ಒಮಿಕ್ರಾನ್ ಭೀತಿ: ವಿದೇಶದಿಂದ ಹಲವರ ಪ್ರಯಾಣ ರದ್ದು
Team Udayavani, Dec 5, 2021, 6:38 AM IST
ಮಂಗಳೂರು: ಒಮಿಕ್ರಾನ್ ಆತಂಕವು ವಿಮಾನ ಪ್ರಯಾಣಿಕರ ಮೇಲೆ ಪ್ರತಿಕೂಲ ಪರಿಣಾಮ ಬೀರಿದ್ದು, ಅಂತಾರಾಷ್ಟ್ರೀಯ ವಿಮಾನ ಯಾನಿಗಳ ಸಂಖ್ಯೆಯನ್ನು ಕಡಿತ ಮಾಡಿದೆ.
ಮಂಗಳೂರಿಗೆ ಕೊಲ್ಲಿ ರಾಷ್ಟ್ರಗಳಿಂದ ಅಂತಾರಾಷ್ಟ್ರೀಯ ವೈಮಾನಿಕ ಸೇವೆ ಇದ್ದು, ಈಗ ಕೇಂದ್ರ ಸರಕಾರದ ವಂದೇ ಭಾರತ್ ಯೋಜನೆಯಡಿ ಮಾತ್ರ ದಿನಂಪ್ರತಿ 2 ಅಥವಾ 3 ವಿಮಾನಗಳು ಮಾತ್ರ ಆಗಮಿಸುತ್ತಿವೆ. ಅಂತಾರಾಷ್ಟ್ರೀಯ ವಿಮಾನ ಯಾನವನ್ನು ಒಮಿಕ್ರಾನ್ ಭೀತಿಯಿಂದಾಗಿ ಮುಂದೂಡಲಾಗಿದೆ.
ಕ್ರಿಸ್ಮಸ್ ಮತ್ತು ಇತರ ಸಮಾರಂಭಗಳಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸಲು ಮುಂಗಡ ಟಿಕೆಟ್ ಕಾದಿರಿಸಿದವರ ಪೈಕಿ ಕೆಲವರು ಯಾನವನ್ನು ರದ್ದುಪಡಿಸಿದರೆ ಕೆಲವರು ಮುಂದೂಡಿದ್ದಾರೆ. ಉಡುಪಿ ಜಿಲ್ಲಾಡಳಿತವು ವಿದೇಶಿ ಪ್ರಯಾಣಿಕರು ಬಂದರೆ ಕ್ವಾರಂಟೈನ್ ಆಗಬೇಕೆಂದು ಹೇಳಿರುವುದು ಕೂಡ ಅನಿವಾಸಿಗಳು ಪ್ರಯಾಣವನ್ನು ಮುಂದೂಡಲು ಕಾರಣ.
ಪ್ರಸ್ತುತ ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿದೇಶಗಳಿಂದ ಬರುವ ಪ್ರಯಾಣಿಕರಿಗೆ ರ್ಯಾಂಡಮ್ ಆಗಿ ವೈದ್ಯಕೀಯ ತಪಾಸಣೆ ನಡೆಸಲಾಗುತ್ತದೆ. ಆದರೆ ಅವರು ವಿದೇಶದಿಂದ ವಿಮಾನ ಏರುವಾಗ ಆರ್ಟಿಪಿಸಿಆರ್ ನೆಗೆಟಿವ್ ಪ್ರಮಾಣ ಪತ್ರ ಹೊಂದಿರಬೇಕಾಗುತ್ತದೆ.
ಮಂಗಳೂರು ನಿಲ್ದಾಣದಲ್ಲಿ ರ್ಯಾಂಡಮ್ ಆಗಿ 100 ಮಂದಿಯಲ್ಲಿ ಇಬ್ಬರು ಅಥವಾ ನಾಲ್ವರಿಗೆ ತಪಾಸಣೆ ನಡೆಸಲಾಗುತ್ತಿದ್ದು, ಈ ತಪಾಸಣೆಯ ಖರ್ಚನ್ನು ತಪಾಸಣೆಗೆ ಒಳಗಾದವರೇ ಭರಿಸಬೇಕಾಗುತ್ತದೆ.
ಮಂಗಳೂರಿನಿಂದ ಯುಎಇಗೆ ಹೋಗುವವರು 48 ಗಂಟೆಗಳ ಆರ್ಟಿಪಿಸಿಆರ್ ಟೆಸ್ಟ್ ನೆಗೆಟಿವ್ ಪ್ರಮಾಣ ಪತ್ರ ಮಾತ್ರವಲ್ಲದೆ ವಿಮಾನ ನಿಲ್ದಾಣದಲ್ಲಿ ರ್ಯಾಟ್ ಟೆಸ್ಟ್ಗೆ ಒಳಪಡಬೇಕು, ನೆಗೆಟಿವ್ ಪ್ರಮಾಣ ಪತ್ರ ಹೊಂದಿರುವುದು ಕಡ್ಡಾಯ. ಆದರೆ ಕತಾರ್, ದೋಹಾ, ಕುವೈಟ್ ಪ್ರಯಾಣಿಕರಿಗೆ ರ್ಯಾಟ್ ಟೆಸ್ಟ್ನ ಅಗತ್ಯ ಇಲ್ಲ. 48 ಗಂಟೆಗಳ ಆರ್ಟಿಪಿಸಿಆರ್ ಟೆಸ್ಟ್ ನೆಗೆಟಿವ್ ಪ್ರಮಾಣ ಪತ್ರ ಮಾತ್ರ ಸಾಕು.
ಆಫ್ರಿಕಾ, ಲಂಡನ್, ಅಮೆರಿಕ ಮತ್ತಿತರ ದೇಶಗಳಿಂದ ಮಂಗಳೂರಿಗೆ ನೇರ ವಿಮಾನ ಯಾನ ಇಲ್ಲ. ಈ ದೇಶಗಳಿಂದ ಮಂಗಳೂರಿಗೆ ಬರುವವರು ದುಬಾೖ ಅಥವಾ ಮುಂಬಯಿ, ಬೆಂಗಳೂರು ಮೂಲಕ ಪ್ರಯಾಣಿಸಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ