ಇನ್ನೆರಡು ತಿಂಗಳು ಮರಳುಗಾರಿಕೆ ಇಲ್ಲ


Team Udayavani, May 28, 2021, 8:15 AM IST

ಇನ್ನೆರಡು ತಿಂಗಳು ಮರಳುಗಾರಿಕೆ ಇಲ್ಲ

ಸಾಂದರ್ಭಿಕ ಚಿತ್ರ

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸಿಆರ್‌ಝಡ್‌ ಹಾಗೂ ನಾನ್‌ ಸಿಆರ್‌ಝಡ್‌ ವಲಯದಲ್ಲಿ ಜೂ. 1ರಿಂದ‌ ಜುಲೈ 31ರ ವರೆಗೆ ಮರಳುಗಾರಿಕೆ ನಿಷೇಧಗೊಳ್ಳಲಿದ್ದು, ಮರಳು ತೆಗೆಯುವ ಕಾರ್ಯ ಸಂಪೂರ್ಣ ಸ್ಥಗಿತಗೊಳ್ಳಲಿದೆ.

ಹಾಲಿ ಅವಧಿಯ ನವೆಂಬರ್‌ನಿಂದ ಮೇ 10ರ ವರೆಗೆ ಸಿಆರ್‌ಝಡ್‌ ಹಾಗೂ ನಾನ್‌ಸಿಆರ್‌ಝಡ್‌ ವಲಯಗಳಲ್ಲಿ ಒಟ್ಟು 3,93,539 ಮೆಟ್ರಿಕ್‌ ಟನ್‌ ಮರಳು ತೆರವುಗೊಳಿಸಲಾಗಿದೆ. ಉಡುಪಿ ಜಿಲ್ಲೆಯ ಸಿಆರ್‌ಝಡ್‌ ವಲಯದಲ್ಲಿ ಒಟ್ಟು 4.55 ಲ.ಮೆ.ಟನ್‌ ಮರಳು ತೆಗೆಯಲಾಗಿದೆ.

ಸಿಆರ್‌ಝಡ್‌ನ‌ಲ್ಲಿ ಮರಳು ತೆರವಿಗೆ ನೀಡಿರುವ ಪರವಾನಿಗೆ ಸೆಪ್ಟಂಬರ್‌ ವರೆಗೆ ಇರುವುದರಿಂದ ಆಗಸ್ಟ್‌ 1ರಿಂದ ಸೆಪ್ಟಂಬರ್‌ ಕೊನೆಯ ವರೆಗೆ ಮರಳು ತೆಗೆಯಬಹುದಾಗಿದೆ. ಬಳಿಕ ಹೊಸದಾಗಿ ಬೆಥಮೆಟ್ರಿಕ್‌ ಸರ್ವೇ, ಮರಳು ದಿಬ್ಬಗಳ ಗುರುತಿಸುವಿಕೆ, ಪರಿಸರ ಇಲಾಖೆಯ ಅನುಮತಿ ಇತ್ಯಾದಿ ಪ್ರಕ್ರಿಯೆಗಳು ನಡೆಯಬೇಕು.

ಮರಳು ತೆರವು :

ದ.ಕ. ಜಿಲ್ಲೆಯ ಸಿಆರ್‌ಝಡ್‌ನ‌ಲ್ಲಿ ಮೇ 10ರ ವರೆಗೆ 2,26,852 ಮೆಟ್ರಿಕ್‌ ಟನ್‌ ಮರಳು ತೆರವುಗೊಳಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ 4,55,000 ಮೆಟ್ರಿಕ್‌ ಟನ್‌ ಮರಳು ತೆರವುಗೊಳಿಸಲಾಗಿದೆ. 2019ರ ಡಿ. 26ಕ್ಕೆ ಕೊನೆಗೊಂಡಿದ್ದ ಮರಳುಗಾರಿಕೆ 11 ತಿಂಗಳುಗಳ ಬಳಿಕ 2020ರ ನವೆಂಬರ್‌ನಲ್ಲಿ ಮರು ಆರಂಭಗೊಂಡಿತ್ತು. ಸಿಆರ್‌ಝಡ್‌ನೊಳಗೆ ಬರುವ ನೇತ್ರಾವತಿ ನದಿಯಲ್ಲಿ 8, ಗುರುಪುರ ನದಿಯಲ್ಲಿ 4 ಹಾಗೂ ಶಾಂಭವಿ ನದಿಯಲ್ಲಿ 1 ಬ್ಲಾಕ್‌ ಸೇರಿದಂತೆ 13 ಬ್ಲಾಕ್‌ಗಳಲ್ಲಿ (ದಿಬ್ಬ) ಈ ಬಾರಿ ಮರಳು ತೆರವಿಗೆ ಪರಿಸರ ಇಲಾಖೆಯಿಂದ ಅನುಮತಿ ಲಭಿಸಿ ಎರಡು ಹಂತಗಳಲ್ಲಿ 105 ಮಂದಿ ಗುತ್ತಿಗೆದಾರರಿಗೆ ಮರಳು ತೆಗೆಯಲು ಪರವಾನಿಗೆ ನೀಡಲಾಗಿತ್ತು.

ನಾನ್‌ ಸಿಆರ್‌ಝಡ್‌ನ‌ಲ್ಲಿ ಇ-ಟೆಂಡರ್‌ ಮೂಲಕ 16 ಬ್ಲಾಕ್‌ಗಳ ಗುತ್ತಿಗೆ ಮಂಜೂರು ಮಾಡಲಾಗಿದ್ದು, 1,66,684 ಮೆ.ಟನ್‌ ಮರಳು ತೆರವುಗೊಳಿಸಲಾಗಿದೆ.

ಕಾರ್ಮಿಕರ ಕೊರತೆ :

ಕೊರೊನಾ 2ನೇ ಅಲೆ ಮತ್ತು ಲಾಕ್‌ಡೌನ್‌ ಕಾರಣದಿಂದ ಕಾರ್ಮಿಕರ ಕೊರತೆ ಎದುರಾದ್ದರಿಂದ ಮರಳುಗಾರಿಕೆ ನಿರತ ಬಹುತೇಕ ದೋಣಿಗಳು ಈಗಾಗಲೇ ದಡಸೇರಿವೆ. ಕಾರ್ಮಿಕರಲ್ಲಿ ಬಹುಪಾಲು ಮಂದಿ ಬಿಹಾರ, ಝಾರ್ಖಂಡ್‌, ಉತ್ತರ ಪ್ರದೇಶ, ಒಡಿಶಾ ಹಾಗೂ ಪಶ್ಚಿಮ ಬಂಗಾಲ ಸೇರಿದಂತೆ ಉತ್ತರ ಭಾರತದವರಾಗಿದ್ದು ಊರಿಗೆ ತೆರಳಿದ್ದಾರೆ. ಜಿಲ್ಲೆಯಲ್ಲಿ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ನಿರ್ಮಾಣ ಚಟುವಟಿಕೆಗಳು ಕುಂಠಿತಗೊಂಡಿರುವ ಹಿನ್ನೆಲೆಯಲ್ಲಿ ಮರಳು ಸಮಸ್ಯೆ ಉಂಟಾಗಿಲ್ಲ.

ಕರಾವಳಿಯಲ್ಲಿ ಮಳೆಗಾಲ ಹಾಗೂ ಮೀನುಗಳ ಸಂತಾನೋತ್ಪತ್ತಿ ಹಿನ್ನೆಲೆಯಲ್ಲಿ ಎರಡು ತಿಂಗಳು ಮರಳುಗಾರಿಕೆಗೆ ನಿಷೇಧವಿರುತ್ತದೆ. ಸಿಆರ್‌ಝಡ್‌ನ‌ಲ್ಲಿ ಆಗಸ್ಟ್‌ನಿಂದ ಮರಳಿ ಪ್ರಾರಂಭವಾಗಲಿದ್ದು ಪರವಾನಿಗೆ ಮುಕ್ತಾಯದ ವರೆಗೆ ಚಾಲನೆಯಲ್ಲಿರುತ್ತದೆ.ನಿರಂಜನ್‌, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕರು, ದ.ಕ,-ಸಂದೀಪ್‌, ಹಿರಿಯ ಭೂ ವಿಜ್ಞಾನಿ, ಉಡುಪಿ

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.