ವೃದ್ಧೆ ಮೇಲೆ ಮಗ, ಮೊಮ್ಮಗನ ಅಮಾನುಷ ಹಲ್ಲೆ: ಆರೋಪಿಗಳು ವಶಕ್ಕೆ ; ಸ್ವಯಂಪ್ರೇರಿತ ದೂರು ದಾಖಲು


Team Udayavani, Jul 17, 2020, 9:07 PM IST

ವೃದ್ಧೆ ಮೇಲೆ ಮಗ, ಮೊಮ್ಮಗನ ಅಮಾನುಷ ಹಲ್ಲೆ: ಆರೋಪಿಗಳು ವಶಕ್ಕೆ ; ಸ್ವಯಂಪ್ರೇರಿತ ದೂರು ದಾಖಲು

ಮಗ ಮತ್ತು ಮೊಮ್ಮಗನಿಂದ ಹಲ್ಲೆಗೊಳಗಾದ ಅಜ್ಜಿಯನ್ನು ಆಸ್ಪತ್ರೆಗೆ ಸಾಗಿಸುತ್ತಿರುವ ಸ್ಥಳಿಯರು.

ಬೆಳ್ತಂಗಡಿ: ಅನಾರೋಗ್ಯ ಪೀಡಿತ ವಯೋವೃದ್ಧೆ ಮೇಲೆ ಮಗ ಮತ್ತು ಮೊಮ್ಮಗ ಹಿಂಸಾತ್ಮಕವಾಗಿ ಹಲ್ಲೆ ನಡೆಸಿರುವ ವಿಡಿಯೋವೊಂದು ಶುಕ್ರವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

ಈ ವಿಚಾರವಾಗಿ ಆರೋಪಿಗಳ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಾಗಿದೆ.

ಸವಣಾಲು ಗ್ರಾಮದ ಹಲಸಿನಕಟ್ಟೆ 5 ಸೆನ್ಸ್‌ ನಿವಾಸಿ ವಯೋವೃದ್ಧೆ ಅಪ್ಪಿ ಶೆಡ್ತಿ (70) ಮೇಲೆ ಹಲ್ಲೆ ನಡೆಸಿದ್ದ ಆರೋಪಿಗಳಾದ ಮಗ ಶ್ರೀನಿವಾಸ ಶೆಟ್ಟಿ, ಮೊಮ್ಮಗ ಪ್ರದೀಪ ಶೆಟ್ಟಿ ಅವರನ್ನು ಬಂಧಿಸಲಾಗಿದೆ.

ಘಟನೆ ವಿವರ
ಸೂಲಗಿತ್ತಿಯಾಗಿದ್ದ ವಯೋವೃದ್ಧೆ ಅಪ್ಪಿ ಶೆಡ್ತಿ ಸವಣಾಲು ಗ್ರಾಮದಲ್ಲಿ ಚಿರಪರಿಚಿತೆ. ಸುತ್ತಮುತ್ತ ಹಳ್ಳಿಯಲ್ಲಿ ಸೀಮಿತ ಆಸ್ಪತ್ರೆಗಳಿದ್ದ ಕಾಲದಿಂದ ಹೆರಿಗೆಗೆ ಪ್ರಕ್ರಿಯೆ ನಡೆಸುತ್ತಿದ್ದರು. ಸುಮಾರು 500ಕ್ಕೂ ಮಿಕ್ಕಿ ಹೆರಿಗೆ ಮಾಡಿಸಿದ ಈ ಅಜ್ಜಿಗೆ ಕಳೆದ 3 ವರ್ಷಗಳಿಂದ ಮೈ ಹುಷಾರಿಲ್ಲದ ಕಾರಣದಿಂದ ಮನೆಯಲ್ಲೇ ವಿಶ್ರಾಂತಿಯಲ್ಲಿದ್ದಾರೆ.


ಮಲಗಿದ್ದ ಅಜ್ಜಿಗೆ ಮಗ ಹಾಗೂ ಮೊಮ್ಮಗ ಮದ್ಯ ಸೇವಿಸಿ ಕಳೆದ ಮೂರು ದಿನಗಳ ಹಿಂದೆ ಹಲ್ಲೆ ನಡೆಸಿದ್ದಲ್ಲದೆ ಎಳೆದೊಯ್ದು ಎತ್ತಿ ನೆಲಕ್ಕೆ ಅಪ್ಪಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

ಈ ವಿಚಾರವಾಗಿ ಖಂಡನೆಗಳು ಬಂದಿದ್ದು, ಪೊಲೀಸರಿಗೂ ಮಾಹಿತಿ ತಿಳಿದ ತತ್‌ಕ್ಷಣ ಬೆಳ್ತಂಗಡಿ ಬೆಳ್ತಂಗಡಿ ವೃತ್ತ ನಿರೀಕ್ಷಕ ಸಂದೇಶ ಪಿ.ಜಿ. ಹಾಗೂ ಎಸ್‌.ಐ. ನಂದಕುಮಾರ್‌ ಆರೋಪಿಗಳನ್ನು ಬಂಧಿಸಿ ಕಲಂ: 323, 504 ಐಪಿಸಿ ಮತ್ತು 24 ಕಾಯ್ದೆ 2007ರಂತೆ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳನ್ನು ನಾಳೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.

ಅಜ್ಜಿ ಆಸ್ಪತ್ರೆಗೆ
ಮಗ ಮತ್ತು ಮೊಮ್ಮಗನಿಂದ ಹಲ್ಲೆಗೊಳಗಾದ ಅಜ್ಜಿಯನ್ನು ಪೊಲೀಸರ ಸೂಚನೆಯಂತೆ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ ಉಪಚಾರ ಮಾಡಲಾಗಿದೆ.

ಟಾಪ್ ನ್ಯೂಸ್

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.