ಹಳೆಯಂಗಡಿ: ಹೆದ್ದಾರಿಯಲ್ಲಿಯೇ ತ್ಯಾಜ್ಯ ನೀರು
Team Udayavani, Dec 21, 2017, 1:15 PM IST
ಹಳೆಯಂಗಡಿ: ಇಲ್ಲಿನ ರಾ. ಹೆದ್ದಾರಿಯಲ್ಲಿಯೇ ಚರಂಡಿಯ ಮೂಲಕ ತ್ಯಾಜ್ಯ ನೀರು ಹರಿದು ಪರಿಸರದಲ್ಲಿ ದುರ್ವಾಸನೆ ಉಂಟಾಗಿದ್ದು, ಸ್ಥಳೀಯ ನಿವಾಸಿಗಳು ಹಳೆಯಂಗಡಿ ಗ್ರಾ.ಪಂ.ಗೆ ದೂರು ನೀಡಿ ಸಂಬಂ ಧಿಸಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.
ಮೂರು ದಿನಗಳಿಂದ ಹಳೆಯಂಗಡಿ ಹೆದ್ದಾರಿ ಬಳಿಯ ನೇಕಾರ ಮಹಲ್ನ ಮುಂಭಾಗದಿಂದ ಖಾಸಗಿ ನರ್ಸರಿಯೊಂದರ ಮುಂಭಾಗದವರೆಗೆ ಕೊಳಚೆ ನೀರು ಹರಿಯುತ್ತಿದೆ. ಸ್ಥಳೀಯರ ಪ್ರಕಾರ ಈ ತ್ಯಾಜ್ಯ ನೀರು ಶೌಚಾಲಯಕ್ಕೆ ಸಂಬಂ ಧಿಸಿದ್ದಾಗಿದ್ದು, ಚರಂಡಿಯಲ್ಲಿ ಹರಿದು ನೇರವಾಗಿ ಸುತ್ತಮುತ್ತ ಪರಿಸರದಲ್ಲಿ ಹರಡುತ್ತಿದೆ ಅಲ್ಲದೇ ಹೆದ್ದಾರಿಗೂ ಸಹ ಹರಿಯುತ್ತಿರುವುದರಿಂದ ವಾಹನಗಳು ಸಂಚರಿಸುವಾಗ ಪಾದಾಚಾರಿಗಳಿಗೆ ಕೆಸರಿನಂತೆ ಸಿಂಪಡನೆ ಆಗುತ್ತಿದೆ ಎಂದು
ದೂರಿಕೊಂಡಿದ್ದಾರೆ.
ಇದೇ ರೀತಿಯಲ್ಲಿ ನಿರಂತರವಾಗಿ ಹರಿದರೇ ಈ ಭಾಗದಲ್ಲಿ ರೋಗಗಳು ಹರಡುವುದು ನಿಶ್ಚಿತ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಹಳೆಯಂಗಡಿ ಹೆದ್ದಾರಿಯಲ್ಲಿ ಅಲ್ಲಲ್ಲಿ ತ್ಯಾಜ್ಯ ಬಿಸಾಡುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇದೀಗ ಕೊಳಚೆ ನೀರಿನ ಸಮಸ್ಯೆಗೂ ಪಂಚಾಯತ್ ಸೂಕ್ತ ಪರಿಹಾರ ನೀಡಬೇಕಾಗಿದೆ.
ಕಾನೂನು ಕ್ರಮ
ಸ್ಥಳೀಯರು ನೀಡಿದ ದೂರಿನಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ. ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರಿನ ಮೂಲದ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ. ತತ್ ಕ್ಷಣ ಸಂಬಂ ಧಿಸಿದವರಿಗೆ ನೋಟೀಸ್ ನೀಡಲಾಗುವುದು. ಸ್ಪಂದಿಸದಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು.
– ಅಬೂಬಕ್ಕರ್
ಪಿಡಿಒ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’
Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ
Kerala “ವೆಸ್ಟ್ನೈಲ್’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ
ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ
Mulki ಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ಪ್ರಿಯತಮನೂ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ
Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ
Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ
Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್
Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು