿದ್ದೇವೆ. ಪ್ರಥಮ ಹಂತದಲ್ಲೇ 16 ವಿದೇಶಿಗರು ಹೆಲಿಕಾಪ್ಟರ್‌ನಲ್ಲಿ ಕಾಸರಗೋಡು ಜಿಲ್ಲೆಯ ಬೇಕಲಕ್ಕೆ ಪ್ರಯಾಣಿಸಿದ್ದಾರೆ ಎಂದರು. ಈ ಬಾರಿ 24 ಪ್ರವಾಸಿ ಹಡಗುಗಳು ಆಗಮಿಸುವ ನಿರೀಕ್ಷೆ ಯಿದ್ದು 5 ಕೋಟಿ ರೂ. ಆದಾಯ ನಿರೀಕ್ಷಿಸಲಾಗಿದೆ. ಪ್ರವಾಸಿಗರಿಂದ ಪೂರಕವಾಗಿ ಸಾರಿಗೆ ಉದ್ಯಮ, ವಿದೇಶಿ ವಿನಿಮಯವೂ ಹೆಚ್ಚುತ್ತದೆ ಎಂದು ತಿಳಿಸಿದರು.

ವಿದೇಶೀ ಪ್ರವಾಸಿಗರನ್ನು ಸ್ಥಳೀಯ ವಾಗಿ ಮಂಗಳೂರು, ಮೂಡುಬಿದಿರೆ, ಕಾರ್ಕಳ ಸಹಿತ ಸುತ್ತಮುತ್ತಲಿನ ಪ್ರೇಕ್ಷಣೀಯ ಸ್ಥಳಗಳಿಗೆ ಕರೆದೊಯ್ದು ತೋರಿಸಲಾಯಿತು. ಪ್ರವಾಸಿಗರ ತಿರುಗಾಟಕ್ಕಾಗಿ ಬಸ್‌, ಪ್ರಿಪೇಯ್ಡ ಕಾರು, ರಿಕ್ಷಾ ವ್ಯವಸ್ಥೆ ಮಾಡಲಾಗಿತ್ತು.

ಭಾರತದ ಸಂಸ್ಕೃತಿಗೆ ವಿದೇಶಿಗರು ಮಾರು
ಪ್ರವಾಸಿ ಹಡಗಿನ ಕ್ಯಾಪ್ಟನ್‌ ಎಡಾನಿಯ ಮಾತನಾಡಿ, ಎಲ್ಲ ಸೌಲಭ್ಯಗಳನ್ನು ಐಡಾ ವಿಟಾ ಹೊಂದಿದ್ದು ಇಲ್ಲಿನ ಪ್ರೇಕ್ಷಣೀಯ ಸ್ಥಳ ವೀಕ್ಷಿಸಲು ಪ್ರವಾಸಿಗರು ಒಲವು ತೋರಿದ್ದಾರೆ ಎಂದರು. ಭಾರತದ ಸಂಸ್ಕೃತಿ, ಆಚಾರ ವಿಚಾರ ನಮ್ಮನ್ನು ಆಕರ್ಷಿಸಿದ್ದು ನೋಡಲೆಂದು ಬಂದಿದ್ದೇವೆ; ಸಂತಸವಾಗಿದೆ ಎಂದು ಡಚ್‌ ಪ್ರವಾಸಿಗ ಯೆಜಿನ್‌ ತಿಳಿಸಿದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.