ಶೀಘ್ರ ಕಾಮಗಾರಿ ಪೂರ್ತಿಗೊಳಿಸಲು ಸೂಚನೆ
ಸುಳ್ಯ: ಭೂ ಕುಸಿತ ಪ್ರದೇಶಕ್ಕೆ ಸಚಿವ ಅಂಗಾರ ಭೇಟಿ
Team Udayavani, May 21, 2022, 12:13 PM IST
ಸುಳ್ಯ: ಸುಳ್ಯ ಕಲ್ಲುಮುಟ್ಲುವಿನ ನಗರ ಪಂಚಾಯತ್ ಕುಡಿಯುವ ನೀರಿನ ಪಂಪ್ ಹೌಸ್ ಬಳಿ ಭೂ ಕುಸಿತ ಉಂಟಾಗಿರುವ ಪ್ರದೇಶಕ್ಕೆ ಸಚಿವ ಎಸ್.ಅಂಗಾರ ಅವರು ಶುಕ್ರವಾರ ಭೇಟಿ ನೀಡಿ ಭೂ ಕುಸಿತ ಪ್ರದೇಶ ಮತ್ತು ಜಾಕ್ ವೆಲ್ ಕಾಮಗಾರಿ ಸ್ಥಗಿತಗೊಂಡಿರುವುದನ್ನು ವೀಕ್ಷಿಸಿದರು.
ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಎಂಜಿನಿಯರ್ ಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಸಚಿವರು ಜಾಕ್ವೆಲ್ ಕಾಮಗಾರಿ ತಡವಾಗಿರುವುದಕ್ಕೆ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಇನ್ನಷ್ಟು ವಿಳಂಬ ಮಾಡದೆ, ಎಲ್ಲ ಆಧುನಿಕ ವ್ಯವಸ್ಥೆಗಳನ್ನು ಬಳಸಿಕೊಂಡು ಆದಷ್ಟು ಬೇಗ ಜಾಕ್ವೆಲ್ ಕಾಮಗಾರಿ ಪೂರ್ತಿ ಮಾಡಬೇಕು ಎಂದು ಸಚಿವರು ಸೂಚನೆ ನೀಡಿದರು.
ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ನ.ಪಂ. ಸದಸ್ಯ ಬೂಡು ರಾಧಾಕೃಷ್ಣ ರೈ, ಬಿಜೆಪಿ ಯುವ ಮೋರ್ಚಾ ಮಂಡಲ ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ, ಪ್ರಮುಖರಾದ ಹರೀಶ್ ರೈ ಉಬರಡ್ಕ, ಜಿನ್ನಪ್ಪ ಪೂಜಾರಿ, ನಗರ ಪಂಚಾಯತ್ ಎಂಜಿನಿಯರ್ ಶಿವಕುಮಾರ್ ಮೊದ ಲಾದವರು ಉಪಸ್ಥಿತರಿದ್ದರು.
ತಾತ್ಕಲಿಕ ರಕ್ಷಣಾ ಕಾರ್ಯ
ಭೂ ಕುಸಿತ ಉಂಟಾದ ಸ್ಥಳದಲ್ಲಿ ತಾತ್ಕಲಿಕ ರಕ್ಷಣಾ ಕಾರ್ಯ ಕೈಗೊಳ್ಳಲಾಗಿದೆ. ಕುಸಿತಗೊಂಡಿರುವ ಭೂ ಭಾಗದ ಬದಿಯಲ್ಲಿ ಮರಳು ತುಂಬಿದ ಗೋಣಿ ಚೀಲಗಳನ್ನು ಇರಿಸಲಾಗಿದೆ. ಹೆಚ್ಚು ಕುಸಿತ ಆಗದಂತೆ ಟರ್ಪಾಲು ಅಳವಡಿಸಲಾಗಿದೆ.
ವಿಪಕ್ಷ ಸದಸ್ಯರು ಭೇಟಿ
ಭೂ ಕುಸಿತ ಸಂಭವಿಸಿದ ಪ್ರದೇಶಕ್ಕೆ ನಗರ ಪಂಚಾಯತ್ನ ವಿಪಕ್ಷ ಸದಸ್ಯರಾದ ಎಂ.ವೆಂಕಪ್ಪ ಗೌಡ, ಕೆ.ಎಸ್.ಉಮ್ಮರ್, ಶರೀಪ್ ಕಂಠಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜನತೆಗೆ ಶುದ್ಧ ಕುಡಿಯುವ ನೀರು ಸರಬರಾಜಿಗೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದರು. ಕೇವಲ ಜಾಕ್ವೆಲ್ ಮಾತ್ರ ನಿರ್ಮಾಣಗೊಂಡರೆ ನಗರಕ್ಕೆ ಶುದ್ಧ ಕುಡಿಯುವ ನೀರು ಸಬರಾಜಿಗೆ ಸಾಧ್ಯವಾಗುವುದಿಲ್ಲ. ಅದಕ್ಕಾಗಿ ಹೊಸ ಶುದ್ಧೀಕರಣ ಘಟಕ ಅಗತ್ಯವಾಗಿದೆ. ಅದರ ಅನುಷ್ಠಾನಕ್ಕೆ ಸಚಿವರು, ನ.ಪಂ. ಪ್ರಯತ್ನ ನಡೆಸಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್