ನಗರದಲ್ಲಿ ಪ್ರವಾಸಿಗರ ಸಂಖ್ಯೆ ಇಳಿಮುಖ

ಪರೀಕ್ಷೆ ಬಿಸಿ, ವಾತಾವರಣದ ಉಷ್ಣಾಂಶ ಏರಿಕೆ 

Team Udayavani, Mar 29, 2019, 10:15 AM IST

29-March-1
ಮಹಾನಗರ : ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತಿದ್ದರೆ, ಅತ್ತ ವಾತಾವರಣದಲ್ಲಿನ ಬದಲಾವಣೆಯಿಂದಾಗಿ ದಿನದಿಂದ ದಿನಕ್ಕೆ ಗರಿಷ್ಠ ಉಷ್ಣಾಂಶವೂ ಏರಿಕೆಯಾಗುತ್ತಿದೆ. ಇದರ ನೇರ ಪರಿಣಾಮ ಪ್ರವಾಸೋದ್ಯಮ ಕ್ಷೇತ್ರದ ಮೇಲೆ ಬೀರಿದ್ದು, ನಗರದ ಪ್ರಮುಖ ಸ್ಥಳಗಳಿಗೆ ಬರುವ ಪ್ರವಾಸಿಗರ
ಸಂಖ್ಯೆಯಲ್ಲಿ ಇಳಿಮುಖವಾಗಿವೆ.
ನಗರದ ಅತಿ ದೊಡ್ಡ ಪಾರ್ಕ್‌ನಲ್ಲಿ ಒಂದಾದ ಕದ್ರಿ ಪಾರ್ಕ್‌ ಬಳಿ ಇರುವ ಕಾರಂಜಿ ಪ್ರದರ್ಶನ ವೀಕ್ಷಣೆಗೆ ಈಗ ನಿರೀಕ್ಷಿತ ಮಟ್ಟದಲ್ಲಿ ಪ್ರವಾಸಿಗರೇ ಬರುತ್ತಿಲ್ಲ. ಇದೇ ಕಾರಣಕ್ಕೆ ಎರಡು ದಿನಗಳಿಂದ ಕಾರಂಜಿ ಪ್ರದರ್ಶನವನ್ನು ಸ್ಥಗಿತಗೊಳಿಸಲಾಗಿದೆ. ಕದ್ರಿ ಪಾರ್ಕ್‌ ಕಾರಂಜಿ ಸಂಜೆ 7 ಗಂಟೆಯಿಂದ 7.30ರ ವರೆಗೆ ಮತ್ತು ವೀಕೆಂಡ್‌ನ‌ಲ್ಲಿ 7 ಗಂಟೆಯಿಂದ 7.30, 8 ಗಂಟೆಯಿಂದ 8.30ರ ವರೆಗೆ ಪ್ರದರ್ಶನವಿರುತ್ತದೆ. ಸಾಮಾನ್ಯವಾಗಿ ಸ್ಥಳೀಯರು ಸಹಿತ ಇತರೇ ಜಿಲ್ಲೆಯ ಪ್ರವಾಸಿಗರು ಕಾರಂಜಿ ವೀಕ್ಷಣೆಗೆ ಆಗಮಿಸುತ್ತಾರೆ. ಇತ್ತೀಚೆಗೆ ಕೆಲವು ದಿನಗಳಿಂದ ಪ್ರವಾಸಿಗರ ಸಂಖ್ಯೆ ಕಡಿಮೆಯಿದ್ದು, 10-15ಕ್ಕಿಂತ ಹೆಚ್ಚು ಮಂದಿ ಬಂದ ದಿನ ಮಾತ್ರ ಕಾರಂಜಿ ಪ್ರದರ್ಶನವಿರುತ್ತದೆ.
ಕಾರಂಜಿ ಪ್ರದರ್ಶನ ನಡೆಯಬೇಕಾದರೆ ಸುಮಾರು 30ಕ್ಕೂ ಹೆಚ್ಚಿನ ಮೋಟರ್‌ ಗಳು ಚಾಲು ಆಗಬೇಕು. ಇದರಿಂದ ಸಾವಿರಾರು ರೂಪಾಯಿ ವಿದ್ಯುತ್‌ ದರ ಬರುತ್ತದೆ. ಕಡಿಮೆ ಮಂದಿ ಪ್ರವಾಸಿಗರು ಆಗಮಿಸಿದರೆ ವಿದ್ಯುತ್‌ ದರ ಸರಿದೂಗಿಸಲು ಸಾಧ್ಯವಾಗುವುದಿಲ್ಲ. ಒಂದು ವೇಳೆ ಹೆಚ್ಚಿನ ಮಂದಿ ಪ್ರವಾಸಿಗರು ಕಾರಂಜಿ ವೀಕ್ಷಣೆಗೆ ಆಗಮಿಸಿದರೆ, ಪ್ರದರ್ಶನ ಎಂದಿನಂತೆ ನಡೆಸಲು ತೋಟಗಾರಿಕಾ ಇಲಾಖೆ ತೀರ್ಮಾನಿಸಿದೆ.

ಬೀಚ್‌ಗಳಲ್ಲೂ ಪ್ರವಾಸಿಗರ ಸಂಖ್ಯೆ ಕುಂಠಿತ
ನಗರದ ಪ್ರಮುಖ ಬೀಚ್‌ಗಳಾದ ಪಣಂಬೂರು ಮತ್ತು ತಣ್ಣೀರುಬಾವಿ ಬೀಚ್‌ಗಳಿಗೆ ಬರುವ ಪ್ರವಾಸಿಗರ ಸಂಖ್ಯೆ ಕೂಡ ಇಳಿಮುಖವಾಗಿದೆ.  ಪಣಂಬೂರು ಬೀಚ್‌ಗೆ ಸಾಮಾನ್ಯ ದಿನಗಳಲ್ಲಿ ಸುಮಾರು 7,000 ಮಂದಿ ವೀಕೆಂಡ್‌ನ‌ಲ್ಲಿ ಸುಮಾರು 20,000 ಮಂದಿ ಬರುತ್ತಾರೆ. ಆದರೆ, ಇದೀಗ ಮಾಮೂಲಿ ದಿನಗಳಲ್ಲಿ 4,000, ವೀಕೆಂಡ್‌ನ‌ಲ್ಲಿ 8,000 ಮಂದಿ ಮಾತ್ರ ಬರುತ್ತಿದ್ದಾರೆ. ಇನ್ನು, ತಣ್ಣೀರುಬಾವಿ ಬೀಚ್‌ನಲ್ಲಿ ಮಾಮೂಲಿ ದಿನಗಳಲ್ಲಿ ಸುಮಾರು 2,000 ವೀಕೆಂಡ್‌ ನಲ್ಲಿ ಸುಮಾರು 5,000 ಮಂದಿ ಬರುತ್ತಾರೆ. ಇದೀಗ ಮಾಮೂಲಿ ದಿನಗಳಲ್ಲಿ ಬರುವ ಪ್ರವಾಸಿಗರ ಸಂಖ್ಯೆ 1,000, ವೀಕೆಂಡ್‌ನ‌ಲ್ಲಿ 3,000ಕ್ಕೆ ಇಳಿದಿದೆ.
ನಗರದ ವಿಲ್ಲಾ, ಹೊಟೇಲ್‌ ಹೋಮ್‌ ಸ್ಟೇಗಳಲ್ಲಿ ತಂಗಲು ಪ್ರವಾಸಿಗರು ಬರುತ್ತಿಲ್ಲ. ಸಾಮಾನ್ಯ ದಿನಗಳಲ್ಲಿ ಬೀಚ್‌ ಕಡೆ ಇರುವಂತಹ ವಿಲ್ಲಾಗಳಿಗೆ ಬೇಡಿಕೆ ಹೆಚ್ಚಿರುತ್ತವೆ. ಆದರೂ ಬಿಕೋ ಎನ್ನುತ್ತಿವೆ. ಈ ಬಗ್ಗೆ ‘ಸುದಿನ’ಕ್ಕೆ ಪ್ರತಿಕ್ರಿಯಿಸಿದ ಕಂಕನಾಡಿ ಬಳಿಯ ಹೋಂಸ್ಟೇಯೊಂದರ ಲ್ಯಾನ್ಸ್‌ಲೊಟ್‌ ಡಿ’ಸೋಜಾ ಪ್ರತಿಕ್ರಿಯಿಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತಿದ್ದು, ಹೋಂಸ್ಟೇಗಳಲ್ಲಿ ತಂಗಲು ಪ್ರವಾಸಿಗರು ಬರುತ್ತಿಲ್ಲ ಎನ್ನುತ್ತಾರೆ.
ಉರಿ ಬಿಸಿಲು ಕೂಡ ಕಾರಣ
ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ ಪ್ರಮಾಣ ಈಗ 37 ಡಿ.ಸೆ. ದಾಟಿದ್ದು, ಮುಂದಿನ ಎಪ್ರಿಲ್‌-ಮೇ ತಿಂಗಳಲ್ಲಿ ಮತ್ತಷ್ಟು ಜಾಸ್ತಿಯಾಗುವ ಮುನ್ಸೂಚನೆ ಇದೆ. ಸಾಮಾನ್ಯವಾಗಿ ಹೊರ ಜಿಲ್ಲೆ ಅಥವಾ ರಾಜ್ಯಗಳಿಂದ ಪ್ರವಾಸಕ್ಕೆ ಬರುವವರು ಅಲ್ಲಿನ ಅನುಕೂಲಕರ ವಾತಾವರಣ ನೋಡಿಕೊಂಡು ದಿನಾಂಕ ನಿಗದಿಗೊಳಿಸುತ್ತಾರೆ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಿಸಿಲಿನ ತೀವ್ರತೆ ಕೂಡ ಪ್ರವಾಸಿಗರ ಸಂಖ್ಯೆ ಕುಂಠಿತಗೊಳ್ಳಲು ಕಾರಣವಾಗಿರುವ ಸಾಧ್ಯತೆಯಿದೆ. ಇನ್ನೊಂದೆಡೆ‌ , ಈಗ ವಿದ್ಯಾರ್ಥಿಗಳಿಗೆ ಪರೀಕ್ಷೆಯ ಸಮಯ. ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಗಿದಿದ್ದು, ಎಸೆಸೆಲ್ಸಿ ಪರೀಕ್ಷೆಗಳು ನಡೆಯುತ್ತಿವೆ. ಮುಂದೆ, ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆಗಳು ಕೂಡ ನಡೆಯಲಿವೆ. ಹೀಗಿರುವಾಗ, ಮಕ್ಕಳ ಪರೀಕ್ಷೆ ಕಾರಣದಿಂದಲೂ ಪ್ರವಾಸಿಗರ ಸಂಖ್ಯೆಯಲ್ಲಿ ಈಗ ಇಳಿಮುಖವಾಗಿದೆ ಎನ್ನಲಾಗುತ್ತಿದೆ. ಈ ನಡುವೆ, ಇನ್ನೇನು ಲೋಕಸಭೆ ಚುನಾವಣೆ ಕಾವು ಕೂಡ ಜೋರಾಗಿದ್ದು, ಇದರಿಂದಲೂ ಪ್ರವಾಸಿಗರ ಸಂಖ್ಯೆ ಮುಂದಿನ ದಿನಗಳಲ್ಲಿ ಮತ್ತಷ್ಟು ಕಡಿಮೆಯಾಗುವ ಸಾಧ್ಯತೆಯಿದೆ.
ಹೆಚ್ಚಿನ ಪ್ರವಾಸಿಗರು ಬಂದರೆ ಪ್ರದರ್ಶನ
ಕದ್ರಿ ಕಾರಂಜಿ ವೀಕ್ಷಣೆಗೆ ಬರುವ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ. ಇದೇ ಕಾರಣಕ್ಕೆ ಕಡಿಮೆ ಮಂದಿ ಇರುವ ದಿನ ಕಾರಂಜಿ ಪ್ರದರ್ಶನ ಸ್ಥಗಿತಗೊಳಿಸಿದ್ದೇವೆ. ಹೆಚ್ಚಿನ ಮಂದಿ ಪ್ರವಾಸಿಗರು ಆಗಮಿಸುವ ದಿನ ಪ್ರದರ್ಶನವಿರುತ್ತದೆ.
ಜಾನಕಿ, ತೋಟಗಾರಿಕಾ
ಇಲಾಖೆ ಹಿರಿಯ ಸಹಾಯಕಿ
ಪಿಲಿಕುಳದಲ್ಲೂ ಜನ ಕಡಿಮೆ
ಮಂಗಳೂರಿನ ಪ್ರವಾಸಕ್ಕೆಂದು ಬರುವ ಮಂದಿ ಸಾಮಾನ್ಯವಾಗಿ ಪಿಲಿಕುಳ ಶಿವರಾಮ ಕಾರಂತ ನಿಸರ್ಗದಾಮಕ್ಕೆ ಆಗಮಿಸುತ್ತಾರೆ. ಆದರೆ ಸದ್ಯ ಪ್ರವಾಸಿಗರ ಸಂಖ್ಯೆಯಲ್ಲೂ ಇಳಿಮುಖವಾಗಿದೆ. ಇಲ್ಲಿನ ಅಧಿಕಾರಿಗಳು ಹೇಳುವ ಪ್ರಕಾರ ಸಾಮಾನ್ಯ ದಿನಗಳಲ್ಲಿ ಸುಮಾರು 7,000 ಮಂದಿ ಪ್ರವಾಸಿಗರು ಆಗಮಿಸುತ್ತಾರೆ. ಸದ್ಯ 3,000ದಷ್ಟು ಮಂದಿ ಮಾತ್ರ ಬರುತ್ತಿದ್ದಾರೆ.
ಟ್ಯಾಕ್ಸಿಗೂ ಬೇಡಿಕೆ ಕುಂಠಿತ
ಒಂದು ತಿಂಗಳಿನಿಂದ ನಗರಕ್ಕೆ ಆಗಮಿಸುವ ಪ್ರವಾಸಿಗರ ಸಂಖ್ಯೆ ತುಂಬಾ ಕಡಿಮೆಯಾಗಿದೆ. ಒಂದೆಡೆ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತಿದ್ದು, ಮತ್ತೂಂದೆಡೆ ಉರಿ ಬಿಸಿಲು ಕೂಡ ಪ್ರವಾಸಿಗರ ಸಂಖ್ಯೆ ಇಳಿಮುಖವಾಗಲು ಕಾರಣವಿರಬಹುದು.
– ನಾಗಪ್ಪ,ಟ್ಯಾಕ್ಸಿ,ಮ್ಯಾಕ್ಸಿಕ್ಯಾಬ್‌
ಅಸೋಸಿಯೇಶನ್‌ ಉಪಾಧ್ಯಕ್ಷ
ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.