ದೀಪಾವಳಿ ಕಳೆದರೂ ಅತಿಥಿ ಶಿಕ್ಷಕರಿಗಿಲ್ಲ ವೇತನ

ಜೂನ್‌ನಲ್ಲಿ ನೇಮಕ; ಬಳಿಕ ಶಿಕ್ಷಣ ಇಲಾಖೆ ಸಂಬಳ ನೀಡಿಲ್ಲ

Team Udayavani, Nov 2, 2019, 5:27 AM IST

nov-40

ಸಾಂದರ್ಭಿಕ ಚಿತ್ರ

ಸುಬ್ರಹ್ಮಣ್ಯ: ರಾಜ್ಯದ ಸರಕಾರಿ ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಣ ಸಂಸ್ಥೆಗಳಲ್ಲಿ ಕರ್ತವ್ಯ ನಿರತರಾಗಿರುವ ಸುಮಾರು 25 ಸಾವಿರ ಅತಿಥಿ ಶಿಕ್ಷಕರ ಪಾಲಿಗೆ ಈ ಬಾರಿ ದಸರಾ ಬಿಡಿ, ದೀಪಾವಳಿ ಹಬ್ಬದ ಸಂಭ್ರಮವೂ ಇರಲಿಲ್ಲ. ಇವರಿಗೆ ಐದು ತಿಂಗಳಿಂದ ಸರಕಾರ ಮಾಸಿಕ ಗೌರವಧನ ವೇತನ ನೀಡದಿರುವುದು ಇದಕ್ಕೆ ಕಾರಣ.

ಅತಿಥಿ ಶಿಕ್ಷಕರ ನೇಮಕ
2019-20ನೇ ಸಾಲಿಗೆ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ಸರಕಾರವು ಆ ಜೂನ್‌ ತಿಂಗಳಲ್ಲಿ ನೇಮಸಿಕೊಂಡಿತ್ತು. ರಾಜ್ಯದಲ್ಲಿ ಸುಮಾರು 25 ಸಾವಿರ ಅತಿಥಿ ಶಿಕ್ಷಕರಿದ್ದು, ದ.ಕ. ಜಿಲ್ಲೆಯಲ್ಲಿ ಪ್ರಾಥಮಿಕ ವಿಭಾಗದಲ್ಲಿ 633 ಮತ್ತು ಪ್ರೌಡಶಾಲೆಯಲ್ಲಿ 111 ಮಂದಿಯನ್ನು ನೇಮಿಸಿಕೊಳ್ಳಲಾಗಿದೆ. ಗೌರವ ಧನವಾಗಿ ಪ್ರಾಥಮಿಕ ಶಾಲೆಗೆ ಮಾಸಿಕ 10,500 ಮತ್ತು ಪ್ರೌಢಶಾಲೆಗೆ 12,500 ರೂ. ನಿಗದಿಪಡಿಸಲಾಗಿತ್ತು. ಹಿಂದಿನ ವರ್ಷ 7,500 ರೂ. ನೀಡಲಾಗಿತ್ತು.

ತಾರತಮ್ಯ ಧೋರಣೆ
ಸರಕಾರಿ ಶಿಕ್ಷಕರಿಗೆ ಪ್ರತಿ ತಿಂಗಳ ಒಂದರಂದು ವೇತನ ನೀಡುವ ಸರಕಾರ ಅತಿಥಿ ಶಿಕ್ಷಕರತ್ತ ಮಾತ್ರ ತಾರತಮ್ಯ ಧೋರಣೆ ಅನುಸರಿಸುತ್ತಿದೆ. ಸರಕಾರಿ ಶಿಕ್ಷಕರಿಗಿಂತ ಕಡಿಮೆ ವೇತನ ಪಡೆಯು ತ್ತಿದ್ದರೂ ಜೂನ್‌ ತಿಂಗಳಿಂದ ನಮಗೆ ವೇತನ ನೀಡಿಲ್ಲ. ಇದರಿಂದ ಕುಟುಂಬ ನಿರ್ವಹಣೆ ಕಷ್ಟವಾಗುತ್ತಿದೆ ಎಂದು ಅಳಲು ತೋಡಿಕೊಳ್ಳುತ್ತಿದ್ದಾರೆ.

ತಾಂತ್ರಿಕ ತೊಂದರೆ
ತಾಂತ್ರಿಕ ತೊಂದರೆಯಿಂದ ವೇತನ ವಿಳಂಬವಾಗಿದೆ ಎನ್ನುವುದು ಇಲಾಖೆ ನೀಡುವ ಸಬೂಬು. ಆದರೆ ನೈಜ ಕಾರಣ ಆರ್ಥಿಕ ಮುಗ್ಗಟ್ಟು ಕಾರಣ ಎನ್ನಲಾಗುತ್ತಿದೆ. ಇಲಾಖೆ ಅಧಿಕಾರಿಗಳ ಬಳಿ ವಿಚಾರಿಸಿದರೆ ವೇತನ ಶೀಘ್ರ ಬರಲಿದೆ ಎನ್ನುತ್ತಾರೆ. ಬಳ್ಳಾರಿ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಕಳೆದ ವರ್ಷದ ವೇತನವೇ ಇನ್ನೂ ಪಾವತಿ ಆಗಿಲ್ಲ.

ದಿನಗೂಲಿಗಿಂತ ಕಳಪೆ
ಸರಕಾರಿ ರಜೆ ವೇತನದಲ್ಲಿ ಕಡಿತ ಮಾತ್ರವಲ್ಲದೆ ದಸರಾ ರಜೆಯಲ್ಲಿ 12 ದಿನ ಮಾತ್ರ ಗಣನೆಗೆ ತೆಗೆದು ಕೊಳ್ಳಲಾಗುತ್ತಿದೆ. ಮಾಸಿಕ 1ರಂತೆ ವಾರ್ಷಿಕ ಗಳಿಕೆ ರಜೆ ನೀಡಲಾಗುತ್ತಿದೆ. ಇದರಿಂದ ಮಹಿಳಾ ಶಿಕ್ಷಕಿಯರು ಹೆಚ್ಚು ತೊಂದರೆಗೆ ಒಳಗಾಗುತ್ತಿದ್ದಾರೆ. ನಮ್ಮನ್ನು ದಿನಗೂಲಿಗಳಿಗಿಂತಲೂ ಕಡೆಯಾಗಿ ದುಡಿಸಿಕೊಳ್ಳುತ್ತಿದ್ದಾರೆ ಎನ್ನುವುದು ಅತಿಥಿ ಶಿಕ್ಷಕಿಯೊಬ್ಬರ ಅಳಲು.

ಅತಿಥಿ ಶಿಕ್ಷಕರ ವೇತನ ವಿಳಂಬಕ್ಕೆ ಕಾರಣ ಕುರಿತು ಪರಿಶೀಲಿಸಿ ಶೀಘ್ರ ಕ್ರಮ ಕೈಗೊಳ್ಳಲಾಗುವುದು
-ಸುರೇಶ್‌ ಕುಮಾರ್‌
ಶಿಕ್ಷಣ ಸಚಿವರು

ಅತಿಥಿ ಶಿಕ್ಷಕರ ನೇಮಕ ಮತ್ತು ವೇತನ ಇತ್ಯಾದಿ ಜಿಲ್ಲೆಗೆ ಒಂದರಂತೆ ನಿಯಮವಿದೆ. ಸೇವಾಭದ್ರತೆ, ಸಾಮಾಜಿಕ ಭದ್ರತೆ ಯಾವುದೂ ಇಲ್ಲ. ಅತಿಥಿ ಶಿಕ್ಷಕರಿಗೆ ಅನ್ಯಾಯವಾಗುತ್ತಿದೆ. ಒಗ್ಗಟ್ಟಿನ ಕೊರತೆ ಕೂಡ ಸವಲತ್ತು ಪಡೆಯುವಲ್ಲಿ ವಿಫಲವಾಗಲು ಕಾರಣ.
– ರಾಜೇಶ್‌ ಎಂ.ಡಿ. ಮೈಸೂರು
ಪ್ರಧಾನ ಕಾರ್ಯದರ್ಶಿ, ರಾಜ್ಯ ಪ್ರಾ., ಪ್ರೌ. ಅತಿಥಿ ಶಿಕ್ಷಕರ ಸಂಘ, ಬೆಂಗಳೂರು

– ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ; ಪ್ರಕರಣ ದಾಖಲು

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.