10 ವರ್ಷ ದಾಟಿದರೂ ದುರಸ್ತಿ ಕಾಣದ ಕಿಂಡಿ ಅಣೆಕಟ್ಟು


Team Udayavani, Jan 21, 2018, 2:18 PM IST

21-Jan-13.jpg

ಸುಳ್ಯ : ಈ ಕಿಂಡಿ ಅಣೆಕಟ್ಟು ನಿರ್ಮಾಣಗೊಂಡು 19 ವರ್ಷ. ಅದು ಕುಸಿದು ಬಿದ್ದು 10 ವರ್ಷ ಸಂದಿದೆ. ದುರಸ್ತಿ ಪಡಿಸಿ ಎಂದು ಸ್ಥಳೀಯರು ಇಟ್ಟ ಬೇಡಿಕೆಗಂತೂ ಲೆಕ್ಕವೇ ಇಲ್ಲ. ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯದ ಪರಿಣಾಮ, ಬೇಸಗೆಯಲ್ಲಿ ಕೆಲ ಮನೆಗಳಿಗೆ ಕುಡಿಯಲು ನೀರಿಲ್ಲ, ನೂರಾರು ಎಕರೆ ತೋಟಕ್ಕೆ ನೀರಿನ ಬರವೂ ತಪ್ಪಿಲ್ಲ!

ಪೆರುವಾಜೆ ಗ್ರಾಮದ ಅಡ್ಯತಕಂಡ ಕಿಂಡಿ ಅಣೆಕಟ್ಟಿನ ದುಃಸ್ಥಿತಿಯ ಕಥೆಯಿದು. ಹತ್ತು ವರ್ಷಗಳ ಬೇಡಿಕೆಗೆ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಜನರು ಈ ಕಟ್ಟ ಮತ್ತೆ ದುರಸ್ತಿಯಾಗಬಹುದು ಎಂಬ ಆಸೆ ಕೈಬಿಟ್ಟಿದ್ದಾರೆ. ಬಿರು ಬೇಸಗೆಯಲ್ಲಿ ಅಣೆಕಟ್ಟ ಇದ್ದೂ, ನೀರಿನ ಬರ ಎದುರಿಸಬೇಕಾದ ಅಸಹಾಯಕತೆ ಇಲ್ಲಿನದು.

ಕಿಂಡಿ ಅಣೆಕಟ್ಟ
1999ರಲ್ಲಿ ಪೆರುವಾಜೆಯಲ್ಲಿ ಹಾದು ಹೋಗುವ ಗೌರಿ ಹೊಳೆಗೆ ಅಡ್ಯತಕಂಡ ಬಳಿ ಸಣ್ಣ ನೀರಾವರಿ ಇಲಾಖೆ ಮೂಲಕ 20 ಲಕ್ಷ ರೂ. ವೆಚ್ಚದಲ್ಲಿ ಅಣೆಕಟ್ಟು ಮಂಜೂರುಗೊಂಡಿತ್ತು. ಗುತ್ತಿಗೆ ಪಡೆದುಕೊಳ್ಳುವ ವಿಚಾರದಲ್ಲಿ ಹೊಯ್ದಾಟ ನಡೆದು, ಕೊನೆಗೂ ಅಣೆಕಟ್ಟ ನಿರ್ಮಾಣವಾಗಿತ್ತು. ಆದರೆ ಆರಂಭದಿಂದಲೇ ಹಲಗೆ, ಅಡಿಪಾ ಯದಿಂದ ನೀರು ಸೋರಿಕೆ ಆಗುತ್ತಲೇ ಇತ್ತು. ಸೋರಿಕೆ ಮಧ್ಯೆಯೂ ನಿಂತ ನೀರಿನಿಂದ ಮಾರ್ಚ್‌ ತನಕ 50ಕ್ಕೂ ಅಧಿಕ ಕುಟುಂಬದ ಕೃಷಿ ತೋಟಕ್ಕೆ ಆಧಾರವಾಗಿತ್ತು.

ಪಿಲ್ಲರ್‌, ತಡೆಗೋಡೆ ಕುಸಿತ
ಹತ್ತು ವರ್ಷದ ಹಿಂದೆ ಬೇಸಗೆ ಕಾಲದಲ್ಲಿ ಕಟ್ಟಕ್ಕೆ ಹಲಗೆ ಜೋಡಿಸಲಾಗಿತ್ತು. ನೀರಿನ ಮಟ್ಟ ಇಳಿಕೆಯಾಗಿ ಹಲಗೆ ತೆಗೆಯಲು ಒಂದೆರಡು ದಿನ ಬಾಕಿ ಇತ್ತು. ಆಗ ಹೊಳೆಯಲ್ಲಿ ಹರಿದು ಬಂದ ಮಳೆ ನೀರಿನ ಪ್ರವಾಹಕ್ಕೆ ಅಣೆಕಟ್ಟಿನ ಮೂರು ಪಿಲ್ಲರ್‌, ಒಂದು ಬದಿಯ ತಡೆಗೋಡೆ ಕೊಚ್ಚಿಕೊಂಡು ಹೋಗಿತ್ತು. ಅದಾದ ಬಳಿಕ ಕಿಂಡಿ ಅಣೆಕಟ್ಟಿಗೆ ದುರಸ್ತಿ ಭಾಗ್ಯ ಸಿಕ್ಕಿಲ್ಲ. ಹತ್ತಾರು ಮನವಿಗಳು ಜನಪ್ರತಿನಿಧಿಗಳಿಗೆ, ಇಲಾಖೆಗಳಿಗೆ ಸಂದರೂ ಅದರಿಂದ ಕಿಂಚಿತ್ತು ಪ್ರಯೋಜನ ಕಂಡಿಲ್ಲ ಅನ್ನುತ್ತಾರೆ ಸ್ಥಳೀಯ ಕೃಷಿಕರು.

ಗುದ್ದಲಿ ಪೂಜೆ
ಕುಸಿದು ಹೋದ ಕಿಂಡಿ ಅಣೆಕಟ್ಟಿನಿಂದ 1.5 ಕಿ.ಮೀ. ಮೇಲ್ಭಾಗದ ಚೆನ್ನಾವರ ಸೇತುವೆ ಬಳಿ ಹೊಸ ಅಣೆಕಟ್ಟು ನಿರ್ಮಾಣಕ್ಕೆ ಸಣ್ಣ ನೀರಾವರಿ ಇಲಾಖೆ ಮೂಲಕ ಕಳೆದ ವರ್ಷ ಶಾಸಕರು ಗುದ್ದಲಿ ಪೂಜೆ ನೆರವೇರಿಸಿದರು. ತತ್‌ಕ್ಷಣವೇ ಕಾಮಗಾರಿ ಆರಂಭಿಸಲಾಗುತ್ತದೆ ಎಂದು ಇಲಾಖೆಯ ಎಂಜಿನಿಯರ್‌ ಹೇಳಿದ್ದರು. ಅದಾಗಿ ಒಂದು ವರ್ಷ ಕಳೆಯಿತು. ಅಲ್ಲಿ ಕಾಮಗಾರಿ ಇನ್ನೂ ಆರಂಭವಾಗಿಲ್ಲ. ಇದರಿಂದ ಹಳೆ ಕಟ್ಟ ದುರಸ್ತಿ ಆಗದ ಕಥೆಯಂತೆ, ಹೊಸ ಕಟ್ಟದ ಕಥೆಯೂ ಗುದ್ದಲಿಪೂಜೆಗೆ ಸೀಮಿತವಾಗುವ ಅನುಮಾನ ಮೂಡಿದೆ.

ಅಭಿಯಾನಕ್ಕಿಲ್ಲ ಅರ್ಥ
ಗ್ರಾಮ ಪಂಚಾಯತ್‌, ತಾಲೂಕು ಪಂಚಾಯತ್‌, ಜಿಲ್ಲಾ ಪಂಚಾಯತ್‌ ಸಭೆಗಳಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣದ ಬಗ್ಗೆ ಗಂಟೆಗಟ್ಟಲೇ ಚರ್ಚೆ ನಡೆಯುತ್ತದೆ. ಊರೂರು ಜಲಜಾಗೃತಿ ಅಭಿಯಾನವೂ ಆಗುತ್ತಿದೆ. ಇಂತಿಷ್ಟು ದಿನದಲ್ಲಿ ಹಲಗೆ ಹಾಕಿ ಎಂಬ ಸೂಚನೆಯನ್ನು ಅಧಿಕಾರಿಗಳು ನೀಡುತ್ತಾರೆ. ಕಳೆದ ವರ್ಷ ಮಂಗಳೂರಿನ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗೆ ಗ್ರಾಮಸ್ಥರು ಕರೆ ಮಾಡಿ, ಕುಸಿದ ಕಿಂಡಿ ಅಣೆಕಟ್ಟು ಪರಿಶೀಲಿಸಲು ಮನವಿ ಮಾಡಿದ್ದರು. ಬರುತ್ತೇನೆಂದೂ ಹೇಳಿದ ಅಧಿಕಾರಿ ಈ ತನಕವೂ ಬಂದಿಲ್ಲ ಅನ್ನುತ್ತಾರೆ ಸ್ಥಳೀಯರು.

ಗೆದ್ದಲು ಹಿಡಿಯುತ್ತಿವೆ 
ಕಿಂಡಿ ಅಣೆಕಟ್ಟಿಗೆ ಅಳವಡಿಸುವ ಹಲಗೆ ಗೆದ್ದಲು ಹಿಡಿಯುತ್ತಿದೆ. ಶೇ. 90ಕ್ಕೂ ಅಧಿಕ ಮರದ ಹಲಗೆಗಳು ಪ್ರಯೋಜನಕ್ಕೆ ಬಾರದ ಸ್ಥಿತಿಯಲ್ಲಿವೆ. ಇದನ್ನು ಸಂರಕ್ಷಿಸಲು ಇಲಾಖೆಗೂ ಸಾಧ್ಯವಾಗಿಲ್ಲ. ಒಂದು ಬದಿಯ ತಡೆಗೋಡೆ ಕುಸಿದ ಪರಿಣಾಮ, ಆ ಭಾಗದಲ್ಲಿ 300ಕ್ಕೂ ಅಧಿಕ ಅಡಿಕೆ ಗಿಡಗಳು ಜಲಸಮಾಧಿಯಾಗಿವೆ. ಪ್ರತಿ ವರ್ಷದ ಮಳೆಗೂ, ಮಣ್ಣಿನ ಸವೆತ ಹೆಚ್ಚುತ್ತಿದ್ದು, ಅದರಿಂದ ರಕ್ಷಣೆ ಸಾಧ್ಯವಾಗಿಲ್ಲ. ತಡೆಗೋಡೆ ನಿರ್ಮಿಸುವ ಕಾರ್ಯವೂ ಆಗಿಲ್ಲ.

ದಲಿತ ಕುಟುಂಬಕಿಲ್ಕ ನೀರು
ಕಿಂಡಿ ಅಣೆಕಟ್ಟು ಇದ್ದ ಸಂದರ್ಭದಲ್ಲಿ ಚೆನ್ನಾವರ, ಕುಂಡಡ್ಕ ಇತರೆ ಪರಿಸರದ ಮನೆಗಳ ಬಾವಿಗಳಲ್ಲಿಯು ಅಂತರ್ಜಲದ ಮಟ್ಟ ಹೆಚ್ಚಾಗಿತ್ತು. ಆದರೆ ಅಣೆಕಟ್ಟು ಕುಸಿದ ಅನಂತರ ಬಾವಿಗಳ ನೀರಿನ ಮಟ್ಟವೂ ಕುಸಿದಿದೆ. ಚೆನ್ನಾವರ ಪರಿಸರದ ಐದಾರು ದಲಿತ ಕುಟುಂಬಗಳಿಗೆ 15 ದಿನ ದಾಟಿದರೆ ಕುಡಿಯಲು ನೀರು ಇಲ್ಲ. ಅಣೆಕಟ್ಟು ದುರಸ್ತಿ ಮಾಡಿ ನಮಗೆ ಕುಡಿಯಲು ನೀರು ಕೊಡಿ ಎಂಬ ಅವರ ಕೂಗಿಗೆ ಸ್ಪಂದನೆಯೇ ಸಿಕ್ಕಿಲ್ಲ.

ನೀರಿನ ಬವಣೆ
ಹಳೆ ಅಣೆಕಟ್ಟು ದುರಸ್ತಿ ಆಗಿಲ್ಲ. ಹೊಸ ಅಣೆಕಟ್ಟು ನಿರ್ಮಾಣ ಆಗುತ್ತಿಲ್ಲ. ಇಲ್ಲಿ ಕೆಲ ಮನೆಗಳಿಗೆ ಕುಡಿಯುವ ನೀರಿನ ಸಮಸ್ಯೆಯಿದ್ದರೆ, ಕೃಷಿಗೆ ನೀರು ಸಾಲುತ್ತಿಲ್ಲ. ದುರಸ್ತಿಗೆ ಮನವಿ ಮಾಡಿ ಸಾಕಾಗಿದೆ.
 – ಇಕ್ಬಾಲ್‌ ಚೆನ್ನಾವರ
    ಸ್ಥಳೀಯ ನಿವಾಸಿ

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.