ಹೆಚ್ಚುವರಿ ಭೂಸ್ವಾಧೀನಕ್ಕೆ ಅಧಿಸೂಚನೆ


Team Udayavani, Mar 16, 2019, 12:30 AM IST

z-30.jpg

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೆಂಗಳೂರು- ಮಂಗಳೂರು ನಡುವಿನ ಬಿ.ಸಿ.ರೋಡ್‌ – ಅಡ್ಡಹೊಳೆಯವರೆಗಿನ ಚತುಷ್ಪಥ ಕಾಂಕ್ರೀಟ್‌ ರಸ್ತೆ ಕಾಮಗಾರಿ ಸಂಬಂಧ ಹೆಚ್ಚುವರಿ 117.5 ಎಕರೆ ಭೂಸ್ವಾಧೀನ ಪ್ರಕ್ರಿಯೆಗೆ ಶೀಘ್ರವೇ ಚಾಲನೆ ಸಿಗಲಿದೆ. ಈ ಸಂಬಂಧ ಕೇಂದ್ರ ರಸ್ತೆ ಹಾಗೂ ಹೆದ್ದಾರಿಗಳ ಸಚಿವಾಲಯವು ಜ.31 ರಂದು ಹೊಸದಾಗಿ ಅಧಿಸೂಚನೆ ಹೊರಡಿಸಿದೆ. ಹೀಗಾಗಿ ಕಾಮಗಾರಿಗಿದ್ದ ವಿಘ್ನ ನಿವಾರಣೆಯಾಗಿದ್ದು, ಐದಾರು ತಿಂಗಳೊಳಗೆ ಹೆಚ್ಚುವರಿ ಭೂಮಿ ಸ್ವಾಧೀನಗೊಳ್ಳಬಹುದು. ಹಾಗಾಗಿ ಮಳೆಗಾಲದ ಬಳಿಕ ಕಾಮಗಾರಿ ಚುರುಕು ಪಡೆಯುವ ಲಕ್ಷಣಗಳಿವೆ. 

ಮೂಲ ಅಧಿಸೂಚನೆಯಲ್ಲಿ ಬಿಟ್ಟು ಹೋದ ಸರ್ವೆ ನಂಬರ್‌ ಮತ್ತು ಹೆಚ್ಚುವರಿ ಜಮೀನುಗಳ ಸ್ವಾಧೀನಕ್ಕಾಗಿ ಈಗ ಸಾರ್ವಜನಿಕರಿಗೆ ನೋಟಿಸ್‌ ನೀಡಲಾಗಿದೆ. ಮುಂದಿನ 20 ದಿನಗಳೊಳಗೆ ಕಲಂ 3ಸಿ (1)ರ ಅನ್ವಯ ಹಾಸನದಲ್ಲಿರುವ ಭಾರತೀಯ ರಾ. ಹೆ. ಪ್ರಾಧಿಕಾರದ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಸಕ್ಷಮ ಪ್ರಾಧಿಕಾರಿಗಳ ಕಾರ್ಯಾಲಯಕ್ಕೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಅಡ್ಡಹೊಳೆ-ಬಿ.ಸಿ.ರೋಡ್‌ ರಸ್ತೆ ಚತುಷ್ಪಥ ಕಾಮಗಾರಿ 2017ರ ಮಾರ್ಚ್‌ 28 ರಂದು ಆರಂಭವಾಗಿತ್ತು. ಕಳೆದ ಮಳೆಗಾಲದಲ್ಲಿ ಭಾರೀ ಮಳೆ ಸುರಿದು ಕೆಲವೆಡೆ ಭೂಕುಸಿತ ಉಂಟಾಗಿತ್ತು. ಜತೆಗೆ ರಸ್ತೆಗೆ ಇನ್ನಷ್ಟು ಭೂಮಿ ಅಗತ್ಯ ಕಂಡುಬಂದ ಕಾರಣ ಹೆಚ್ಚುವರಿ ಭೂಮಿಯನ್ನು ಗುರುತಿಸ ಲಾಗಿತ್ತು. ಒಟ್ಟು 821 ಕೋ.ರೂ. ವೆಚ್ಚದ ಕಾಂಕ್ರೀಟ್‌ ಹೆದ್ದಾರಿ ಕಾಮಗಾರಿಯನ್ನು ಹಾಲಿ ರಸ್ತೆಯ ಅಕ್ಕಪಕ್ಕದಲ್ಲಿ ಸಮತಟ್ಟು ಮಾಡಿ ಕೆಲಸ ಆರಂಭಿಸಲಾಗಿತ್ತು.

63 ಕಿ.ಮೀ. ಉದ್ದದ ರಸ್ತೆ
ಬೆಂಗಳೂರಿನ ನೆಲಮಂಗಲದಿಂದ ಹಾಸನದವರೆಗಿನ ಚತುಷ್ಪಥ ರಸ್ತೆಯನ್ನು ಮಂಗಳೂರಿನವರೆಗೂ ವಿಸ್ತರಿಸುವ ಯೋಜನೆಯಿದು. ಶಿರಾಡಿ ಘಾಟಿಯಲ್ಲಿ 2 ಹಂತದಲ್ಲಿ ಕಾಂಕ್ರೀಟ್‌ ಕಾಮಗಾರಿ ಪೂರ್ಣ ಗೊಂಡಿದೆ. ಹಾಸನದಿಂದ ಶಿರಾಡಿಯ ಮಾರನಹಳ್ಳಿಯವರೆಗೆ 45 ಕಿ.ಮೀ. ಹಾಗೂ ಅಡ್ಡಹೊಳೆಯಿಂದ ಬಂಟ್ವಾಳದವರೆಗೆ 63 ಕಿ.ಮೀ. ರಸ್ತೆ ಚತುಷ್ಪಥಗೊಳ್ಳಲಿದೆ. ಆಲೂರು ತಾಲೂಕಿನ 5, ಸಕಲೇಶಪುರ ತಾಲೂಕಿನ 12 ಗ್ರಾಮಗಳು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಶಿರಾಡಿ, ಶಿರಿವಾಗಿಲು, ನೂಜಿಬಾಳ್ತಿಲ, ನೆಲ್ಯಾಡಿ, ಕೊಣಾಲು, ಗೋಳಿತಟ್ಟು, ಬಜತ್ತೂರು, ಉಪ್ಪಿನಂಗಡಿ, ನೆಕ್ಕಿಲಾಡಿ, ರೆಖ್ಯಾ, ಬಿಳಿಯೂರು, ಕಡೇಶ್ವಾಲ್ಯ, ಪೆರ್ನೆ, ಕೆದಿಲ, ಪೆರಾಜೆ, ಮಾಣಿ, ಬಾಳ್ತಿಲ, ಗೋಳ್ತಮಜಲು, ಕಸಬಾ ಪಾಣೆಮಂಗಳೂರು, ನರಿಕೊಂಬು, ಬಿ.ಮೂಡ ಗ್ರಾಮಗಳಲ್ಲಿ ಚತುಷ್ಪಥ ರಸ್ತೆ ಹಾದುಹೋಗಲಿದೆ.  

ಭೂಸ್ವಾಧೀನಕ್ಕೆ ಕನಿಷ್ಠ 6 ತಿಂಗಳು!
ಹೆಚ್ಚುವರಿ ಭೂ ಸ್ವಾಧೀನದ ಅಧಿಸೂಚನೆಗೆ ಆಕ್ಷೇಪಗಳಿದ್ದರೆ ಅದನ್ನು ಹೆದ್ದಾರಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿ ಪರಿಶೀಲಿಸಲಿದ್ದಾರೆ. ಅದು ಅಂತಿಮವಾದ ಬಳಿಕ ಅಧಿಕಾರಿಗಳು ಅಳತೆ ನಡೆಸಿ ಮೌಲ್ಯ ನಿರ್ಧರಿಸಬೇಕು. ಹೆಚ್ಚುವರಿ ಗಿಡಮರಗಳನ್ನು ಕಡಿಯುವುದಾದರೆ ಅರಣ್ಯ ಇಲಾಖೆಯಿಂದ ಅನುಮತಿ ಪಡೆದುಕೊಳ್ಳಬೇಕು. ಆ ಬಳಿಕ ಸಂಬಂಧಪಟ್ಟವರಿಗೆ ನೋಟಿಸ್‌ ನೀಡಿ ಭೂ ಸ್ವಾಧೀನ ಆರಂಭಿಸಬೇಕು. ಇದಕ್ಕೆ ಕನಿಷ್ಠ ಆರು ತಿಂಗಳು ಬೇಕಾಗಬಹುದು ಎನ್ನುತ್ತವೆ ಇಲಾಖೆ ಮೂಲಗಳು. 

ದಿನೇಶ್‌ ಇರಾ

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.