![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ನಾಮಪತ್ರ ಸಲ್ಲಿಸಿದ ಬಳಿಕ ಪ್ರಮಾಣವಚನ: ಕೃಷ್ಣಮೂರ್ತಿ
Team Udayavani, Apr 18, 2018, 10:45 AM IST
![18-April-3.jpg](https://www.udayavani.com/wp-content/uploads/2018/04/18/18-April-3.jpg)
ಪುತ್ತೂರು: ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಯು ನಾಮಪತ್ರ ಸಲ್ಲಿಸಿದ ಅನಂತರ ಪ್ರಮಾಣ ವಚನ ಸ್ವೀಕರಿಸಬೇಕಾಗಿದೆ ಎಂದು ಸಹಾಯಕ ಆಯುಕ್ತ, ಚುನಾವಣಾ ಅಧಿಕಾರಿ ಎಚ್.ಕೆ. ಕೃಷ್ಣಮೂರ್ತಿ ಹೇಳಿದರು. ಪುತ್ತೂರು ಮಿನಿವಿಧಾನ ಸೌಧದ ಸಹಾಯಕ ಆಯಕ್ತರ ಸಭಾಂಗಣದಲ್ಲಿ ನಡೆದ ರಾಜಕೀಯ ಪಕ್ಷಗಳ ಮುಖಂಡರ ಸಭೆಯಲ್ಲಿ ಮಾತನಾಡಿದರು.
ನಾಮಪತ್ರ ಸಲ್ಲಿಸುವ ವೇಳೆ ಸಾಕಷ್ಟು ನಿಯಮಗಳನ್ನು ಅಭ್ಯರ್ಥಿಗೆ ವಿಧಿಸಲಾಗಿದೆ. ಚುನಾವಣಾಧಿಕಾರಿ ಕಚೇರಿಯ 100 ಮೀ. ಒಳಗೆ ಕೇವಲ ಮೂರು ವಾಹನಗಳಿಗೆ ಮಾತ್ರ ಪ್ರವೇಶಕ್ಕೆ ಅವಕಾಶ. ನಾಮಪತ್ರ ಸಲ್ಲಿಸುವ ವೇಳೆ ಚುನಾವಣಾಧಿಕಾರಿ ಕೊಠಡಿ ಒಳಗೆ ಅಭ್ಯರ್ಥಿ ಜತೆ ಇತರ 4 ಮಂದಿ ಪ್ರವೇಶಿಸಬಹುದು ಎಂದು ವಿವರಿಸಿದರು.
ಅಫಿಡವಿಟ್ನ ಕ್ರಮ ಸಂಖ್ಯೆ 3ರಲ್ಲಿ ಅಭ್ಯರ್ಥಿ ಹೊಂದಿರುವ ಅಧಿ ಕೃತ ಸಾಮಾಜಿಕ ಜಾಲತಾಣಗಳ ವಿವರ ನೀಡಬೇಕು. ಸರ್ಕಾರಿ ನೌಕರನಾಗಿ ನಿವೃತ್ತಿ ಹೊಂದಿದಲ್ಲಿ ಅಥವಾ ಸ್ವಯಂ ನಿವೃತ್ತಿ ಬೇಕಿದ್ದಲ್ಲಿ 10 ವರ್ಷಗಳಿಂದ ಸರ್ಕಾರಕ್ಕೆ ನೀಡಬೇಕಾದ ಬಾಕಿ ವಿವರವನ್ನು ಕಡ್ಡಾ ಯವಾಗಿ ಸಲ್ಲಿಸಬೇಕು. ನಾಮಪತ್ರ ಸಲ್ಲಿಸುವ ವೇಳೆ 2 ಪಾಸ್ಪೋರ್ಟ್ ಹಾಗೂ 2 ಸ್ಟಾಂಪ್ ಸೈಜ್ ಭಾವಚಿತ್ರ ಸಲ್ಲಿಸಿಬೇಕು. ಚುನಾವಣಾ ಉದ್ದೇಶಕ್ಕಾಗಿ ಅಭ್ಯರ್ಥಿ ಹೊಸ ಬ್ಯಾಂಕ್ ಖಾತೆ ತೆರೆದು, ಪಾಸ್ ಪುಸ್ತಕದ ಎರಡು ನಕಲು ಪ್ರತಿ ನೀಡಬೇಕೆಂದರು.
ನಾಮಪತ್ರ ಸಲ್ಲಿಕೆ
ಎ. 17ರಿಂದ 24ರ ವರೆಗೆ ರಜಾ ದಿನ ಹೊರತುಪಡಿಸಿ ಉಳಿದ ದಿನಗಳಲ್ಲಿ ಪುತ್ತೂರು ಮಿನಿ ವಿಧಾನಸೌಧದ ಸಹಾಯಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದು. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3ರೊಳಗೆ ಸಲ್ಲಿಕೆ ಆಗಬೇಕು. ಎ. 27 ನಾಮ ಪತ್ರ ಹಿಂತೆಗೆತಕ್ಕೆ ಕೊನೆ ದಿನ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.