ಉಪಯೋಗಕ್ಕಿಲ್ಲದ ಇನ್‌ಸ್ಪೆಕ್ಟರ್‌ ಕಚೇರಿ ಕಟ್ಟಡ


Team Udayavani, Jul 22, 2018, 11:11 AM IST

22-july-5.jpg

ಮೂಲ್ಕಿ : ಕೆಲವು ಸರಕಾರಿ ಇಲಾಖೆಗಳಿಗೆ ಸರಿಯಾದ ಕಟ್ಟಡ ಇಲ್ಲದೆ ಸಾರ್ವಜನಿಕರಿಗೆ ಸೇವೆ ಕೊಡುವಲ್ಲಿ ಬಹಳಷ್ಟು ತೊಂದರೆ ಆಗುತ್ತಿರುವುದು ಒಂದೆಡೆಯಾದರೆ ಕೆಲವೆಡೆ ಕಟ್ಟಡಗಳು ಇದ್ದರೂ ಸರಿಯಾಗಿ ಉಪಯೋಗವಿಲ್ಲದೆ ಶಿಥಿಲವಾಗುತ್ತಿದೆ ಎಂಬುದಕ್ಕೆ ಮೂಲ್ಕಿ ಪೊಲೀಸ್‌ ಇಲಾಖೆಯ ಹಳೆ ಇನ್‌ ಸ್ಪೆಕ್ಟರ್‌ ಅವರ ಕಚೇರಿ ಉತ್ತಮ ಉದಾಹರಣೆಯಾಗಿದೆ.

ಕೆಲವು ವರ್ಷಗಳ ಹಿಂದೆಯಷ್ಟೇ ಮೂಲ್ಕಿ ಪೊಲೀಸ್‌ ಇನ್‌ಸ್ಪೆಕ್ಟರ್‌ ಅವರ ಕಚೇರಿಗಾಗಿ ಈ ಕಟ್ಟಡ ನಿರ್ಮಾಣವಾಗಿತ್ತು. ಆದರೆ ಮೂಲ್ಕಿ ಠಾಣೆಯು ಮೇಲ್ದರ್ಜೆಗೇರಿದಾಗ ಠಾಣಾಧಿಕಾರಿಯಾಗಿದ್ದ ಇನ್‌ಸ್ಪೆಕ್ಟರ್‌ ಅವರೇ ಕಾರ್ಯನಿರ್ವಹಿಸಬೇಕಾಯಿತು. ಮೂಲ್ಕಿ ಪೊಲೀಸ್‌ ಸಬ್‌ ಇನ್‌ ಸ್ಪೆಕ್ಟರ್‌ ಅವರ ಕಚೇರಿಯು ನೂತನವಾಗಿ ನಿರ್ಮಾಣಗೊಂಡು ಮಂಗಳೂರು ಕಮೀಷನರೇಟ್‌ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸಿದಾಗ ಈ ಕಚೇರಿಯನ್ನು ಸ್ಥಳಾಂತರಿಸಲಾಯಿತು.

ಉಪಕಚೇರಿಯಾಗಿ ಉಪಯೋಗಿಸಬಹುದಲ್ಲವೇ?
ಅದೆಷ್ಟೋ ಇಲಾಖೆಗಳಿಗೆ ಕಚೇರಿಗಳಿಲ್ಲದೆ ಸಮಸ್ಯೆಯಾಗುತ್ತಿದೆ. ಪೊಲೀಸ್‌ ಇಲಾಖೆಯ ಟ್ರಾಫಿಕ್‌ ವಿಭಾಗದ ಮೂಲ್ಕಿ ಪರಿಸರದ ಹೋಬಳಿಯ ಜನರು ಟ್ರಾಫಿಕ್‌ ಪೊಲೀಸ್‌ ಕೆಲಸಕ್ಕಾಗಿ ದೂರದ ಬೈಕಂಪಾಡಿಗೆ ಹೋಗಬೇಕಾದ ಅನಿವಾರ್ಯತೆ ಇದೆ. ಅದಲ್ಲದೆ ಬಹಳಷ್ಟು ಟ್ರಾಫಿಕ್‌ ಪೊಲೀಸ್‌ ಸಿಬಂದಿ ಈ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಇಲ್ಲಿ ಒಂದು ಉಪ ಕಚೇರಿಯಾಗಿ ಈ ಕಟ್ಟಡವನ್ನು ಉಪಯೋಗಿಸಿ ಮೂಲ್ಕಿ ಹೋಬಳಿಯ ಜನರಿಗೆ ಉಪಯೋಗವಾಗುವ ಕೆಲಸವನ್ನು ಇಲಾಖೆ ಮಾಡಿದರೆ ಉತ್ತಮ ಎಂಬುವುದು ಸಾರ್ವಜನಿಕರ ಅಭಿಪ್ರಾಯ.

ಟ್ರಾಫಿಕ್‌ ಉಪಕಚೇರಿಯಾಗಿಸಲಿ
ಮೂಲ್ಕಿ ವ್ಯಾಪ್ತಿಯಲ್ಲಿ ನಡೆಯುವ ವಾಹನ ಅಪಘಾತ ಸಹಿತ ಯಾವುದೇ ಕೇಸ್‌ ವಿಚಾರಣೆಗಾಗಿ ಬೈಕಂಪಾಡಿಯ ಮಂಗಳೂರು ಉತ್ತರ ಪೊಲೀಸ್‌ ಟ್ರಾಫಿಕ್‌ ಠಾಣೆಗೆ ಹೋಗಬೇಕಾಗುತ್ತದೆ. ಮೂಲ್ಕಿ ಹೋಬಳಿಯ ಜನರಿಗೆ ಉಪಯೋಗವಾಗುವಂತೆ ಈ ಕಟ್ಟಡವನ್ನು ಬಳಕೆ ಮಾಡಿ ಟ್ರಾಫಿಕ್‌ ಉಪಕಚೇರಿಯಾಗಿ ಉಪಯೋಗಿಸಿದರೆ ಬಹಳಷ್ಟು ಜನರಿಗೆ ಉಪಕಾರವಾದೀತು.
 -ಮಧು ಆಚಾರ್ಯ
ಅಧ್ಯಕ್ಷರು, ಮೂಲ್ಕಿ ಟೂರಿಸ್ಟ್‌ ಕಾರು,
ಟೆಂಪೋ ಚಾಲಕರ ಮತ್ತು ಮಾಲಕರ ಸಂಘ ಮೂಲ್ಕಿ

ವ್ಯಾಯಾಮ, ಯೋಗಕ್ಕೆ ಉಪಯೋಗ
ಮೂಲ್ಕಿ ಪೊಲೀಸ್‌ ಠಾಣೆ ಮೇಲ್ದರ್ಜೆಗೆ ಏರಿದಾಗ ಅನಿವಾರ್ಯವಾಗಿ ಈ ಕಚೇರಿಯು ಮೂಲ್ಕಿ ಠಾಣೆಗೆ ವರ್ಗಾವಣೆಯಾಗಬೇಕಾಯಿತು. ಈಗ ಅಲ್ಲಿ ಕೆಲವು ದಾಖಲೆ ಪತ್ರಗಳು ಮಾತ್ರ ಇವೆ. ಕಟ್ಟಡವನ್ನು ಸಮೀಪದಲ್ಲಿರುವ ನಮ್ಮ ಸಿಬಂದಿ ವ್ಯಾಯಾಮ, ಯೋಗ ಇತ್ಯಾದಿಗಳಿಗೆ ಉಪಯೋಗಿಸುತ್ತಾರೆ. ಇಲಾಖೆಗೆಯಿಂದ ಸಾರ್ವಜನಿಕರಿಗೆ ಉಪಯೋಗವಾಗುವ ವಿಭಾಗ ತೆರೆಯಬೇಕೆಂದಿದ್ದರೆ ಅದಕ್ಕೆ ಮೇಲಾಧಿಕಾರಿಗಳ ಅನುಮತಿ ಅಗತ್ಯ.
-ಅನಂತಪದ್ಮನಾಭ
ಇನ್‌ಸ್ಪೆಕ್ಟರ್‌, ಮೂಲ್ಕಿ ಪೊಲೀಸ್‌ ಠಾಣೆ

ಟಾಪ್ ನ್ಯೂಸ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.