ಮಂಗಳೂರು ವಿವಿ ಕ್ಯಾಂಪಸ್‌ನೊಳಗೆ ವಾಹನಗಳಿಗೆ ನೋ ಎಂಟ್ರಿ!


Team Udayavani, Jun 17, 2019, 5:05 AM IST

mangalore-vv

ಮಹಾನಗರ: ಪರಿಸರ ಮಾಲಿನ್ಯ ಕಡಿಮೆಗೊಳಿಸುವ ಉದ್ದೇಶದಿಂದ ಶೀಘ್ರದಲ್ಲೇ ಮಂಗಳೂರು ವಿವಿ ಕ್ಯಾಂಪಸ್‌ನೊಳಗೆ ಎಲ್ಲ ರೀತಿಯ ವಾಹನಗಳ ಪ್ರವೇಶಕ್ಕೆ ನಿಷೇಧ ಹೇರಲು ಉದ್ದೇಶಿಸಲಾಗಿದೆ. ಆ ಮೂಲಕ ಕ್ಯಾಂಪಸ್‌ನೊಳಗೆ ಸಂಚಾರಕ್ಕೆ ಕೇವಲ ಬ್ಯಾಟರಿ ಚಾಲಿತ ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ.

ಶಬ್ಧ ಮಾಲಿನ್ಯ, ವಾಯು ಮಾಲಿನ್ಯ ನಿಯಂತ್ರಣದ ನಿಟ್ಟಿನಲ್ಲಿ ಮಂಗಳೂರು ವಿವಿ ಈ ಮೂಲಕ ಹೊಸತನಕ್ಕೆ ತೆರೆದುಕೊಳ್ಳುತ್ತಿದ್ದು, ತನ್ನ ಕ್ಯಾಂಪಸ್‌ ಅನ್ನು ಪರಿಸರ ಸ್ನೇಹಿ ಮಾಡಲು ನಿರ್ಧರಿಸಿದೆ.

ಹೆಚ್ಚುತ್ತಿರುವ ಶಬ್ಧ ಮಾಲಿನ್ಯ, ವಾಯು ಮಾಲಿನ್ಯ ನಿಯಂತ್ರಿಸುವ ಸಲುವಾಗಿ ಸುಮಾರು 330 ಎಕ್ರೆ ಜಾಗದಲ್ಲಿರುವ ವಿವಿ ಕ್ಯಾಂಪಸ್‌ನಲ್ಲಿ ಯಾವುದೇ ವಾಹನ ಸಂಚರಿಸಲು ಆವಕಾಶ ನೀಡದೆ ಕೇವಲ ಬ್ಯಾಟರಿ ಚಾಲಿತ ಬಗ್ಗಿಸ್‌ಗಳ ಬಳಸಿ ಇಕೋ ಫ್ರೆಂಡ್ಲಿ ಕ್ಯಾಂಪಸ್‌ನ್ನಾಗಿಸಲು ಮಂಗಳೂರು ವಿವಿ ನೂತನ ಕುಲಪತಿ ಪ್ರೊ| ಪಿ.ಎಸ್‌. ಎಡಿಪಡಿತ್ತಾಯ ಚಿಂತನೆ ಮಾಡಿದ್ದಾರೆ. ಅದಕ್ಕಾಗಿ ಹಂತ ಹಂತವಾಗಿ ಯೋಜನೆ ರೂಪುಗೊಳ್ಳುತ್ತಿದ್ದು, ವಿವಿ ಸಿಂಡಿಕೇಟ್ ಸದಸ್ಯರ ಒಪ್ಪಿಗೆ, ಅನುದಾನ ಮಂಜೂರಾದರೆ ಇನ್ನೂ ಕೆಲವೇ ಸಮಯಗಳಲ್ಲಿ ವಿವಿ ಕ್ಯಾಂಪಸ್‌ ಇಕೋ ಫ್ರೆಂಡ್ಲಿ ಆಗಲಿದೆ.

ಅನುದಾನದ ಆವಶ್ಯಕತೆ

ಮಾದರಿ ವಿವಿಯನ್ನಾಗಿಸುವ ನಿಟ್ಟಿನಲ್ಲಿ ಹಲವು ವಿನೂತನ ಯೋಜನೆಗಳನ್ನು ರೂಪಿಸುತ್ತಿರುವ ನೂತನ ಕುಲಪತಿಗಳು ಮಂಗಳೂರು ವಿವಿ ಕ್ಯಾಂಪಸ್‌ನ್ನು ಇಕೋ ಫ್ರೆಂಡ್ಲಿಯಾಗಿ ಮಾಡಲು ಕ್ಯಾಂಪಸ್‌ ಆವರಣದಲ್ಲಿ ವಾಹನ ಸಂಚಾರವನ್ನು ನಿಲ್ಲಿಸಿ ಬಗ್ಗಿಸ್‌ ಅಳವಡಿಸಲು ಯೋಜನೆ ರೂಪಿಸಿದ್ದಾರೆ. ಇದರ ಅನುಷ್ಠಾನಕ್ಕಾಗಿ 2ರಿಂದ ಮೂರು ಕೋಟಿ ರೂ. ವರೆಗೆ ಅನುದಾನದ ಆವಶ್ಯಕತೆ ಇದ್ದು, ಇದಕ್ಕಾಗಿ ಕೇಂದ್ರದ ಸ್ವಚ್ಛಭಾರತ ಅಥವಾ ಇನ್ನಿತರ ಯೋಜನೆಗಳಲ್ಲಿ ಅನುದಾನ ದೊರೆತರೆ ಶೀಘ್ರ ಅನುಷ್ಠಾನಕ್ಕೆ ಚಿಂತನೆ ನಡೆಸಿದ್ದಾರೆ.

ಸದ್ಯ ಮಂಗಳೂರು ವಿವಿ ಕ್ಯಾಂಪಸ್‌ ಒಳಗೆ ಕೆಲವು ಪ್ರದೇಶಗಳಿಗೆ ಸಂಪರ್ಕ ರಸ್ತೆ ಹಾದುಹೋಗುತ್ತಿದ್ದು, ಇದಕ್ಕೆ ಪರ್ಯಾಯ ರಸ್ತೆ ಕಲ್ಪಿಸುವ ಬಗ್ಗೆಯೂ ಚಿಂತನೆ ನಡೆದಿದೆ. ಆ ಬಗ್ಗೆಯೂ ರೂಪುರೇಷೆಗಳನ್ನು ಸಿದ್ಧಗೊಳಿಸಲಾಗುತ್ತದೆ ಎಂದು ಅವರು ಉದಯವಾಣಿ ಸುದಿನಕ್ಕೆ ತಿಳಿಸಿದ್ದಾರೆ.

– ಹಲವು ವಿನೂತನ ಯೋಜನೆ

– ಇಕೋ ಫ್ರೆಂಡ್ಲಿ ಕ್ಯಾಂಪಸ್‌

– ಶೀಘ್ರ ಅನುಷ್ಠಾನಕ್ಕೆ ಚಿಂತನೆ

ವಿವಿ ಕ್ಯಾಂಪಸ್‌ 330 ಎಕ್ರೆ ಇದ್ದು, ಇಲ್ಲಿ ಸಂಚರಿಸಲು ಸುಮಾರು 10 ಬಗ್ಗಿಸ್‌ಗಳ ಆವಶ್ಯಕತೆ ಇದೆ. ವಿವಿ ಆವರಣದ ಮುಖ್ಯದ್ವಾರದಲ್ಲೇ ವಾಹನ ಪಾರ್ಕಿಂಗ್‌ಗಳಿಗೆ ವ್ಯವಸ್ಥೆ ಮಾಡಿ ಅಲ್ಲಿಂದ ಬಗ್ಗಿಸ್‌ ಮೂಲಕ ವಿವಿ ಆವರಣದಲ್ಲಿ ಸುತ್ತಾಡುವ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಇದರಿಂದ ವಾಯುಮಾಲಿನ್ಯವಾಗದೆ ಕ್ಯಾಂಪಸ್‌ ಇಕೋ ಫ್ರೆಂಡ್ಲಿಯಾಗಿರುತ್ತದೆ. ಇದರಿಂದ ವಿವಿ ಸಂಯೋಜಿತ ಸುಮಾರು 210 ಕಾಲೇಜುಗಳಿಗೆ ಮಾದರಿಯಾಗಬಲ್ಲದು ಎಂಬುದು ವಿವಿ ನೂತನ ಕುಲಪತಿ ಪ್ರೊ| ಪಿ.ಎಸ್‌. ಎಡಿಪಡಿತ್ತಾಯ ಅವರ ಆಶಯ.

ಮಂಗಳೂರು ವಿವಿ ಕ್ಯಾಂಪಸ್‌ನ ವಿವಿಧ ವಿಭಾಗ ಸಹಿತ ವಿದ್ಯಾರ್ಥಿ ನಿಲಯ, ಅತಿಥಿ ಗೃಹ, ಲ್ಯಾಬ್‌ಗಳಲ್ಲಿ ಬಳಸಲಾಗುತ್ತಿರುವ ನೀರುಗಳನ್ನು ಸಂಸ್ಕರಿಸಿ ಮರು ಬಳಕೆ ಮಾಡುವ ವೇಸ್ಟ್‌ ವಾಟರ್‌ ಟ್ರಿಟ್ಮೆಂಟ್ ಫ್ಲಾಂಟ್ ರಚಿಸಲು ಮಂಗಳೂರು ವಿವಿ ನೂತನ ಉಪಕುಲಪತಿಗಳು ಯೋಜನೆ ರೂಪಿಸಿದ್ದಾರೆ. ಇದಕ್ಕಾಗಿ 5 ಕೋಟಿ ರೂ. ಅಂದಾಜು ಪಟ್ಟಿ ರಚಿಸಲಾಗಿದ್ದು, ಪ್ಲಾನ್‌ ಸಿದ್ಧಗೊಂಡಿದೆ. ಜೂ. 19ರಂದು ನಡೆಯುವ ಸಿಂಡಿಕೇಟ್ ಸಭೆಯಲ್ಲಿ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಪ್ರಸ್ತುತ ಕ್ಯಾಂಪಸ್‌ ಆವರಣದಲ್ಲಿರುವ ಉದ್ಯಾನವನಗಳಿಗೆ ಶುದ್ಧ ನೀರು ಬಿಡಲಾಗುತ್ತಿದ್ದು, ಇದರಿಂದ ನೀರು ಪೋಲಾಗುತ್ತಿದೆ. ಎಪ್ರಿಲ್, ಮೇ ತಿಂಗಳಲ್ಲಿ ವಿವಿ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಎದುರಾಗುತ್ತದೆ. ಈ ಹಿನ್ನೆಲೆಯಲ್ಲಿ ಬಳಸಿದ ನೀರನ್ನು ಶುದ್ಧಿಕರಿಸಿ ಉದ್ಯಾನವನಗಳಿಗೆ ಬಿಡಲು ಚಿಂತನೆ ನಡೆಸಲಾಗಿದೆ. ಸಿಂಡಿಕೇಟ್ ಸಭೆಯಲ್ಲಿ ಈ ಪ್ರಸ್ತಾವನೆಗೆ ಸಮ್ಮತಿ ದೊರೆತರೆ ಮಂಗಳೂರು ವಿವಿ ಕ್ಯಾಂಪಸ್‌ ರಾಜ್ಯದ ಎಲ್ಲ ವಿವಿಗಳಿಗೆ ಮಾದರಿಯಾಗಬಲ್ಲದು.

ವ್ಯರ್ಥ ನೀರು ಮರುಬಳಕೆಗೆ ಸಿದ್ಧತೆ

ಮಂಗಳೂರು ವಿವಿ ಕ್ಯಾಂಪಸ್‌ನ ವಿವಿಧ ವಿಭಾಗ ಸಹಿತ ವಿದ್ಯಾರ್ಥಿ ನಿಲಯ, ಅತಿಥಿ ಗೃಹ, ಲ್ಯಾಬ್‌ಗಳಲ್ಲಿ ಬಳಸಲಾಗುತ್ತಿರುವ ನೀರುಗಳನ್ನು ಸಂಸ್ಕರಿಸಿ ಮರು ಬಳಕೆ ಮಾಡುವ ವೇಸ್ಟ್‌ ವಾಟರ್‌ ಟ್ರಿಟ್ಮೆಂಟ್ ಫ್ಲಾಂಟ್ ರಚಿಸಲು ಮಂಗಳೂರು ವಿವಿ ನೂತನ ಉಪಕುಲಪತಿಗಳು ಯೋಜನೆ ರೂಪಿಸಿದ್ದಾರೆ. ಇದಕ್ಕಾಗಿ 5 ಕೋಟಿ ರೂ. ಅಂದಾಜು ಪಟ್ಟಿ ರಚಿಸಲಾಗಿದ್ದು, ಪ್ಲಾನ್‌ ಸಿದ್ಧಗೊಂಡಿದೆ. ಜೂ. 19ರಂದು ನಡೆಯುವ ಸಿಂಡಿಕೇಟ್ ಸಭೆಯಲ್ಲಿ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಪ್ರಸ್ತುತ ಕ್ಯಾಂಪಸ್‌ ಆವರಣದಲ್ಲಿರುವ ಉದ್ಯಾನವನಗಳಿಗೆ ಶುದ್ಧ ನೀರು ಬಿಡಲಾಗುತ್ತಿದ್ದು, ಇದರಿಂದ ನೀರು ಪೋಲಾಗುತ್ತಿದೆ. ಎಪ್ರಿಲ್, ಮೇ ತಿಂಗಳಲ್ಲಿ ವಿವಿ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಎದುರಾಗುತ್ತದೆ. ಈ ಹಿನ್ನೆಲೆಯಲ್ಲಿ ಬಳಸಿದ ನೀರನ್ನು ಶುದ್ಧಿಕರಿಸಿ ಉದ್ಯಾನವನಗಳಿಗೆ ಬಿಡಲು ಚಿಂತನೆ ನಡೆಸಲಾಗಿದೆ. ಸಿಂಡಿಕೇಟ್ ಸಭೆಯಲ್ಲಿ ಈ ಪ್ರಸ್ತಾವನೆಗೆ ಸಮ್ಮತಿ ದೊರೆತರೆ ಮಂಗಳೂರು ವಿವಿ ಕ್ಯಾಂಪಸ್‌ ರಾಜ್ಯದ ಎಲ್ಲ ವಿವಿಗಳಿಗೆ ಮಾದರಿಯಾಗಬಲ್ಲದು.
– ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.