ಬಹಿರಂಗ ಸಭೆ
Team Udayavani, Jan 19, 2018, 10:32 AM IST
ಮಹಾನಗರ: ನಿಶ್ಚಿತ ಪಿಂಚಣಿ ನಮ್ಮ ಹಕ್ಕು ನೂತನ ಪಿಂಚಣಿ ಯೋಜನೆ (ಎನ್ಪಿಎಸ್) ರದ್ದುಗೊಳಿಸುವಂತೆ ಕೋರಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯ ಎದುರು ಗುರುವಾರ ಬಹಿರಂಗ ಸಭೆ ನಡೆಯಿತು.
ಇದೇ ವೇಳೆ ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ್ ನಾಯಕ್ ಮಾತನಾಡಿ, ಕೇಂದ್ರ ಸರಕಾರವು 2004ರಲ್ಲಿ ಅವೈಜ್ಞಾನಿಕ ಸಿದ್ಧಾಂತ ಹಾಗೂ ಅಭದ್ರತೆಯಿಂದ ಕೂಡಿದ ಎನ್ಪಿಎಸ್ ಯೋಜನೆಯನ್ನು ಜಾರಿಗೊಳಿಸಿದ ಮೇಲೆ 2006ರಲ್ಲಿ ರಾಜ್ಯ ಸರಕಾರ ಈ ಯೋಜನೆಯನ್ನು ಅಳವಡಿಸಿರುತ್ತದೆ. ಆದರೆ ರಾಜ್ಯದಲ್ಲಿನ ಸರಕಾರಿ ಪಿಂಚಣಿ ಸೌಲಭ್ಯದಲ್ಲಿ ಹಲವು ನ್ಯೂನ್ಯತೆಗಳಿವೆ. ಟ್ರಸ್ಟ್ ಮ್ಯಾನೇಜ್ ಮೆಂಟ್ನವರು ನಿರ್ವಹಿಸುವ ಇದರ ಆರ್ಥಿಕ ಕಾರ್ಯನಿರ್ವಹಣೆಯಲ್ಲಿ ಯಾವುದೇ ಬದ್ಧತೆಗಳು ಇಲ್ಲದೆ, ಅನಿಶ್ಚಿತ ಪಿಂಚಣಿ ಯೋಜನೆ ಇದಾಗಿದೆ. ಇದರಿಂದ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು 1.80 ಲಕ್ಷ ಸರಕಾರಿ ನೌಕರರು ಅನೇಕ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದು ಹೇಳಿದರು.
ತುಟ್ಟಿಭತ್ಯೆ ಇಲ್ಲ
ಹಳೆಯ ಪಿಂಚಣಿ ಯೋಜನೆಯಲ್ಲಿ ನಿಶ್ಚಿತ ಪಿಂಚಣಿ ಸೌಲಭ್ಯ, ಜಿಪಿಎಫ್ ಸೌಲಭ್ಯವಿತ್ತು. ಆದರೆ ಹೊಸ ಪಿಂಚಣಿ ಯೋಜನೆಯಲ್ಲಿ ಇದಿಲ್ಲ. ಅಲ್ಲದೆ 33 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದರೂ ಕೂಡ ಟ್ರಸ್ಟ್ ಮ್ಯಾನೇಜ್ಮೆಂಟ್ನವರು ಕಡಿಮೆ ಪಿಂಚಣಿ ನಿಗದಿಪಡಿಸುತ್ತಾರೆ. ಪಿಂಚಣಿಗಾಗಿ ವೇತನದಲ್ಲಿ ಶೇ.10ರಷ್ಟು ಕಡಿತಗೊಳಿಸಲಾಗುತ್ತದೆ. ಕುಟುಂಬ ಪಿಂಚಣಿ ಕೂಡ ಲಭ್ಯವಿಲ್ಲ. ತುಟ್ಟಿಭತ್ಯೆ ಕೂಡ ಸಿಗುವುದಿಲ್ಲ ಎಂದರು.
ಮನವಿ ಸಲ್ಲಿಕೆ
ಇದೇ ವೇಳೆ ನಿಶ್ಚಿತ ಪಿಂಚಣಿ ನಮ್ಮ ಹಕ್ಕು ನೂತನ ಪಿಂಚಣಿ ಯೋಜನೆ (ಎನ್ಪಿಎಸ್) ರದ್ದುಗೊಳಿಸುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಸಭೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಶಂಕರ ಭಟ್, ಎನ್ಪಿಎಸ್ ನೌಕರರ ಜಿಲ್ಲಾ ಘಟಕ
ಸಂಚಾಲಕ ಅಕ್ಷಯ್ ಭಂಡಾರ್ಕಾರ್, ರಾಜ್ಯ ಪರಿಷತ್ ಸದಸ್ಯ ಡಾಲ್ಫಿ ಸಿಕ್ವೇರಾ, ಉಪಾಧ್ಯಕ್ಷ ಪಿ.ಕೆ. ಕೃಷ್ಣ, ಎಂ.ಬಿ. ದೇವದಾಸ್, ಅಗ್ನೇಲ್ ಪಿಂಟೊ, ಅಶ್ವಿನ್ ಕುಮಾರ್, ಕ್ರೀಡಾ ಕಾರ್ಯದರ್ಶಿ ನಾಗೇಶ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ