ಅಮಾಯಕರ ಬಂಧನ ಇಲ್ಲ : ಎಡಿಜಿಪಿ ಆಲೋಕ್‌


Team Udayavani, Jul 13, 2017, 3:50 AM IST

ADGP-Alok-Mohan.jpg

ಮಂಗಳೂರು: ಬಂಟ್ವಾಳ ತಾಲೂಕಿನಲ್ಲಿ ನಡೆದ ಅಹಿತಕರ ವಿದ್ಯಮಾನಗಳಿಗೆ ಸಂಬಂಧಿಸಿ ಅಮಾಯಕರನ್ನು ಬಂಧಿಸುವುದಿಲ್ಲ; ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನೈಜ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಎಡಿಜಿಪಿ ಆಲೋಕ್‌ ಮೋಹನ್‌ ತಿಳಿಸಿದರು.

ಬುಧವಾರ ದ.ಕ. ಜಿಲ್ಲೆಗೆ ಭೇಟಿ ನೀಡಿದ ಅವರು ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಪೊಲೀಸ್‌ ಅಧಿಕಾರಿಗಳ ಸಭೆ ನಡೆಸಿ ಬಂಟ್ವಾಳ ಮತ್ತು ಉಳ್ಳಾಲಕ್ಕೆತೆರಳಿ ಪರಿಸ್ಥಿತಿ ಅವಲೋಕಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಶರತ್‌ ಕೊಲೆ ಪ್ರಕರಣದ ಆರೋಪಿಗಳಿಗೆ ಸಂಬಂಧಿಸಿ ಕೆಲ ವೊಂದು ಸುಳಿವುಗಳು ಲಭ್ಯವಾಗಿವೆ. ಈ ಪ್ರಕರಣ ಮತ್ತು ನಂತರದ ಘಟನಾ ವಳಿಗೆ ಸಂಬಂಧಿಸಿ ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿದೆ. ಅತೀ ಶೀಘ್ರ ದಲ್ಲಿ ಆರೋಪಿಗಳನ್ನು ಬಂಧಿಸುವ ವಿಶ್ವಾಸವಿದೆ. ಕೆಲವು ಘಟನೆಗಳಿಗೆ ಸಂಬಂಧಿಸಿ ಸೂಕ್ತ ಸಾಕ್ಷಾ  éಧಾರಗಳು ಲಭಿಸಿದ ಕಾರಣ ಶೀಘ್ರ ಆರೋಪಿಗಳ ಪತ್ತೆ ಸಾಧ್ಯವಾಗಿದೆ.

ಸಾಕ್ಷ್ಯಾಧಾರಗಳಿಲ್ಲದೆ ಯಾರನ್ನೂ ಬಂಧಿಸುವುದಿಲ್ಲ ಎಂದರು. ಬಂಟ್ವಾಳ ಸಹಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗ ಪರಿಸ್ಥಿತಿ ಶಾಂತಿಯುತ ವಾಗಿದೆ. ಎಲ್ಲಿಯೂ ಕೋಮು ಸಂಘರ್ಷ ಗಳು ನಡೆದ ಬಗ್ಗೆ ವರದಿ ಯಾಗಿಲ್ಲ. ಆದರೆ ಇತರ ಸಾಮಾನ್ಯ ಅಪರಾಧ ಗಳಿಗೆ ಸಂಬಂಧಿಸಿ ಉಳ್ಳಾಲ, ಉಪ್ಪಿನಂಗಡಿ, ಕುಪ್ಪೆಪದವಿನಲ್ಲಿ 3 ಪ್ರತ್ಯೇಕ ಪ್ರಕರಣಗಳು ನಡೆ ದಿದ್ದು, ಎಲ್ಲವೂ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಸಂಭವಿ ಸಿವೆ ಎಂದರು.

ಸಾಮಾಜಿಕ ಜಾಲ ತಾಣಗಳಲ್ಲಿ ಬರುತ್ತಿರುವ ಕೆಲವೊಂದು ಸುದ್ದಿ ಗಳು ಸುಳ್ಳು ಎಂಬುದು ಈಗ ಜನರಿಗೂ ಅರ್ಥವಾಗಿದೆ. ಇಂತಹ ಸುದ್ದಿಗಳಲ್ಲಿ ಅಪರಾಧ ಸಂಬಂಧಿತ ಸುದ್ದಿಗಳಿದ್ದರೆ ಪೊಲೀಸರು ಕ್ರಮ ಜರಗಿಸು ತ್ತಾರೆ. ಈ ಹಿಂದೆ ಮಂಗಳೂರಿನ ಕಮಿಷನರ್‌ ಆಗಿದ್ದ ಎಂ. ಚಂದ್ರ ಶೇಖರ್‌ ಅವರು ಫೇಸ್‌ಬುಕ್‌ ಸಂಸ್ಥೆಯ ಮೇಲೆ ದಾಖಲಿ ಸಿದ್ದ ದೂರು ಪ್ರಕರಣಗಳನ್ನು ಅಲ್ಲಿಗೇ ಕೈಬಿಡುವುದಿಲ್ಲ ಎಂದು ವಿವರಿಸಿದರು.

ಹಿಂಜಾವೇ ಮುಖಂಡ ಸತ್ಯಜಿತ್‌ ಸುರತ್ಕಲ್‌ ಅವರ ವಿರುದ್ಧ ಪ್ರಕರಣ ದಾಖಲಿಸಿರುವ ಬಗ್ಗೆ ಪ್ರಶ್ನಿಸಿದಾಗ ಪ್ರಕರಣ ದಾಖಲಿಸುವುದು ಮತ್ತು ಚಾರ್ಜ್‌ ಶೀಟ್‌ ಹಾಕುವುದು ಬೇರೆ ಬೇರೆ ಪ್ರಕ್ರಿಯೆಗಳಾಗಿವೆ. ಸೂಕ್ತ ಸಾಕ್ಷ್ಯಾಧಾರ ಲಭಿಸಿದರೆ ಮಾತ್ರ ಚಾರ್ಜ್‌ ಶೀಟ್‌ ಹಾಕಲಾಗುತ್ತದೆ. ಈ ಪ್ರಕರಣದಲ್ಲಿ ಜನರ ಹೇಳಿಕೆಗಳನ್ನು ಹಾಗೂ ಸತ್ಯಜಿತ್‌ ಅವರ ಹೇಳಿಕೆಗಳನ್ನೂ ಪಡೆದು ಮುಂದಿನ ಕ್ರಮ ಜರಗಿಸಲಾಗುವುದು. ಆದರೆ ಏನಿದ್ದರೂ ಅಮಾಯಕರ ಮೇಲೆ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಎಡಿಜಿಪಿ ತಿಳಿಸಿದರು.

ವಿವಿಧ ವಿದ್ಯಮಾನಗಳಿಗೆ ಸಂಬಂಧಿಸಿ ಸಾರ್ವಜನಿಕರು ಕೂಡ ಪೊಲೀಸರಿಗೆ ಮಾಹಿತಿ ನೀಡಬಹುದು. ಮಾಹಿತಿದಾರರ ಬಗ್ಗೆ  ಗೌಪ್ಯತೆ ಕಾಪಾಡಲಾಗುವುದು ಎಂದು ತಿಳಿಸಿದರು. 

ಕಲ್ಲು  ತೂರಾಟ:
6 ಕೇಸು ದಾಖಲು

ಶರತ್‌ ಶವಯಾತ್ರೆ ಸಂದರ್ಭ ದಲ್ಲಿ ಬಿ.ಸಿ.ರೋಡ್‌ ಕೈಕಂಬದಲ್ಲಿ ನಡೆದ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿ ಒಟ್ಟು 6 ಪ್ರಕರಣ ಗಳನ್ನು ದಾಖಲಿಸಲಾಗಿದೆ. ವಿವಿಧ ಪ್ರಕರಣಗಳಿಗೆ ಸಂಬಂಧಿಸಿ ಇದುವರೆಗೆ ಒಟ್ಟು 17 ಜನರನ್ನು ಬಂಧಿಸಲಾಗಿದೆ. ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಸಿಸಿ ಟಿವಿ ಫೂಟೇಜ್‌ಗಳನ್ನು ಆಧರಿಸಿ ಜಿಲ್ಲಾ ಎಸ್‌ಪಿ ಮತ್ತು ಐಜಿಪಿ ಅವರು ದೃಢೀಕರಿಸಿದ ಬಳಿಕ ಬಂಧಿಸುವ ಪ್ರಕ್ರಿಯೆ ನಡೆದಿದೆ ಎಂದು ಐಜಿಪಿ ವಿವರಿಸಿದರು. 

ಡಾ| ಕಲ್ಲಡ್ಕ ಪ್ರಭಾಕರ ಭಟ್‌ ಬಂಧನಕ್ಕೆ ಸರಕಾರದಿಂದ ಯಾವುದೇ ಸೂಚನೆ ಬಂದಿದೆಯೇ ಎಂದು ಪತ್ರಕರ್ತರು ಪ್ರಶ್ನಿಸಿದಾಗ “ನಾವು ಕಾನೂನು ಪ್ರಕಾರ ನಡೆಯುತ್ತೇವೆ’ ಎಂದಷ್ಟೇ ಎಡಿಜಿಪಿ ತಿಳಿಸಿದರು.

ಟಾಪ್ ನ್ಯೂಸ್

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Rain ಮುಂದುವರಿದ “ಎಲ್ಲೋ ಅಲರ್ಟ್‌’

Rain ಮುಂದುವರಿದ “ಎಲ್ಲೋ ಅಲರ್ಟ್‌’

Natural Ice Cream ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ

Natural Ice Cream ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

1-wqewqewe

Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.