ಮಧ್ಯಾಹ್ನದ ಬಿಸಿಯೂಟಕ್ಕೆ ತೊಂದರೆಯಾಗಿಲ್ಲ: ಶಿಕ್ಷಣ ಇಲಾಖೆ
Team Udayavani, Feb 10, 2018, 8:15 AM IST
ಮಂಗಳೂರು: ಬಿಸಿ ಯೂಟ ನೌಕರರಿಗೆ ಮಾಸಿಕ 5,000 ರೂ. ವೇತನ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಸಿಐ ಟಿಯು ವತಿಯಿಂದನಡೆಯುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ 2ನೇ ದಿನಕ್ಕೆ ಕಾಲಿಟ್ಟಿದ್ದು, ಮಂಗಳೂರು ವಲಯದ ಅಕ್ಷರದಾಸೋಹ ನೌಕರರು ದ.ಕ. ಜಿ.ಪಂ.ಆವರಣ ದಲ್ಲಿ ಶುಕ್ರವಾರದಿಂದ ಮುಷ್ಕರ ಹಮ್ಮಿಕೊಂಡಿದ್ದಾರೆ.
ಗುರುವಾರ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲೆಯ ಸುಮಾರು 200 ಮಂದಿ ನೌಕರರು ಪಾಲ್ಗೊಂಡಿ ದ್ದರು. ಬಳಿಕ ಜಿಲ್ಲಾ ಕೇಂದ್ರದಲ್ಲಿ ಮುಷ್ಕರ ಹಮ್ಮಿಕೊಂಡಿದ್ದು, ಜಿ.ಪಂ. ಆವರಣದಲ್ಲಿ 350ಕ್ಕೂ ಹೆಚ್ಚು ಅಕ್ಷರದಾಸೋಹ ಸಿಬಂದಿ ಮುಷ್ಕರ ನಿರತರಾಗಿದ್ದಾರೆ.
“ಬಿಸಿಯೂಟ ನೌಕರರಿಗೆ 5000 ರೂ. ವೇತನ ನೀಡಬೇಕು. 45ನೇ ಭಾರ ತೀಯ ಕಾರ್ಮಿಕರ ಸಮ್ಮೇಳನದ ಶಿಫಾರಸಿನಂತೆ ಈ ನೌಕರರಿಗೆ ಕನಿಷ್ಠ ಕೂಲಿ ಮತ್ತು ಸಾಮಾಜಿಕ ಭದ್ರತೆ ಒದಗಿಸ ಬೇಕು ಸೇರಿದಂತೆ ವಿವಿಧ ಬೇಡಿಕೆ ಮುಂದಿಟ್ಟುಕೊಂಡು ಮುಷ್ಕರ ನಡೆಸು ತ್ತಿದ್ದೇವೆ. ಈವರೆಗೆ ನಮ್ಮ ಬೇಡಿಕೆಗಳ ಬಗ್ಗೆ ಮಾತುಕತೆ ನಡೆಸಲು ಸಂಬಂಧಪಟ್ಟ ಯಾವುದೇ ಅಧಿಕಾರಿಗಳು ಬಂದಿಲ್ಲ’ ಎಂದು ಸಂಘದ ಕಾರ್ಯದರ್ಶಿ ಗಿರಿಜಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು