ಪರಿಹರಿಸಲು ಪುರಸಭೆಗೆ ಸೂಚನೆ
BC Road: Rain water parking problem
Team Udayavani, Jun 6, 2019, 6:09 AM IST
ಬಂಟ್ವಾಳ: ಬಿ.ಸಿ. ರೋಡ್ ಎಸ್ಬಿಐ, ಭೂ ಅಭಿವೃದ್ಧಿ ಬ್ಯಾಂಕ್, ಕೃಷಿ ಸಹಕಾರಿ ಬ್ಯಾಂಕ್ ಎದುರು ಮಳೆಗಾಲದಲ್ಲಿ ನೀರು ನಿಲ್ಲುವ ಮೂಲಕ ಯಾವುದೇ ಬ್ಯಾಂಕಿಗೆ ಹೋಗಲು ಸಾಧ್ಯವಿಲ್ಲದ ಸಮಸ್ಯೆಯನ್ನು ಗಮನಿಸಿದ್ದ ಬಂಟ್ವಾಳ ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು ಪುರಸಭೆ ಎಂಜಿನಿಯರ್ ಡೊಮೆನಿಕ್ ಡಿ’ಮೆಲ್ಲೊ ಅವರನ್ನು ಕರೆಸಿ ಸಮಸ್ಯೆಯ ಪರಿಹರಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಸಿಮೆಂಟ್ ಹಾಕಲು ಸೂಚನೆ ನೀಡಿದ್ದಲ್ಲದೆ, ಶೀಘ್ರವಾಗಿ ಕೆಲಸ ಮಾಡು ವಂತೆಯೂ ತಿಳಿಸಿದ್ದಾರೆ.
ಬಿ.ಸಿ. ರೋಡ್ನಿಂದ ಮಂಗಳೂರು ಕಡೆಗೆ ಪ್ರಯಾಣಿಸಲು ಪ್ರಯಾಣಿಕರು ನಿಲ್ಲುವ ಬಸ್ ಬೇ ಮತ್ತು ಇಲ್ಲಿನ ಬ್ಯಾಂಕ್ಗಳ ಎದುರು ಮಳೆಗಾಲದಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಇಲ್ಲದೆ ರಸ್ತೆಯಲ್ಲಿ ನಿಂತು ಬಹಳಷ್ಟು ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದರು.ಕಳೆದ ಮಳೆಗಾಲದ ವೇಳೆ ಇಲ್ಲಿ ನೀರು ನಿಂತು ಸಾರ್ವಜನಿಕರು, ಪ್ರಯಾಣಿಕರು ಅನೇಕ ತೊಂದರೆ ಅನುಭವಿಸಿದ್ದರು. ಈ ಬಾರಿ ಸಮಸ್ಯೆ ಪರಿಹರಿಸದಿದ್ದರೆ ನಿರಂತರ ಧರಣಿ ಸತ್ಯಾಗ್ರಹ ನಡೆಸುವುದಾಗಿ ಟೂರಿಸ್ಟ್ ಕಾರು ಚಾಲಕರ ಸಂಘಟನೆ ಎಚ್ಚರಿತ್ತು.
ಎ.ಸಿ. ರವಿಚಂದ್ರ ನಾಯಕ್, ಪುರಸಭಾ ಮುಖ್ಯಾಧಿಕಾರಿ ಮೇಬಲ್ ಡಿ’ಸೋಜಾ, ಬಂಟ್ವಾಳ ಎ.ಎಸ್.ಪಿ. ಸೈದುಲು ಅಡಾವತ್, ಬಂಟ್ವಾಳ ನಗರ ಪೋಲೀಸ್ ಸಬ್ ಇನ್ಸ್ ಪೆಕ್ಟರ್ ಚಂದ್ರಶೇಖರ್, ಬಿಜೆಪಿ ಪ್ರಮುಖರಾದ ದೇವದಾಸ್ ಶೆಟ್ಟಿ, ಗೋವಿಂದ ಪ್ರಭು, ಜನಾರ್ದನ ಬೊಂಡಾಲ, ಸುರೇಶ್ ಕುಲಾಲ್, ಪವನ್, ಮಂಜು, ರಮಾನಾಥ ರಾಯಿ, ಮನೋಜ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ
Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ