15 ದಿನಗಳ ಒಳಗೆ ಬಾಕಿಯಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಿ : ಸಚಿವ ಭೈರತಿ ಬಸವರಾಜ್ ಸೂಚನೆ
Team Udayavani, Feb 29, 2020, 10:56 AM IST
ಸುರತ್ಕಲ್ : ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜ್ ಪಚ್ಚನಾಡಿ ಡಂಪಿಂಗ್ ಯಾರ್ಡ್ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಪಚ್ಚನಾಡಿಯ ಡಂಪಿಂಗ್ ಯಾರ್ಡ್ ಪ್ರದೇಶಕ್ಕೆ ಭೇಟಿ ಕೊಟ್ಟು, ಬಾಕಿ ಇರುವ ಕಾಮಗಾರಿಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡ ಅವರು , 15 ದಿನಗಳ ಒಳಗಾಗಿ ತಡೆಗೋಡೆಯ ಕಾಮಗಾರಿಯನ್ನು ಹಾಗೂ ಇತರ ಕಾಮಗಾರಿಗಳನ್ನು ಸುಸಜ್ಜಿತ ರೀತಿಯಲ್ಲಿ ಪೂರ್ತಿಗೊಳಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಹಾಗೂ ಇಂಜಿನಿಯರ್ ಗಳಿಗೆ ಸೂಚನೆಯನ್ನು ನೀಡಿದರು. ನಿಗದಿತ ಸಮಯದಲ್ಲಿ ಕೆಲಸ ಕಾರ್ಯಗಳನ್ನು ಪೂರ್ತಿಗೊಳಿಸದೆ ಇದ್ದರೆ, ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾಧ ಭರತ್ ಶೆಟ್ಟಿ ವೈ,ವೇದವ್ಯಾಸ್ ಕಾಮತ್. ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಉಪಸ್ಥಿರಿದ್ದರು.