ಬಾಳುಗೋಡು: ಕೊತ್ನಡ್ಕ ಜನತೆಗೆ ಸೇತುವೆ ಖೋತಾ!


Team Udayavani, Apr 4, 2018, 12:50 PM IST

4-April-12.jpg

ಸುಬ್ರಹ್ಮಣ್ಯ: ದಶಕಗಳಿಂದ ಸೇತುವೆ ಇಲ್ಲ, ಕಷ್ಟವಾಗುತ್ತಿದೆ. ಸಂಪರ್ಕಕ್ಕಾಗಿ ಒಂದು ಸೇತುವೆ ಒದಗಿಸಿ ಎಂದು ಗ್ರಾಮಸ್ಥರು ಬೇಡಿಕೆ ಸಲ್ಲಿಸುತ್ತಲೇ ಇದ್ದರು. 3 ವರ್ಷಗಳ ಹಿಂದೆ ಕಿರು ಸೇತುವೆ ಮಂಜೂರಾಯಿತು. ಅನುದಾನ ಬಂದು ಕಾಮಗಾರಿಯೂ ಶುರುವಾಯಿತು. ಆದರೆ, ಅದೀಗ ಅರ್ಧದಲ್ಲೇ ಸ್ಥಗಿತಗೊಂಡು ಸಂಕಷ್ಟ ಹೆಚ್ಚಿಸಿದೆ.

ಹರಿಹರ ಪಳ್ಳತ್ತಡ್ಕ ಗ್ರಾ.ಪಂ.ವ್ಯಾಪ್ತಿಯ ಬಾಳುಗೋಡು ಗ್ರಾಮದಲ್ಲಿ ಕೊತ್ನಡ್ಕ ಎಂಬ ಪ್ರದೇಶವಿದೆ. ತೀರಾ ಕುಗ್ರಾಮ ಎನಿಸಿದ ಇಲ್ಲಿ ವಿರಳ ಸಂಖ್ಯೆಯ ಮನೆಗಳಿವೆ. ಬಾಳುಗೋಡು ಪೇಟೆಯಿಂದ ಕಾಡು ದಾರಿಯ ಮೂಲಕ ಕಚ್ಚಾ ರಸ್ತೆಯಲ್ಲೇ ಇಲ್ಲಿಗೆ ಸಂಚರಿಸಬೇಕು. ಐದಾರು ಕಿ.ಮೀ. ದೂರದ ದಾರಿಯಲ್ಲಿ ಮಧ್ಯೆ ನದಿ ಹರಿಯುತ್ತದೆ. ಮಳೆಗಾಲ ಬಂತೆಂದರೆ ಈ ನದಿ ದಾಟುವುದೇ ಕಷ್ಟ.

ಬಹುಕಾಲದ ಬೇಡಿಕೆಯಂತೆ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಇಲ್ಲಿಗೆ ಮೂರು ವರ್ಷಗಳ ಹಿಂದೆ 8.25 ಲಕ್ಷ ರೂ. ಅನುದಾನ ಬಿಡುಗಡೆಗೊಂಡಿದೆ. ಕೆಲಸ ವಹಿಸಿಕೊಂಡ ಗುತ್ತಿಗೆದಾರರು ಅಗತ್ಯ ಸಾಮಗ್ರಿಗಳನ್ನು ಸಂಗ್ರಹಿಸಿ ಕೆಲಸ ಆರಂಭಿಸಿದ್ದರು. ಪಿಲ್ಲರ್‌ ತಲೆ ಎತ್ತಿ ನಿಂತಿತ್ತು. ಕಳೆದ ವರ್ಷ ಎಪ್ರಿಲ್‌ನಲ್ಲಿ ಇದ್ದಕ್ಕಿದ್ದಂತೆ ಕಾಮಗಾರಿ ಪೂರ್ಣ ಸ್ಥಗಿತಗೊಂಡಿದೆ. ಸೇತುವೆ ನಿರ್ಮಾಣವಾಗಿಯೇ ಬಿಟ್ಟಿತು ಎಂದು ನಂಬಿದ್ದ ಈ ಭಾಗದ ನಾಗರಿಕರಿಗೆ ನಿರಾಶೆ ಕಾದಿತ್ತು.

ಸಾಮಗ್ರಿಗಳು ಮಾಯ
ಅಂದು ಆರಂಭವಾದ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಸೇತುವೆಗೆ ಹಾಕಿದ ಪಿಲ್ಲರ್‌ ಹಾಗೆಯೇ ಪಾಳುಬಿದ್ದಿದೆ. ಸೇತುವೆ ನಿರ್ಮಾಣಕ್ಕೆಂದು ತಂದು ಹಾಕಿದ್ದ ಸಾಮಗ್ರಿಗಳು ಕಾಣೆಯಾಗಿವೆ. ಪಿಲ್ಲರ್‌ಗೆ ಅಳವಡಿಸಿದ ಸಾಧನಗಳು ತುಕ್ಕು ಹಿಡಿದಿವೆ. ಗುತ್ತಿಗೆದಾರ ವರ್ಷದಿಂದ ಇತ್ತ ಕಡೆ ಸುಳಿದಿಲ್ಲ ಎಂದು ಊರವರು ಹೇಳುತ್ತಾರೆ.

ಕಾಮಗಾರಿ ವಿಳಂಬವೇಕೆ ಎಂಬ ಪ್ರಶ್ನೆಗೆ, ಮಳೆ ಕಾರಣಕ್ಕೆ ಕಾಮಗಾರಿ ಸ್ಥಗಿತಗೊಳಿಸಿದ್ದಾಗಿ ಗುತ್ತಿಗೆದಾರರು ಈ ಹಿಂದೆ ಉತ್ತರಿಸಿದ್ದರು. ಮುಂದಿನ ವರ್ಷದೊಳಗೆ ಕಿರು ಸೇತುವೆ ನಿರ್ಮಾಣವಾಗುವ ಭರವಸೆ ನೀಡಿದ್ದರು. ಆದರೆ, ಕಾಮಗಾರಿ ಮುಂದುವರಿಸಲು ಗುತ್ತಿಗೆದಾರರು ಆಸಕ್ತಿ ತೋರುವುದು ಕಾಣಿಸುತ್ತಿಲ್ಲ. ಶತಪ್ರಯತ್ನ ಮಾಡಿ ಅನುದಾನ ಒದಗಿಬಂದರೂ ಸೇತುವೆ ಪೂರ್ಣಗೊಳ್ಳದಿರುವುದು ಈ ಭಾಗದ ನಾಗರಿಕರಲ್ಲಿ ಬೇಸರ ತಂದಿದೆ. ಈ ಬಾರಿ ಚುನಾವಣೆ ವೇಳೆ ಮತ ಕೇಳಲು ಬರುವ ವರಿಗೆ ಬಿಸಿ ಮುಟ್ಟಿಸಲು ಇಲ್ಲಿಯ ವರು ಸಿದ್ಧತೆ ಮಾಡಿಕೊಂಡಿದ್ದಾರೆ. ಚುನಾವಣೆ ಪ್ರಚಾರದ ವೇಳೆ ಇಲ್ಲಿನ ಮೂಲಸೌಕರ್ಯದ ನಿರ್ಲಕ್ಷ್ಯ ವಿಚಾರ ಚರ್ಚೆಗೆ ಬರಲಿದೆ.

ಕೇಳುವವರಿಲ್ಲವೇ?
ಅನುದಾನ ಮಂಜೂರುಗೊಂಡರೂ ಸೇತುವೆ ಪೂರ್ಣವಾಗದೆ ಇರುವುದಕ್ಕೆ ಗುತ್ತಿಗೆದಾರ ಮಾತ್ರ ಕಾರಣವಾಗುವುದಿಲ್ಲ. ಅದಕ್ಕೆ ಸಂಬಂದಿಸಿದ ಇಲಾಖೆಯವರು ಕೂಡ ಕಾರಣರು. ಅಧಿಕಾರಿಗಳು ನಿದ್ರೆಗೆ ಜಾರಿರುವುದು ಈ ರೀತಿ ಕಾಮಗಾರಿ ನೇಪಥ್ಯಕ್ಕೆ ಸರಿಯಲು ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ತಾತ್ಕಾಲಿಕ ಸಂಕ
ಶಾಲಾ ಮಕ್ಕಳು, ನಾಗರಿಕರು ಈ ರಸ್ತೆಯ ಮೂಲಕ ನಿತ್ಯವೂ ಓಡಾಡುತ್ತಾರೆ. ನಿತ್ಯವೂ ತಮ್ಮ ಬೇಡಿಕೆಗಳನ್ನು ಈ ರಸ್ತೆ ಮೂಲಕವೇ ಸಂಚರಿಸಿ ಪೂರೈಸಿಕೊಳ್ಳುತ್ತಾರೆ. ಈ ಊರಿಗೆ ಖಾಸಗಿ ಜೀಪು ಹೊರತುಪಡಿಸಿ ಇನ್ಯಾವುದೇ ವಾಹನ ಸೌಲಭ್ಯ ಇಲ್ಲ. ಕಳೆದ ವರ್ಷ ಮಳೆಗಾಲ ರಸ್ತೆ ತುಂಬಿ ಹರಿದ ಕಾರಣ ಸ್ಥಳೀಯರು ಸೇರಿ ತಾತ್ಕಾಲಿಕ ಮರದ ತೂಗು ಸೇತುವೆ ನಿರ್ಮಿಸಿಕೊಂಡಿದ್ದರು. ಕಷ್ಟದಲ್ಲಿ ಮಳೆಗಾಲ ಕಳೆದಿದ್ದರು. ಮುಂದಿನ ವರ್ಷವಾದರೂ ಸೇತುವೆ ಕಾಮಗಾರಿ ಪೂರ್ಣಗೊಂಡು ಸಮಸ್ಯೆ ಪರಿಹಾರ ಕಾಣಬಹುದು ಎಂದುಕೊಂಡಿದ್ದರು. ಅವರ ನಿರೀಕ್ಷೆ ಈ ಬಾರಿಯೂ ಈಡೇರುವ ಲಕ್ಷಣಗಳು ಸದ್ಯ ಗೋಚರಿಸುತ್ತಿಲ್ಲ.

ಅನುದಾನ ಸಾಲುತ್ತಿಲ್ಲ
ಅಲ್ಲಿ ಸೇತುವೆ ನಿರ್ಮಾಣಕ್ಕೆ ಈಗ ಶಾಸಕರು ನೀಡಿರುವ ಅನುದಾನ ಸಾಕಾಗುವುದಿಲ್ಲ. ಈಗ ದೊರಕಿದ ಅನುದಾನದಲ್ಲಿ ಪಿಲ್ಲರ್‌ ಕಾಮಗಾರಿ ಅಷ್ಟೆ ನಡೆದಿದೆ. ಪೂರ್ತಿಯಾಗಲು ಹೆಚ್ಚುವರಿ ಅನುದಾನ ಒದಗಿಸುವ ಕುರಿತು ಶಾಸಕರು ಹೇಳಿದ್ದರು. ಅದು ದೊರಕಿದಲ್ಲಿ ಮಾತ್ರ ಪೂರ್ತಿಯಾಗಬಹುದು. ಹೀಗಾಗಿ ಕಾಮಗಾರಿ ಲಭ್ಯ ಅನುದಾನದ ಹಂತಕ್ಕೆ ನಡೆದು ನಿಂತಿದೆ.
– ಹರೀಶ್‌ ಮೆದು,
ಜೂನಿಯರ್‌ ಎಂಜಿನಿಯರ್‌

ಶೀಘ್ರ ಆರಂಭವಾಗಬೇಕು
ಸೇತುವೆ ಮಂಜೂರಾಗಿ ಮೂರು ವರ್ಷಗಳು ಕಳೆದಿವೆ. ಇನ್ನೂ ಸೇತುವೆ ಕಾಮಗಾರಿ ಕುಂಟುತ್ತ ಇದೆ. ಅರ್ಧಕ್ಕೆ ಕಾಮಗಾರಿ ಸ್ಥಗಿತವಾಗಿದ್ದರಿಂದ ಸರಕಾರದ ಯೋಜನೆ ಹಳ್ಳ ಹಿಡಿದಿದೆ. ಸ್ಥಳೀಯರಾದ ನಾವು ಇನ್ನೂ ಸಮಸ್ಯೆ ಅನುಭವಿಸುತ್ತಲೇ ಇದ್ದೇವೆ. ಇನ್ನಾದರೂ ಕಾಮಗಾರಿ ಚುರುಕಾಗಿ ಮಳೆಗಾಲದ ಅವಧಿಯಲ್ಲಾದರೂ ಸೇವೆಗೆ ಸಿಗುವಂತಾಗಬೇಕು.
ಹರೀಶ್‌ ಕಜೆಗದ್ದೆ
  ಸ್ಥಳೀಯರು

ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.