ಮಕ್ಕಳ ಕೇಕೆ, ನಗು, ಕುಣಿತಕ್ಕೆ ಸಾಕ್ಷಿಯಾಯಿತು ಕದ್ರಿಪಾರ್ಕ್‌


Team Udayavani, Aug 11, 2018, 9:57 AM IST

11-agust-1.jpg

ಕದ್ರಿಪಾರ್ಕ್‌: ಶುಕ್ರವಾರ ಸಂಜೆ ನಗರದ ಕದ್ರಿ ಪಾರ್ಕ್‌ ತುಂಬೆಲ್ಲಾ ಮಕ್ಕಳ ನಗು, ಕೇಕೆ, ಕುಣಿತದ್ದೇ ಸಂಭ್ರಮ.. ಪಕ್ಕದಲ್ಲಿ ನಿಂತ ಜನರತ್ತ ಕೈ ಬೀಸುತ್ತಾ, ಸಂಭ್ರಮಿಸುತ್ತಾ ರೈಲಿನಲ್ಲಿ ಸಂಚರಿಸಿ ಖುಷಿಪಟ್ಟರು. ಮಕ್ಕಳ ಮನೋರಂಜನೆಯ ಭಾಗವಾಗಿದ್ದ ಬಾಲ ಮಂಗಳ ಎಕ್ಸ್‌ಪ್ರೆಸ್‌ ನೂತನ ಪುಟಾಣಿ ರೈಲು ಪುನರಾರಂಭಿಸಿರುವುದೇ ಮಕ್ಕಳ ಈ ಸಂಭ್ರಮಕ್ಕೆ ಕಾರಣ.

ಶುಕ್ರವಾರ ನೂತನ ಬಾಲಮಂಗಳ ಎಕ್ಸ್‌ಪ್ರೆಸ್‌ ಪುಟಾಣಿ ರೈಲು ಮಕ್ಕಳನ್ನು ತುಂಬಿಕೊಂಡು ಕದ್ರಿಪಾರ್ಕ್‌ನಲ್ಲಿ ಸಂಚರಿಸುವ ಮೂಲಕ ಅಧಿಕೃತ ಸಂಚಾರ ಆರಂಭಿಸಿತು. ಸಂಜೆ ಸಂಚಾರ ಆರಂಭಿಸಿದ ಪುಟಾಣಿ ರೈಲಿನಲ್ಲಿ ದ.ಕ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಸುಂದರ ಪೂಜಾರಿ ಮತ್ತು ಇತರ ಅಧಿಕಾರಿ, ಸಿಬಂದಿ ಮಕ್ಕಳೊಂದಿಗೆ ರೈಲಿನಲ್ಲಿ ಪ್ರಯಾಣಿಸಿ ಖುಷಿ ಪಟ್ಟರು.

ಎಂಟು ವರ್ಷಗಳಿಂದ ಓಡಾಟ ನಿಲ್ಲಿಸಿದ್ದ ಬಾಲ ಮಂಗಳ ಎಕ್ಸ್‌ಪ್ರೆಸ್‌ ಪುಟಾಣಿ ರೈಲು, ಕೊನೆಗೂ ಡಿ. 22ರಂದು ಕದ್ರಿ ಪಾರ್ಕ್ಗೆ ಹೊಸದಾಗಿ ನಿರ್ಮಾಣಗೊಂಡು ಆಗಮಿಸಿತ್ತು. ಜ. 7ರಂದು ಓಡಾಟಕ್ಕೆ ಚಾಲನೆ ದೊರಕಿತ್ತಾದರೂ ಸ್ವಲ್ಪ ಸಮಯ ಪ್ರಾಯೋಗಿಕ ಓಡಾಟ ನಡೆಸಿ ಬಳಿಕ ನಿಲುಗಡೆಗೊಂಡಿತ್ತು. ಪಾರ್ಕ್‌ನ ಉತ್ತರ ಭಾಗದಲ್ಲಿ ಹಾದು ಹೋಗುವ ರೈಲು ಹಳಿಯ ಬಳಿಯಲ್ಲಿರುವ 4 ಬಾಟಲ್‌ ಪಾಮ್‌ ಮರ (ಅಲಂಕಾರಿಕ ಮರ)ಗಳು ಮಕ್ಕಳ ಕೈಗೆ ತಾಗುತ್ತಿದ್ದ ಪರಿಣಾಮ ರೈಲು ಓಡಾಟ ನಿಲುಗಡೆಗೊಳಿಸಲಾಗಿತ್ತು. ಇದೀಗ ಜಿಲ್ಲಾಧಿಕಾರಿಯವರ ಅನುಮತಿಯೊಂದಿಗೆ ಆ ಮರಗಳನ್ನು ಕಡಿಯಲಾಗಿದ್ದು, ಈ ಹಿನ್ನೆಲೆಯಲ್ಲಿ ಪುಟಾಣಿ ರೈಲು ಓಡಾಟವನ್ನು ಶುಕ್ರವಾರದಿಂದ ಪುನರಾರಂಭಿಸಲಾಯಿತು.

ಖುಷಿಯಿಂದ ರೈಲು ಸಂಚಾರ
‘ಪುಟಾಣಿ ರೈಲು ಓಡಾಟಕ್ಕೆ ಅಡ್ಡಿಯಾಗಿದ್ದ ಬಾಟಲ್‌ ಪಾಮ್‌ ಮರಗಳನ್ನು ಕಡಿಯಲಾಗಿದೆ. ಶುಕ್ರವಾರದಿಂದ ಪುಟಾಣಿ ರೈಲು ತನ್ನ ಓಡಾಟವನ್ನು ಪುನರಾರಂಭಗೊಳಿಸಿದೆ. ಮಕ್ಕಳೂ ಖುಷಿಯಿಂದಲೇ ರೈಲು ಸಂಚಾರ ನಡೆಸಿದರು. ಸದ್ಯಕ್ಕೆ ರೈಲಿನ ಪ್ರಯಾಣಕ್ಕೆ ದರ ನಿಗದಿ ಮಾಡಿಲ್ಲ’ ಎಂದು ದ.ಕ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಸುಂದರ ಪೂಜಾರಿ ತಿಳಿಸಿದ್ದಾರೆ.

ಸುದಿನ ವರದಿ ಮಾಡಿತ್ತು
ಪುಟಾಣಿ ರೈಲು ಓಡಾಟ ನಡೆಸದಿರುವ ಬಗ್ಗೆ ‘ಉದಯವಾಣಿ-ಸುದಿನ’ ಈ ಹಿಂದೆ ಹಲವು ಬಾರಿ ವರದಿ ಮಾಡಿತ್ತು. ರೈಲು ಓಡಾಟಕ್ಕೆ ಸಿದ್ಧವಾಗಿದ್ದರೂ ಅಡ್ಡಿಯಾಗುತ್ತಿರುವ ಬಾಟಲ್‌ ಪಾಮ್‌ ಮರಗಳನ್ನು ಕಡಿಯಲು ಜಿಲ್ಲಾಧಿಕಾರಿಯವರು ಅನುಮತಿ ನೀಡಿರುವ ಬಗ್ಗೆಯೂ ‘ಪುಟಾಣಿ ರೈಲು ಓಡಾಟಕ್ಕೆ ಬಾಟಲ್‌ ಪಾಮ್‌ ಮರ ಅಡ್ಡಿ: ಕಡಿಯಲುಡಿಸಿ ಅನುಮತಿ; ಕಡಿದ ಮರಕ್ಕೆ ಬದಲಾಗಿ ಗಿಡ ನೆಡಲಿದೆ ತೋಟಗಾರಿಕಾ ಇಲಾಖೆ’ ಎಂಬ ತಲೆಬರಹದಡಿ ಜು. 23ರಂದು ವರದಿ ಮಾಡಿ ಸಂಬಂಧಪಟ್ಟವರ ಗಮನ ಸೆಳೆಯಲಾಗಿತ್ತು. ಇದೀಗ ಶುಕ್ರವಾರ ಈ ರೈಲು ತನ್ನ ಅಧಿಕೃತ ಓಡಾಟ ಆರಂಭಿಸಿದೆ.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.