ವೈದ್ಯರ ಮುಷ್ಕರ: ನಾಳೆ ಒಪಿಡಿ ಸೇವೆ ಇಲ್ಲ
Team Udayavani, Jun 16, 2019, 10:36 AM IST
ಮಂಗಳೂರು/ಉಡುಪಿ: ಪ. ಬಂಗಾಲ ದಲ್ಲಿ ವೈದ್ಯರ ಮೇಲೆ ಹಲ್ಲೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘದ ಕರೆಯಂತೆ ಜೂ. 17ರ ಬೆಳಗ್ಗೆ 6 ಗಂಟೆಯಿಂದ ಜೂ. 18ರ ಬೆಳಗ್ಗೆ 6 ಗಂಟೆಯ ವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಎಲ್ಲ ಆಸ್ಪತ್ರೆಗಳಲ್ಲಿ ಹೊರರೋಗಿ ವಿಭಾಗ ಕಾರ್ಯ ನಿರ್ವಹಿಸುವುದಿಲ್ಲ.
ಭಾರತೀಯ ವೈದ್ಯಕೀಯ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಡಾ| ಗುರುಮೂರ್ತಿ ಭಟ್ ಮತ್ತು ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಘಟಕದ ಅಧ್ಯಕ್ಷ ಡಾ| ಬಿ. ಸಚ್ಚಿದಾನಂದ ರೈ ಈ ವಿಚಾರ ತಿಳಿಸಿದ್ದಾರೆ.
ಮಂಗಳೂರು ಮತ್ತು ಉಡುಪಿಯ ಎಲ್ಲ ಖಾಸಗಿ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ ಜೂ. 17ರ ಬೆಳಗ್ಗೆ 6ರಿಂದ 18ರ ಬೆಳಗ್ಗೆ 6 ಗಂಟೆಯ ವರೆಗೆ ಬಂದ್ ನಡೆಯಲಿದ್ದು, ಒಪಿಡಿ ಸಹಿತ ಯಾವುದೇ ಸೇವೆ ಲಭ್ಯವಿರುವುದಿಲ್ಲ. ಆಸ್ಪತ್ರೆಗಳ ಮೆಡಿಕಲ್ ಅಂಗಡಿಗಳಲ್ಲಿಯೂ ಸೇವೆ ಇರದು. ಆದರೆ ತುರ್ತು ಸೇವೆಗಳಿಗೆ ವಿನಾಯಿತಿ ಇದೆ ಎಂದವರು ವಿವರಿಸಿದ್ದಾರೆ.
ಮಣಿಪಾಲ ಆಸ್ಪತ್ರೆ, ಉಡುಪಿ ಮತ್ತು ಕಾರ್ಕಳದ ಡಾ| ಟಿಎಂಎ ಪೈ ಆಸ್ಪತ್ರೆ ಗಳಲ್ಲಿಯೂ ಒಪಿಡಿ ಸೇವೆ ಇರುವುದಿಲ್ಲ. ಆದರೆ ತುರ್ತುಚಿಕಿತ್ಸೆ ಇರಲಿವೆ ಎಂದು ಕೆಎಂಸಿ ಮಣಿಪಾಲದ ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ ಶೆಟ್ಟಿ ತಿಳಿಸಿದ್ದಾರೆ. ವೈದ್ಯರ ಮುಷ್ಕರಕ್ಕೆ ಎರಡೂ ಜಿಲ್ಲೆಗಳ ಆಯುಷ್ ಫೌಂಡೇಶನ್ ಘಟಕಗಳು ಬೆಂಬಲ ವ್ಯಕ್ತಪಡಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್