ಅ.10 -19: ಮಂಗಳೂರು ದಸರಾ,  ಕುದ್ರೋಳಿ: ಪೂರ್ವಭಾವಿ ಸಭೆ 


Team Udayavani, Sep 19, 2018, 10:53 AM IST

19-sepctember-5.jpg

ಮಹಾನಗರ: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ‘ಮಂಗಳೂರು ದಸರಾ ಮಹೋತ್ಸವ’ ಅ. 10ರಿಂದ 19ರವರೆಗೆ ಜರ ಗಲಿದ್ದು, ಇದರ ಅಂಗವಾಗಿ ಪೂರ್ವಭಾವಿ ಸಭೆ ಶ್ರೀ ಗೋಕರ್ಣನಾಥ ಸಭಾಂಗಣದಲ್ಲಿ ನಡೆಯಿತು.

ಕ್ಷೇತ್ರದ ಅಧ್ಯಕ್ಷ ಎಚ್‌.ಎಸ್‌. ಸಾಯಿರಾಂ ಅಧ್ಯಕ್ಷತೆ ವಹಿಸಿ, ಈ ಬಾರಿಯೂ ಮಂಗಳೂರು ದಸರಾವನ್ನು ವೈಭವದಿಂದ ಆಚರಿಸಲು ತೀರ್ಮಾನಿಸಲಾಗಿದ್ದು, ಇದಕ್ಕೆ ಎಲ್ಲರ ಸಹಕಾರ ಅಗತ್ಯ. ಉತ್ಸವಕ್ಕೆ ಬೀದಿ ದೀಪಾಲಂಕಾರ ನಡೆಸುವ ಕಂಟ್ರ್ಯಾಕ್ಟ್ ದಾರರ ಸಭೆ ಕರೆದು ಚರ್ಚೆ ನಡೆಸಲಾಗಿದೆ. ಈ ಬಾರಿ ವಿದ್ಯುದ್ದೀಪಾಲಂಕಾರವನ್ನು ಮತ್ತಷ್ಟು ವಿಭಿನ್ನ, ವೈಭವವಾಗಿ ರಚಿಸುವಂತೆ ಸೂಚನೆ ನೀಡಲಾಗಿದೆ. ವಿಶೇಷ ಕಾರ್ಯಕ್ರಮಗಳನ್ನು ನಡೆಸಲು ನಿರ್ಧರಿಸಲಾಗಿದ್ದು, ಶೀಘ್ರದಲ್ಲೇ ಇದನ್ನು ಪ್ರಕಟಿಸಲಾಗುವುದು ಎಂದರು.

ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್‌ ಆರ್‌. ಮಾತನಾಡಿ, 10ಕ್ಕೂ ಅಧಿಕ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಈ ಸಮಿತಿ ತಮ್ಮ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಲಿದೆ. ದಸರಾ ಮೆರವಣಿಗೆ ವೈಭವವನ್ನು ಹೆಚ್ಚಿಸುವ ಟ್ಯಾಬ್ಲೋ (ಸ್ತಬ್ಧಚಿತ್ರ)ಗಳು ಬಗ್ಗೆ ಚರ್ಚಿಸಲು ಟ್ಯಾಬ್ಲೋ ಮುಖ್ಯಸ್ಥರ ಸಭೆ ಕರೆಯಲಾಗುವುದು. ಈ ಸಂದರ್ಭ ಮೆರವಣಿಗೆಯನ್ನು ಸಾಂಗವಾಗಿ ನಡೆಸಲು ಕೆಲವೊಂದು ಸೂಚನೆ ನೀಡಲಾಗುವುದು ಎಂದರು.

ದಸರಾ ಸಂದರ್ಭ ಪೂಜಿಸಲ್ಪಡುವ ಮೂರ್ತಿಗಳ ಸಿದ್ಧತಾ ಕಾರ್ಯಗಳು ಸೆ. 13ರಿಂದ ಆರಂಭಗೊಂಡಿದೆ. ದಸರಾ ಮಹೋತ್ಸವ ನಡೆಯುವ ದರ್ಬಾರು ಮಂಟಪವನ್ನು ಈ ಬಾರಿಯೂ ವಿಭಿನ್ನವಾಗಿ ಅಲಂಕರಿಸಲಾಗುವುದು ಎಂದರು.

ಆಡಳಿತ ಸಮಿತಿ ಸದಸ್ಯ ಶೇಖರ್‌ ಪೂಜಾರಿ, ದೇವೇಂದ್ರ ಪೂಜಾರಿ, ಮಾಧವ ಸುವರ್ಣ, ರವಿಶಂಕರ್‌ ಮಿಜಾರು, ಡಿ.ಡಿ. ಕಟ್ಟೆಮಾರ್‌, ಡಾ| ಅನಸೂಯಾ, ಡಾ| ಬಿ.ಜಿ. ಸುವರ್ಣ, ರಾಜ್ಯ ಧಾರ್ಮಿಕ ಪರಿಷತ್‌ ಸದಸ್ಯ ಪದ್ಮನಾಭ ಕೋಟ್ಯಾನ್‌ ಪಡು, ಯುವವಾಹಿನಿ ಅಧ್ಯಕ್ಷ ಜಯಂತ್‌ ನಡುಬೈಲ್‌, ಕಾರ್ಪೊರೇಟರ್‌ಗಳಾದ ರಾಧಾಕೃಷ್ಣ, ದೀಪಕ್‌ ಪೂಜಾರಿ, ನೀಲಾಕ್ಷ ಕರ್ಕೇರ, ಚಿತ್ತರಂಜನ್‌ ಗರೋಡಿ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.