ಅಡಿಕೆ: 300 ರೂ. ಹೊಸ್ತಿಲಿನಲ್ಲಿ ಸಿಂಗಲ್‌ ಚೋಲ್‌ ಧಾರಣೆ!


Team Udayavani, Nov 26, 2019, 5:02 AM IST

nut

ಸುಳ್ಯ: ಅಡಿಕೆ ಮಾರುಕಟ್ಟೆ ಚೇತರಿಕೆಯತ್ತ ಮುಖ ಮಾಡಿದ್ದು, ಕೆಲವು ದಿನಗಳಿಂದ ಧಾರಣೆ ಏರುತ್ತಿದೆ. ಸಿಂಗಲ್‌ ಚೋಲ್‌ ಧಾರಣೆ 300 ರೂ. ಹೊಸ್ತಿಲಿಗೆ ತಲುಪಿದೆ. ಇದೇ ವೇಳೆ ಡಬ್ಬಲ್‌ ಚೋಲ್‌ ಧಾರಣೆ ಸ್ಥಿರವಾಗಿ ಮುಂದುವರಿದಿದೆ.

ಹೊಸ ವರ್ಷದ ಆರಂಭದಲ್ಲಿ ಹೊಸ ಮತ್ತು ಹಳೆ ಅಡಿಕೆ ಧಾರಣೆ ಏರಿಳಿಕೆಯಿಂದ ಬೆಳೆಗಾರರಿಗೆ ನಿರಾಶೆ ಮೂಡಿಸಿತ್ತು. ಆದರೆ ಈಗ ಧಾರಣೆ ಚೇತರಿಸುತ್ತಿರುವುದು ಬೆಳೆಗಾರರಲ್ಲಿ ತುಸು ನೆಮ್ಮದಿ ತಂದಿದೆ.

ಮೂರು ತಿಂಗಳಲ್ಲಿ 30-35 ರೂ. ಏರಿಕೆ!
ಪುತ್ತೂರು ಕ್ಯಾಂಪ್ಕೋದಲ್ಲಿ 2019ರ ಆಗಸ್ಟ್‌ನಲ್ಲಿ ಹಿಂದಿನ ವರ್ಷದ ಕೊಯ್ಲಿನ (ಸಿಂಗಲ್‌ ಚೋಲ್‌) ಅಡಿಕೆಗೆ ಕೆ.ಜಿ.ಗೆ 260 ರೂ., ಹೊರ ಮಾರುಕಟ್ಟೆಯಲ್ಲಿ 268 ರೂ. ತನಕ ಇತ್ತು. ನವೆಂಬರ್‌ನಲ್ಲಿ ಅದೇ ಅಡಿಕೆಗೆ ಕೆ.ಜಿ.ಗೆ 290-295 ತನಕ ಇದೆ. ಹೊರ ಮಾರುಕಟ್ಟೆಯಲ್ಲಿ 300 ರೂ. ತನಕವು ಖರೀದಿ ಆಗಿದೆ. ಈ ಅಂಕಿಅಂಶ ಗಮನಿಸಿದರೆ 3 ತಿಂಗಳಲ್ಲಿ ಕಳೆದ ಕೊಯ್ಲಿನ ಅಡಿಕೆ 30ರಿಂದ 35 ರೂ. ತನಕ ಧಾರಣೆ ಏರಿಸಿಕೊಂಡಿದೆ. ಎಪ್ರಿಲ್‌-ನವೆಂಬರ್‌ ನಡುವಿನ ಧಾರಣೆ ಗಮನಿಸಿದರೆ 65ರಿಂದ 70 ರೂ.ಗಳಷ್ಟು ಏರಿಕೆ ಕಂಡಿದೆ. ಆಗಸ್ಟ್‌ನಲ್ಲಿ ಡಬ್ಬಲ್‌ ಚೋಲ್‌ 300ರಿಂದ 305 ರೂ.ಗಳಿಂದ ತನಕ ಖರೀದಿಸಲಾಗಿತ್ತು. ಈಗಲೂ 300 ರೂ. ಆಸುಪಾಸಿನಲ್ಲಿ ಇದ್ದು, ಡಬ್ಬಲ್‌ ಚೋಲ್‌ ಧಾರಣೆಯಲ್ಲಿ ಹೆಚ್ಚಿನ ವ್ಯತ್ಯಾಸ ಕಂಡು ಬಂದಿಲ್ಲ.

ಹೊಸ ಅಡಿಕೆ ಜಿಗಿತ ನಿರೀಕ್ಷೆ
ಇದೇ ಎಪ್ರಿಲ್‌ನಲ್ಲಿ ಕಳೆದ ಕೊಯ್ಲಿನ ಹೊಸ ಅಡಿಕೆ 230ರಿಂದ 235 ರೂ. ತನಕ ಖರೀದಿಯಾಗಿತ್ತು. ಆ ಅಡಿಕೆ ಈಗ ಸಿಂಗಲ್‌ ಚೋಲ್‌ ಆಗಿದೆ. ಈ ವರ್ಷದ ಹೊಸ ಅಡಿಕೆ ಧಾರಣೆ ಕ್ಯಾಂಪ್ಕೋದಲ್ಲಿ ಪ್ರಸ್ತುತ 230 -235 ರೂ. ಆಸುಪಾಸಿನಲ್ಲಿದೆ. ಕಳೆದ ನವೆಂಬರ್‌ಗೆ ಹೋಲಿಸಿದರೆ 10ರಿಂದ 15 ರೂ. ಹೆಚ್ಚಳವಾಗಿದೆ ಅನ್ನುತ್ತಾರೆ ಕೃಷಿಕ ಮಹೇಶ್‌ ಸುಳ್ಯ.

350 ರೂ.ನತ್ತ ಚಿತ್ತ!
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆ ಲೆಕ್ಕಾಚಾರದ ಪ್ರಕಾರ ಸಿಂಗಲ್‌ ಚೋಲ್‌ ಧಾರಣೆ 350 ರೂ. ಗಡಿ ತಲುಪುವ ಸಾಧ್ಯತೆ ಇದೆ. ಅಕಾಲಿಕ ಮಳೆಯಿಂದ ಫಸಲು ದೊರೆಯದಿರುವುದು, ಬೇಡಿಕೆಗೆ ತಕ್ಕಂತೆ ಅಡಿಕೆ ಪೂರೈಕೆ ಆಗದಿರು ವುದು ಏರಿಕೆಗೆ ಕಾರಣ. ಇವೆಲ್ಲದರ ಪರಿಣಾಮ ಮುಂದಿನ ವರ್ಷ ಮಾರು ಕಟ್ಟೆಗೆ ಅಡಿಕೆ ಪೂರೈಕೆ ಕುಸಿ ಯುವ ಸಾಧ್ಯತೆ ಇದ್ದು, ಧಾರಣೆ ಏರಿಕೆಯಾಗಬಹುದು ಎನ್ನಲಾಗಿದೆ.

– ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.