ಅಧಿಕಾರಿಗಳ ನಿರ್ಲಕ್ಷ್ಯ: ಆತಂಕದಲ್ಲಿ ನಗರದ ಜನತೆ
Team Udayavani, Aug 14, 2019, 5:00 AM IST
ನಗರ ವ್ಯಾಪ್ತಿಯ ನಾಗರಿಕ ಸಮಸ್ಯೆಗಳ ನಿಮ್ಮ ದನಿಗೆ ನಮ್ಮ ದನಿ ಸೇರಿಸುವ ಪ್ರಯತ್ನ ಈ ಸುದಿನ ಜನದನಿ. ಓದುಗರು ತಮ್ಮ ಪ್ರದೇಶದ ರಸ್ತೆ, ನೀರು, ಸ್ವಚ್ಛತೆ, ನೈರ್ಮಲ್ಯ, ಮಾಲಿನ್ಯ, ಸಂಚಾರ ವ್ಯವಸ್ಥೆ ಸೇರಿದಂತೆ ಯಾವುದೇ ಸಮಸ್ಯೆ ಕುರಿತು ತಿಳಿಸಬಹುದು. ಈ ಅಂಕಣ ಪ್ರತಿ ಬುಧವಾರ ಪ್ರಕಟವಾಗಲಿದೆ. ವೈಯಕ್ತಿಕ ಸಮಸ್ಯೆ, ಕಾನೂನು ವ್ಯಾಜ್ಯದ ದೂರು ಅಥವಾ ವಿವಾದದಲ್ಲಿರುವ ವಿಷಯಗಳನ್ನು ಪರಿಗಣಿಸುವುದಿಲ್ಲ. ನಾಗರಿಕರು ತಮ್ಮ ಪ್ರದೇಶದ ಸಮಸ್ಯೆಯನ್ನು ಸಂಕ್ಷಿಪ್ತವಾಗಿ ಬರೆದು ಪೂರಕವೆನಿಸುವ ಒಂದು ಫೋಟೊ ಜತೆ ಹೆಸರು, ವಿಳಾಸ ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಅಂಚೆ, ಇಮೇಲ್ ಅಥವಾ ವಾಟ್ಸಪ್ ಮೂಲಕ ಕಳುಹಿಸಬಹುದು. ಅರ್ಹ ದೂರುಗಳನ್ನು ಪ್ರಕಟಿಸಿ, ಸಂಬಂಧಪಟ್ಟ ಇಲಾಖಾಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸುವ ಪ್ರಯತ್ನವನ್ನು ಸುದಿನ ಮಾಡಲಿದೆ.
ತೋಡು ಹೂಳೆತ್ತದೆ ಸಮಸ್ಯೆ
ಗರದ ಫಳ್ನೀರು ಬಳಿಯ ಇಂದಿರಾ ಆಸ್ಪತ್ರೆ ಬಳಿ ಮಳೆ ನೀರು ಹರಿಯುವ ತೋಡಿನಲ್ಲಿ ಹೂಳು, ಕಸ ತುಂಬಿಕೊಂಡಿರುವುದರಿಂದ ನೀರು ಸರಾಗವಾಗಿ ಹರಿಯದೆ ಮನೆಯ ಕಂಪೌಂಡ್ ಬಳಿ ಹರಿಯುತ್ತಿದೆ. ಇದರಿಂದಾಗಿ ಮನೆ ಮಂದಿ ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಪ್ರದೇಶದಲ್ಲಿ ಮಹಾನಗರ ಪಾಲಿಕೆಯು ಮಳೆಗಾಲಕ್ಕೂ ಮುನ್ನ ತೋಡಿನಲ್ಲಿ ಹೂಳು ತೆಗೆಯುವ ಕೆಲಸ ಮಾಡಬೇಕಿತ್ತು. ಆದರೆ, ಮಹಾನಗರ ಪಾಲಿಕೆಯ ನಿರ್ಲಕ್ಷ್ಯದಿಂದಾಗಿ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ.
ಜೋರಾಗಿ ಮಳೆ ಬಂದರೆ, ಮಳೆ ನೀರು ತೋಡಿನಿಂದ ಮೇಲ್ಭಾಗಕ್ಕೆ ಬರುತ್ತದೆ. ಇದರಿಂದಾಗಿ ಅಕ್ಕಪಕ್ಕದ ಮನೆಯಲ್ಲಿ ಸೊಳ್ಳೆ ಕಾಟ ಹೆಚ್ಚಾಗಿದೆ. ಮಹಾನಗರ ಪಾಲಿಕೆ ಈ ಬಗ್ಗೆ ಕೂಡಲೇ ಗಮನಹರಿಸಬೇಕಿದೆ.
-ಮೆಟಿಲ್ಡಾ ವೇಗಸ್, ಪಳ್ನೀರು
ಗೋಡೆ ತೆರವುಗೊಳಿಸಿ
ಸುರತ್ಕಲ್ನ ಹೊಸಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಕೆಲವು ವರ್ಷಗಳಿಂದ ಮುಚ್ಚಲ್ಪಟ್ಟ ಐಸ್ ಪ್ಲಾಂಟ್ವೊಂದರ ಮೇಲ್ಛಾವಣಿ ಮಳೆಗೆ ಕೆಳಗೆ ಬಿದ್ದಿದೆ. ಇದರಿಂದಾಗಿ ಗೋಡೆಯು ಯಾವುದೇ ಸಮಯದಲ್ಲಿ ರಸ್ತೆಗೆ ಬೀಳುವ ಸಂಭವವಿದೆ. ಈ ರಸ್ತೆಯಲ್ಲಿ ಹಲವಾರು ಶಾಲಾ ವಿದ್ಯಾರ್ಥಿಗಳು ಚಲಿಸುತ್ತಾರೆ. ಶಾಲಾ ವಾಹನ ಸೇರಿ ಹತ್ತಾರು ವಾಹನಗಳು ಇದೇ ರಸ್ತೆಯಲ್ಲಿ ಸಂಚರಿಸುತ್ತವೆ. ಬಿದ್ದಿರುವ ಗೋಡೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಸಂಬಂಧಪಟ್ಟವರು ಕೂಡಲೇ ಈ ಬಗ್ಗೆ ಗಮನಹರಿಸಬೇಕಿದೆ.
ಸುದೇಶ್, ಹೊಸಬೆಟ್ಟು
ಕಸದ ಸಮಸ್ಯೆ ಬಗೆಹರಿಸಿ
ಕಾವೂರು ಗಾಂಧೀನಗರದಲ್ಲಿನ ಮಲ್ಲಿ ಲೇಔಟ್ನಲ್ಲಿ ಕಳೆದ ಕೆಲ ದಿನಗಳಿಂದ ಕಸದ ಸಮಸ್ಯೆ ಇದೆ. ಈ ಪ್ರದೇಶಕ್ಕೆ ಪ್ರತೀದಿನ ಕಸದ ವಾಹನ ಬರದೆ ಇರುವುದರಿಂದ ಸಾರ್ವಜನಿಕರು ರಸ್ತೆ ಬದಿಯಲ್ಲೇ ಕಸ ಬಿಸಾಡುತ್ತಿದ್ದಾರೆ. ಕಸ ಹಾಕಲು ಈ ಪ್ರದೇಶದಲ್ಲಿ ಮಹಾನಗರಪಾಲಿಕೆಯು ಕಸದಬುಟ್ಟಿಯನ್ನು ಕೂಡ ಇಟ್ಟಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ