ನಗರದಲ್ಲಿ ಹಸುರು ಮಾಯವಾಗುತ್ತಿದೆ !


Team Udayavani, Jun 24, 2019, 11:17 AM IST

map

ಮಹಾನಗರ: ಅಭಿವೃದ್ಧಿಯ ಹೆಸರಿನಲ್ಲಿ ನಗರದಲ್ಲಿ ಮರಗಳನ್ನು ಕಡಿಯಲಾಗುತ್ತಿದ್ದು, ಮಹಾನಗರ ಪಾಲಿಕೆಯ 60 ವಾರ್ಡ್‌ಗಳ ಪೈಕಿ ಬಂದರು ಮತ್ತು ಕುದ್ರೋಳಿ ವಾರ್ಡ್‌ಗಳಲ್ಲಿ ಅತೀ ಕಡಿಮೆ ಪ್ರಮಾಣದಲ್ಲಿ ಮರ-ಗಿಡಗಳಿವೆ.

ಕುದ್ರೋಳಿ, ಬಂದರು ವಾರ್ಡ್‌ಗಳಲ್ಲಿ ಕೇವಲ ಶೇ. 0.5ನಷ್ಟು ಪ್ರದೇಶದಲ್ಲಿ ಮಾತ್ರ ಮರ-ಗಿಡಗಳಿವೆ. ಈ ವಿಚಾರವನ್ನು ಅರಣ್ಯ ಇಲಾಖೆ ಇದೀಗ ಗಂಭೀರವಾಗಿ ಪರಿಗಣಿ ಸಿದ್ದು, ಈ ಎರಡೂ ವಾರ್ಡ್‌ ಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಸುಮಾರು 100 ಗಿಡ ನೆಡುವ ಯೋಜನೆಯನ್ನು ಹಾಕಿದೆ. ಬಂದರು ವಾರ್ಡ್‌ನಲ್ಲಿ ಸದ್ಯ ಕಟ್ಟಡಗಳ ಸಂಖ್ಯೆ ಹೆಚ್ಚಿರುವುದರಿಂದ ಗಿಡ ಗಳನ್ನು ನೆಡಲು ಸ್ಥಳಾವಕಾಶದ ಕೊರತೆ ಇದೆ. ಆದರೂ ಯಾವೆಲ್ಲ ಪ್ರದೇಶ ಗಳಲ್ಲಿ ಗಿಡ ನೆಡಬಹುದು ಎಂದು ಪರಿಶೀಲಿಸಲಾಗುತ್ತಿದೆ.

ಮಂಗಳೂರು ವಲಯ ಅರಣ್ಯಾಧಿಕಾರಿ ಶ್ರೀಧರ್‌ ಅವರು ‘ಸುದಿನ’ಕ್ಕೆ ಪ್ರತಿಕ್ರಿಯಿಸಿ, ಕೆಲವು ವರ್ಷಗಳ ಹಿಂದೆ ನಿಟ್ಟೆ ಡೀಮ್ಡ್ ಯುನಿವರ್ಸಿಟಿಯು 2011ರ ಜನಗಣತಿಗೆ ಅನುಗುಣವಾಗಿ 2016ರಲ್ಲಿ ಸರ್ವೆ ನಡೆಸಿದೆ. ಈ ವೇಳೆ ನಗರದ ಬಂದರು ಮತ್ತು ಕುದ್ರೋಳಿ ವಾರ್ಡ್‌ಗಳಲ್ಲಿ ಕಡಿಮೆ ಪ್ರಮಾಣದಲ್ಲಿ ಮರಗಳಿವೆ ಎಂಬ ವಿಷಯ ತಿಳಿಯಿತು. ಪಾಲಿಕೆ ವ್ಯಾಪ್ತಿಯು 2001ರಲ್ಲಿ ಶೇ.22ರಷ್ಟು ಹಸುರೀಕರಣವಾಗಿತ್ತು. 2011ರಲ್ಲಿ ಶೇ.20 ಮತ್ತು 2018ರಲ್ಲಿ ಶೇ.18ಕ್ಕೆ ಇಳಿದಿದೆ. 7ರಿಂದ 8 ವರ್ಷದಲ್ಲಿ ಸುಮಾರು ಶೇ.2ರಿಂದ 3ರಷ್ಟು ಹಸುರು ಪ್ರದೇಶ ಕಡಿಮೆಯಾಗುತ್ತಿದೆ ಎಂದು ತಿಳಿಸಿದ್ದಾರೆ.

ನಿಟ್ಟೆ ಯುನಿವರ್ಸಿಟಿ ಸೆಂಟರ್‌ ಫಾರ್‌ ಸೈನ್ಸ್‌ ಎಜುಕೇಶನ್‌ ಆ್ಯಂಡ್‌ ರಿಸರ್ಚ್‌ನ ಪ್ರೊಪೆಸರ್‌ ಡಾ| ಸ್ಮಿತಾ ಹೆಗ್ಡೆ ಮಾರ್ಗದರ್ಶನದಲ್ಲಿ ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್‌ ಆರ್ಕಿಟೆಕ್ಟ್ ವಿಭಾಗದ ಸಹಾಯಕ ಪ್ರೊಫೆಸರ್‌ ಸಂಗೀತಾ ಎಸ್‌. ಅವರು 2011ನೇ ಇಸವಿಯಲ್ಲಿ ‘ಮರ, ಜನರು ಮತ್ತು ನಗರ: ವೇಗವಾಗಿ ಬೆಳೆಯುತ್ತಿರುವ ಮಂಗಳೂರು ನಗರದಲ್ಲಿನ ಹಸುರೀಕರಣ’ ವಿಷಯದಲ್ಲಿ ಸಂಶೋಧನೆ ನಡೆಸಿದ್ದರು.

ಡಾ| ಸ್ಮಿತಾ ಹೆಗ್ಡೆ ಅವರು ಈ ಬಗ್ಗೆ ಪ್ರತಿಕ್ರಿಯಿಸಿ, ಮಂಗಳೂರಿಗೆ ಸ್ಮಾರ್ಟ್‌ ಸಿಟಿ ಯೋಜನೆ ಬರುವ ವೇಳೆ ನಗರಕ್ಕೆ ಎಷ್ಟು ಹಸುರಾಗಿರಬೇಕು ಎಂಬ ವಿಷಯ ತಿಳಿಯುವ ಸಲುವಾಗಿ ಈ ಸಂಶೋಧನೆಯನ್ನು ಕೈಗೊಂಡಿದ್ದೆವು. ಬಂದರು ಮತ್ತು ಕುದ್ರೋಳಿ ವಾರ್ಡ್‌ಗಳಲ್ಲಿ ಶೇ.0.5ನಷ್ಟು ಪ್ರದೇಶದಲ್ಲಿ ಮರ ಗಿಡಗಳಿರುವುದು ತಿಳಿದು ಬಂತು. 2008, 2016ರ ಸ್ಯಾಟಲೈಟ್ ಇಮೇಜ್‌ ಆಧಾರಿತವಾಗಿ ಸರ್ವೆ ಮಾಡಲಾಗಿದೆ. ನಗರದ ಇನ್ನು ಕೆಲವು ಪ್ರದೇಶಗಳಲ್ಲಿ ಮರ ಗಳ ಸಂಖ್ಯೆ ಹೆಚ್ಚು ಕಾಣುತ್ತದೆ. ಆದರೆ, ಜನಗಳ ಸಾಂಧ್ರತೆ ಮತ್ತಷ್ಟು ಜಾಸ್ತಿ ಇದ್ದು, ಸಮತೋಲನವಾಗಿಲ್ಲ ಎಂದಿದ್ದಾರೆ.

ಯಾವುದೇ ನಗರದಲ್ಲಿ ಕನಿಷ್ಠ ಶೇ. 33ರಷ್ಟು ಮರ ಗಿಡಗಳಿಂದ ಹಸುರೀಕರಣದಿಂದ ಕೂಡಿರಬೇಕು. ಆದರೆ ನಗರದಲ್ಲಿ ಕೇವಲ ಶೇ. 18ರಷ್ಟು ಮಾತ್ರ ಹಸುರು ತುಂಬಿಕೊಂಡಿದೆ. ಮತ್ತೂಂದೆಡೆ ರಾಜ್ಯದಲ್ಲಿಯೂ ಹಸುರು ಪ್ರದೇಶ ಕಡಿಮೆಯಾಗುತ್ತಿದ್ದು, ಶೇ.23ಕ್ಕೆ ಇಳಿದಿದೆ.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.